
ಬೆಂಗಳೂರು, (ಅ.15): ಮುಸ್ಲಿಂ ಸಮುದಾಯಕ್ಕೆ ನೀಡಲಾಗಿರುವ ಶಾದಿಭಾಗ್ಯ ರೀತಿಯಲ್ಲಿ ಇತರೆ ಜನಾಂಗದ ಆರ್ಥಿಕವಾಗಿ ಹಿಂದುಳಿದ ಬಡವರಿಗಾಗಿ ಉಚಿತ ಸಾಮೂಹಿಕ ವಿವಾಹ ಯೋಜನೆಯನ್ನು ಬಿಜೆಪಿ ಸರ್ಕಾರ ಜಾರಿಗೆ ತರಲು ಮುಂದಾಗಿದೆ.
ಮುಜರಾಯಿ ಇಲಾಖೆ ನೇತೃತ್ವದಲ್ಲಿ ಪ್ರತಿ ವರ್ಷ 10 ಸಾವಿರ ಉಚಿತ ಸಾಮೂಹಿಕ ಮದುವೆ ಮಾಡಿಸುವ ನೂತನ ಯೋಜನೆ ಇದಾಗಿದ್ದು, ಇದರ ಸಿದ್ಧತೆಯೂ ಆರಂಭವಾಗಿದೆ.
ಬಿಪಿಎಲ್ ಕುಟುಂಬಕ್ಕೆ ಲ್ಯಾಬ್ ತಪಾಸಣೆ ಉಚಿತ!
ರಾಜ್ಯದ 'A' ದರ್ಜೆಯ 100 ದೇವಾಲಯಗಳಲ್ಲಿ ತಲಾ ಒಂದೊಂದು ದೇವಾಲಯದಲ್ಲಿ ಪ್ರತಿ ವರ್ಷ 100 ಜೋಡಿಗೆ ಮದುವೆ ಮಾಡಿಸುವ ಮುಜರಾಯಿ ಇಲಾಖೆ ನಿರ್ಧರಿಸಿದೆ.
ಹೀಗೆ ಪ್ರತಿ ವರ್ಷ 10 ಸಾವಿರ ಜೋಡಿಗೆ ಮದುವೆ ಮಾಡಿಸುವ ಯೋಜನೆ ಇದಾಗಿದೆ. ಯಾವುದೇ ಜಾತಿ-ಭೇದವಿಲ್ಲದೆ, ಎಲ್ಲಾ ವರ್ಗದ ಬಡವರಿಗಾಗಿ ಈ ಯೋಜನೆ ಜಾರಿಗೆ ತರಲಾಗುತ್ತಿದ್ದು, ಹಿಂದು ಸಂಪ್ರದಾಯದಂತೆ ವಿವಾಹ ನಡೆಯಲಿದೆ.
ಒಂದು ಜೋಡಿಗೆ 25-30 ಸಾವಿರ ಖರ್ಚಾಗಲಿದ್ದು, ಪ್ರತಿ ವರ್ಷ 25-30 ಕೋಟಿ ರೂ. ಈ ಯೋಜನೆಗೆ ಖರ್ಚಾಗಲಿದೆ. ಹಾಗೆಯೇ ವಧು-ವರರಿಗೆ ವಸ್ತ್ರ, ಮಾಂಗಲ್ಯ, ಆರ್ಥಿಕ ಸಹಾಯ ಸರ್ಕಾರವೇ ನೀಡಲಿದೆ.
A ದರ್ಜೆ ದೇಗುಲಗಳಲ್ಲಿ ಮದ್ವೆ
ಚಾಮುಂಡೇಶ್ವರಿ, ಕಟೀಲು ದುರ್ಗೆ, ನಂಜನಗೂಡು ನಂಜುಂಡೇಶ್ವರ, ಕುಕ್ಕೆ ಸುಬ್ರಹ್ಮಣ್ಯ, ಮಲೆ ಮಹದೇಶ್ವರ ಸೇರಿದಂತೆ A ದರ್ಜೆಯ 100 ದೇವಾಲಯಗಳಲ್ಲಿ ಈ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಸಲು ಸರ್ಕಾರ ನಿರ್ಧರಿಸಿದೆ.
ಇನ್ನು ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂದಿನ ವರ್ಷದಿಂದ ಈ ಯೋಜನೆ ಜಾರಿಗೆ ಆಗಲಿದೆ. ಆರ್ಥಿಕವಾಗಿ ಸಶಕ್ತರಲ್ಲದ ಬಡವರಿಗೆ ಹೆಚ್ಚು ಅನುಕೂಲವಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ