
ಮೈಸೂರು, (ನ. 19): ರಾಜ್ಯ ಸರ್ಕಾರ, ಸಿಎಂ ಸಿದ್ದರಾಮಯ್ಯರ ವಿರುದ್ಧ ನೇರಾನೇರ ವಾಗ್ದಾಳಿ ನಡೆಸುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆಗೆ ಪ್ರವೇಶಿಸಲಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳರ ಆಗಮನಕ್ಕೆ ಹಿಂದೂ ಜಾಗೃತಾ ವೇದಿಕೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ.
ಮೈಸೂರು ಟೋಲ್ಗೇಟ್ ಬಳಿ ಯತ್ನಾಳ್ ಅವರಿಗೆ ಭರ್ಜರಿ ಸ್ವಾಗತ ಕೋರಲಾಗುತ್ತಿದೆ. ಅಲ್ಲಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ರಾಲಿ, ಭರ್ಜರಿ ಮೆರವಣಿಗೆಯೊಂದಿಗೆ ಕಲಾಮಂದಿರಕ್ಕೆ ತೆರಳಲಿದ್ದಾರೆ.
ಕಲಾಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ವೇದಿಕೆಯಲ್ಲಿ ಶ್ರೀ ಯೋಗಾನರಸಿಂಹಸ್ವಾಮಿ ದೇವಾಲಯದ ಭಾಷ್ಯಂ ಸ್ವಾಮೀಜಿ, ಎಂಎಲ್ಸಿ ಹೆಚ್. ವಿಶ್ವನಾಥ್, ಬಿಜೆಪಿ ಮಾಜಿ ಶಾಸಕ ಮಾರುತಿ ರಾವ್ ಪವಾರ್ ಸೇರಿದಂತೆ ಹಲವು ಪ್ರಮುಖರು ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮಕ್ಕೆ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಂದ ಸಾವಿರಾರು ಅಭಿಮಾನಿಗಳನ್ನ ಕರೆಸಲು ವ್ಯಾಪಕ ತಯಾರಿ ನಡೆಸಲಾಗಿದೆ.
ಸಿಎಂ ತವರು ಜಿಲ್ಲೆಯಲ್ಲೇ ಹುಲಿ ಗರ್ಜನೆ:
ಇಂದಿನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಥವಾ ಬಿಜೆಪಿ ರಾಜ್ಯ ನಾಯಕತ್ವದ ವಿರುದ್ಧವೇ ಗುರಿ ಇಡಲಿದ್ದಾರಾ? ಯತ್ನಾಳ್ ಅವರು ಭಾಷಣದಲ್ಲಿ ಯಾರ ಮೇಲೆ ದಾಳಿ ಮಾಡಲಿದ್ದಾರೆ ಎಂಬ ಕುತೂಹಲ ಕೆರಳಿಸಿದೆ. ಈ ಘಟನೆ ಮೈಸೂರಿನ ರಾಜಕೀಯ ವಾತಾವರಣವನ್ನು ಬಿಸಿಮಾಡುವುದರಲ್ಲಿ ಯಾವುದೇ ಅನುಮಾನವಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ