ಭೀಮೆಗೆ 1.6 ಲಕ್ಷ ಕ್ಯುಸೆಕ್‌ ನೀರು: ಯಾದಗಿರಿ ದೇಗುಲಗಳು ಜಲಾವೃತ

Published : Aug 07, 2024, 07:31 AM ISTUpdated : Aug 07, 2024, 09:26 AM IST
ಭೀಮೆಗೆ 1.6 ಲಕ್ಷ ಕ್ಯುಸೆಕ್‌ ನೀರು: ಯಾದಗಿರಿ ದೇಗುಲಗಳು ಜಲಾವೃತ

ಸಾರಾಂಶ

ಕಲಬುರಗಿ ಜಿಲ್ಲೆಯ ಮಣ್ಣೂರಿನ ವೇದೇಶತೀರ್ಥ ಸಂಸ್ಕೃತ ಪಾಠಶಾಲೆಗೆ ನೀರು ನುಗ್ಗಿದ್ದು, 25ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ. ಹೊಸಪೇಟೆ ಬಳಿ ತುಂಗಭದ್ರಾ ನದಿಗೆ ಪ್ರವಾಹ ಬಂದಿದ್ದು, ಪ್ರವಾಹದಲ್ಲಿ ಸಿಲುಕಿದ್ದ ಏಳು ನಾಯಿಗಳನ್ನು ರಕ್ಷಿಸಲಾಗಿದೆ.

ಬೆಂಗಳೂರು(ಆ.07):  ಕಾರವಾರ, ಗೋಕರ್ಣ, ಕೋಲಾರ, ಬೆಂಗಳೂರು ಸೇರಿ ರಾಜ್ಯದ ಕೆಲವೆಡೆ ಮಂಗಳವಾರವೂ ಭಾರೀ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಿದ್ದು, ಅಂಕೋಲಾದಲ್ಲಿ ಮನೆಯೊಂದು ಕುಸಿದು ಬಿದ್ದಿದೆ. 

ಗೋಕರ್ಣದಲ್ಲಿ ರಥಬೀದಿ ಸೇರಿ ಹಲವು ರಸ್ತೆಗಳು ಜಲಾವೃತಗೊಂಡಿವೆ. ಕೋಲಾರದಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನರು ಪರದಾಡುವಂತಾಗಿದೆ. ಉಜನಿ ಜಲಾಶಯದಿಂದ ಭೀಮಾ ನದಿಗೆ 1.60 ಲಕ್ಷ ಕ್ಯುಸೆಕ್‌ ನೀರನ್ನು ಬಿಡಲಾಗುತ್ತಿದೆ. ಇದರಿಂದಾಗಿ ಯಾದಗಿರಿ ಸಮೀಪದ ಭೀಮಾ ನದಿಪಾತ್ರದ ವೀರಾಂಜನೇಯ, ಕಂಗಳೇಶ್ವರ ದೇವಸ್ಥಾನಗಳು ಜಲಾವೃತಗೊಂಡಿವೆ. 

ಕರ್ನಾಟಕದ ಶೇ. 67ರಷ್ಟು ಕೆರೆಗಳಲ್ಲಿ ಅರ್ಧದಷ್ಟೂ ನೀರಿಲ್ಲ..!

ಕಲಬುರಗಿ ಜಿಲ್ಲೆಯ ಮಣ್ಣೂರಿನ ವೇದೇಶತೀರ್ಥ ಸಂಸ್ಕೃತ ಪಾಠಶಾಲೆಗೆ ನೀರು ನುಗ್ಗಿದ್ದು, 25ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ. ಹೊಸಪೇಟೆ ಬಳಿ ತುಂಗಭದ್ರಾ ನದಿಗೆ ಪ್ರವಾಹ ಬಂದಿದ್ದು, ಪ್ರವಾಹದಲ್ಲಿ ಸಿಲುಕಿದ್ದ ಏಳು ನಾಯಿಗಳನ್ನು ರಕ್ಷಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಲೀಚೆಟ್ ಸಂಸ್ಕರಣಾ ಘಟಕ:ಬೆಂಗಳೂರಲ್ಲಿ ಜಟಿಲವಾಗಿರುವ ಕಸದ ಸಮಸ್ಯೆಗೆ ಕೊನೆಗೂ ಮುಕ್ತಿ !
ಇಂಡಿಗೋ ವಿಮಾನ ರದ್ದು, ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ನೂಕು ನುಗ್ಗಲು, ಟಿಕೆಟ್ ಬೆಲೆ 15ರಿಂದ 80,000ಕ್ಕೆ ಏರಿಕೆ