ಯಕ್ಷಗಾನ ಕಲಾವಿದರ ಅಪಮಾನ: 'ಬಿಳಿಮಲೆಗೆ ಒಂದು ನೋಟಿಸ್ ಕೊಡೋಕೂ ಕಷ್ಟವೇ? ಸುನೀಲ್ ಕುಮಾರ್ ಪ್ರಶ್ನೆ, ಈ ವಿಷಯ ದೊಡ್ಡದು ಮಾಡೋದು ಬೇಡ ಎಂದ ತಂಗಡಗಿ

Published : Dec 10, 2025, 07:17 PM IST
Yakshagana Artist Row MLA Sunil Kumar Questions Govt Over Bilimale s statement

ಸಾರಾಂಶ

ಯಕ್ಷಗಾನ ಕಲಾವಿದರ ಕುರಿತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ನೀಡಿದ್ದ ವಿವಾದಾತ್ಮಕ ಹೇಳಿಕೆ ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು. ಶಾಸಕ ಸುನೀಲ್ ಕುಮಾರ್ ಸರ್ಕಾರದ ಕ್ರಮ ಪ್ರಶ್ನಿಸಿದರೆ, ಸಚಿವ ತಂಗಡಗಿ ಆ ವಿಷಯ ದೊಡ್ಡದು ಮಾಡೋದು ಸರಿಯಲ್ಲ ಎಂದರು.ಕೊಂಡರು.

ಬೆಳಗಾವಿ (ಡಿ.10): ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ ಪುರುಷೋತ್ತಮ ಬಿಳಿಮಲೆ ಅವರು ಯಕ್ಷಗಾನ ಕಲಾವಿದರ ಕುರಿತು ನೀಡಿದ್ದ ವಿವಾದಾತ್ಮಕ ಹೇಳಿಕೆ ವಿಚಾರ ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಸುನೀಲ್ ಕುಮಾರ್ ವಿಷಯವನ್ನು ಪ್ರಸ್ತಾಪಿಸಿ ಸರ್ಕಾರದ ಕ್ರಮದ ಬಗ್ಗೆ ಪ್ರಶ್ನಿಸಿದರು

ಒಂದು ನೋಟಿಸ್ ನೀಡೋಕೂ ನಿಮಗೆ ಕಷ್ಟವೇ?

ಶಾಸಕ ಸುನೀಲ್ ಕುಮಾರ್ ಅವರು ಈ ವಿಚಾರವನ್ನು ಪ್ರಸ್ತಾಪಿಸಿ, 'ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಕರಾವಳಿಯ ಜನಪದ ಕಲಾವಿದರಾದ ಯಕ್ಷಗಾನ ಕಲಾವಿದರ ಬಗ್ಗೆ ಅತ್ಯಂತ ಅಪಮಾನಕಾರಿಯಾಗಿ ಹೇಳಿಕೆ ನೀಡಿದ್ದಾರೆ. ಅವರ ಮೇಲೆ ಸರ್ಕಾರ ಯಾವ ಕ್ರಮ ಜರುಗಿಸಿದೆ? ಎಂದು ಪ್ರಶ್ನಿಸಿದರು. ಅಲ್ಲದೆ, ಅಂತಹ ವ್ಯಕ್ತಿಯ ವಿರುದ್ಧ ಒಂದು ನೋಟೀಸ್ ನೀಡಲು ಕೂಡ ನಿಮಗೆ ಕಷ್ಟವೇ? ಎಂದು ಸರ್ಕಾರದ ನಿಲುವಿನ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಆ ವಿಷಯ ದೊಡ್ಡದು ಮಾಡೋದು ಸರಿಯಲ್ಲ:

ಬಿಜೆಪಿ ಶಾಸಕರ ಪ್ರಶ್ನೆಗೆ ಉತ್ತರ ನೀಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಈಗಾಗಲೇ ಪುರುಷೋತ್ತಮ ಬಿಳಿಮಲೆ ಅವರು ತಮ್ಮ ಹೇಳಿಕೆ ಕುರಿತು ವಿಷಾದ ವ್ಯಕ್ತಪಡಿಸಿದ್ದಾರೆ. ಈ ವಿಚಾರವನ್ನು ಮತ್ತೆ ದೊಡ್ಡದು ಮಾಡುವುದು ಸರಿಯಲ್ಲ ಎಂದು ಹೇಳಿದರು. ಬಿಳಿಮಲೆ ಅವರನ್ನು ಸಮರ್ಥಿಸಿಕೊಂಡ ಸಚಿವರು, 'ಬಿಳಿಮಲೆಯವರು ತುಂಬಾ ಅನುಭವ ಇರುವವರು. ಅವರನ್ನು ಕರೆದು ನಾನು‌ ಮಾತನಾಡಿದ್ದೇನೆ' ಎಂದು ಸದನಕ್ಕೆ ಮಾಹಿತಿ ನೀಡಿದರು.

ಬಿಳಿಮಲೆ ಹೇಳಿಕೆ ವಿವಾದ:

ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಅವರು ಯಕ್ಷಗಾನದ ಸ್ತ್ರೀ ವೇಷಧಾರಿ ಕಲಾವಿದರ ನಡುವಿನ ಸಲಿಂಗಕಾಮ ಸಂಬಂಧಗಳ ಕುರಿತು ನೇರವಾಗಿ ಮತ್ತು ಬಹಿರಂಗವಾಗಿ ಹೇಳಿಕೆ ನೀಡಿ ತೀವ್ರ ವಿವಾದಕ್ಕೆ ಕಾರಣರಾಗಿದ್ದರು. ಅವರ ಈ ಹೇಳಿಕೆಯು ಯಕ್ಷಗಾನ ಕಲಾವಿದರು ಮತ್ತು ಕಲಾರಸಿಕ ವಲಯದಲ್ಲಿ ದೊಡ್ಡ ಮಟ್ಟದ ಆಕ್ರೋಶ ಮತ್ತು ಪ್ರತಿಭಟನೆಗೆ ಕಾರಣವಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ಸದ್ದಿಲ್ಲದೇ ಓಪನ್ ಆದ 'ಬಿಗ್ ಬಾಸ್' ನಡೆಯುವ ಜಾಲಿವುಡ್ ಸ್ಟುಡಿಯೋ! KSPCB ಅನುಮತಿ