ಸಿಎಂ ಮಹತ್ವದ ಘೋಷಣೆ: ಈ ಬಾರಿ ದೀಪಾವಳಿ ಪಟಾಕಿ ಠುಸ್..!

Published : Nov 06, 2020, 02:27 PM ISTUpdated : Nov 06, 2020, 02:40 PM IST
ಸಿಎಂ ಮಹತ್ವದ ಘೋಷಣೆ: ಈ ಬಾರಿ ದೀಪಾವಳಿ ಪಟಾಕಿ ಠುಸ್..!

ಸಾರಾಂಶ

ಸಂಭ್ರಮದಿಂದ ದೀಪಾವಳಿ ಹಬ್ಬ ಆಚರಿಸಲು ಸಿದ್ಧರಾಗಿದ್ದೀರಾ? ಹಾಗಾದ್ರೆ ಈ ಬಾರಿಯ ದೀಪಾವಳಿಯನ್ನು ಕೆಲವು ಕಟ್ಟುಪಾಡುವಿನಲ್ಲಿ ಆಚರಿಸಬೇಕಿದೆ.

ಬೆಂಗಳೂರು, (ನ.06): ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದೀಪಾವಳಿ ಹಬ್ಬದ ವೇಳೆ ಪಟಾಕಿ ನಿಷೇಧ ಮಾಡಿರುವುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

ಗೃಹ ಕಚೇರಿ ಕೃಷ್ಣದಲ್ಲಿ  ಇಂದು (ಶುಕ್ರವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ದೀಪಾವಳಿ ಹಬ್ಬದ ವೇಳೆ ಪಟಾಕಿ ಮಾರುವಂತಿಲ್ಲ. ಹಾಗೂ ಪಟಾಕಿ ಹಚ್ಚುವಂತಿಲ್ಲ ಎಂದು ತೀರ್ಮಾನಿಸಲಾಗಿದ್ದು, ಈ ಸಂಬಂಧ ಶೀಘ್ರವೇ ಸರ್ಕಾರ ಸುತ್ತೋಲೆ ಹೊರಡಿಸಲಿದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ದೀಪಾವಳಿಗೆ ಪಟಾಕಿಗೆ ನಿಷೇಧ?

ಜಿಲ್ಲಾಡಳಿತದ ಮೂಲಕ ಸರ್ಕಾರಿ ಸುತ್ತೋಲೆಯನ್ನು ರವಾನೆ ಮಾಡಲಾಗುವುದು. ಯಾವುದೇ ರೀತಿಯ ಪಟಾಕಿಯನ್ನು ಮಾರಾಟ ಮಾಡುವುದಾಗಲಿ ಅಥವಾ ಕೊಳ್ಳುವುದಾಗಲಿ ಮಾಡುವಂತಿಲ್ಲ ಎಂದು ತಿಳಿಸಿದರು.

ಇನ್ನು ಬೈ ಎಲೆಕ್ಷನ್‌ ಬಗ್ಗೆ ಪ್ರತಿಕ್ರಿಯಿಸಿ,  ಶಿರಾ ಮತ್ತು ಆರ್‍ಆರ್‍ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಯಾರೂ ಏನೇ ಹೇಳಿದರೂ ಬಿಜೆಪಿ ಅಭ್ಯರ್ಥಿಗಳೇ 100ಕ್ಕೆ ನೂರರಷ್ಟು ಗೆಲ್ಲುವುದು ಖಚಿತ. ನಾನು ಏನೇ ಹೇಳಬೇಕಾದರೂ ನೂರಾರು ಬಾರಿ ಲೆಕ್ಕಾಚಾರ ಹಾಕಿಯೇ ಹೇಳುತ್ತೇನೆ. ಈವರೆಗೂ ನಾನು ಹೇಳಿರುವ ಯಾವ ಮಾತುಗಳು ಕೂಡ ಸುಳ್ಳಲಾಗಿಲ್ಲ ಎಂದರು.

ಉಪಚುನಾವಣೆ ನಡೆದಿರುವ ಆರ್‍ಆರ್‍ ನಗರ ಮತ್ತು ಶಿರಾದಲ್ಲಿ ಬಿಜೆಪಿ ಅಭ್ಯರ್ಥಿಗಳು ನಿರೀಕ್ಷೆಗೂ ಮೀರಿದ ಮತಗಳಿಂದ ಗೆಲ್ಲುತ್ತಾರೆ. ಈ ಬಗ್ಗೆ ಯಾರಿಗೂ ಯಾವುದೇ ರೀತಿಯ ಅನುಮಾನ ಬೇಡ ಎಂದು ಅಚಲ ವಿಶ್ವಾಸ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!