
ಉಡುಪಿ, (ನ.20): ಯಕ್ಷಗಾನದ ಪ್ರಸಿದ್ಧ ಮಂದಾರ್ತಿ ಎರಡನೇ ಮೇಳದ ಹಿರಿಯ ಕಲಾವಿದ ಈಶ್ವರ ಗೌಡ ನಿನ್ನೆ ರಾತ್ರಿ ಹಠಾತ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಮಹಿಷಾಸುರ ಪಾತ್ರದಲ್ಲಿ ಅದ್ಭುತ ನಟನೆ ನೀಡಿ, ಪ್ರಸಂಗ ಮುಗಿಸಿ ವೇಷ ಕಳಚುತ್ತಿದ್ದಂತೆಯೇ ಈಶ್ವರ ಗೌಡ ಅಸ್ವಸ್ಥರಾಗಿದ್ದಾರೆ. ತಕ್ಷಣ ಅವರನ್ನ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದ್ರೂ ಆ ವೇಳೆಗೆ ದಾರಿಯಲ್ಲೇ ಅವರು ನಿಧನರಾಗಿದ್ದಾರೆ.
ಇದನ್ನೂ ಓದಿ: ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿ ಕಾಮಿಗಳು : ಬಿಳಿಮಲೆ ವಿವಾದ!
ವಿಶೇಷವೆಂದರೆ, ಅದೇ ಮಂದಾರ್ತಿ ಮೇಳದಲ್ಲಿ ಈಶ್ವರ ಗೌಡ ಅವರ ತಂದೆ ಕೂಡ ಹಿರಿಯ ವೇಷಧಾರಿಯಾಗಿದ್ದು, ಪ್ರತಿ ಪ್ರದರ್ಶನದಲ್ಲೂ ಚೌಕಿಯಲ್ಲಿ ತಂದೆಯ ಆಶೀರ್ವಾದ ಪಡೆದು ನಂತರವೇ ಮಗ ಪಾತ್ರನಿರ್ವಹಿಸುತ್ತಿದ್ದರಂತೆ ನಿನ್ನೆ ಕೂಡ ಕೊನೆಯ ಆಶೀರ್ವಾದವೆಂಬಂತೆ ತಂದೆಯ ಕಾಲು ಮುಟ್ಟೀ ನಮಸ್ಕರಿಸಿ ಪಾತ್ರ ಪಾತ್ರ ನಿರ್ವಹಿಸಿದ್ದರು.
ಆದರೆ ಪಾತ್ರ ಮುಗಿಸಿ ತಂದೆಯ ಬಳಿ ಮರಳಿ ಬರುವ ಮೊದಲೇ ಜೀವ ಬಿಟ್ಟಿದ್ದಾರೆ. ಈಶ್ವರ ಗೌಡರ ಅಕಾಲಿಕ ನಿಧನಕ್ಕೆ ಯಕ್ಷಗಾನದ ಪ್ರೇಮಿಗಳು, ಮಂದಾರ್ತಿ ಮೇಳದ ಕಲಾವಿದರು ಕಂಬನಿ ಮಿಡಿದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ