ಕೇಂದ್ರದಿಂದ ಇನ್ನಷ್ಟು ನೆರೆ ಪರಿಹಾರಕ್ಕೆ ಯತ್ನ: ಸಿಎಂ ಬಿಎಸ್‌ವೈ

Kannadaprabha News   | Asianet News
Published : Nov 15, 2020, 11:18 AM IST
ಕೇಂದ್ರದಿಂದ ಇನ್ನಷ್ಟು ನೆರೆ ಪರಿಹಾರಕ್ಕೆ ಯತ್ನ: ಸಿಎಂ ಬಿಎಸ್‌ವೈ

ಸಾರಾಂಶ

577 ಕೋಟಿ ಮೊದಲ ಕಂತು ಅಷ್ಟೇ| ಇನ್ನಷ್ಟು ಪರಿಹಾರ ಸಿಗುವ ವಿಶ್ವಾಸವಿದೆ| ಮಂಡ್ಯ ಡಿಸಿಸಿ ಬ್ಯಾಂಕ್‌ ಚುನಾವಣೆ ಸಂಬಂಧ ಚರ್ಚಿಸಲು ಕುಮಾರಸ್ವಾಮಿ ಭೇಟಿ ಮಾಡಿದ್ದರು. ಇದನ್ನು ಬಿಟ್ಟು ಬೇರೆ ವಿಷಯ ಚರ್ಚಿಸಿಲ್ಲ. ಅವರನ್ನು ಭೇಟಿಯಾಗಿರುವುದಕ್ಕೆ ಹೆಚ್ಚಿನ ವ್ಯಾಖ್ಯಾನ ಮಾಡುವುದು ಸರಿಯಲ್ಲ ಎಂದ ಸಿಎಂ|   

ಬೆಂಗಳೂರು(ನ.15): ಕೇಂದ್ರ ಸರ್ಕಾರವು ರಾಜ್ಯಕ್ಕೆ ನೆರೆ ಪರಿಹಾರವಾಗಿ 577 ಕೋಟಿ ರು. ಬಿಡುಗಡೆ ಮಾಡಿದೆ. ಇದು ಮೊದಲ ಕಂತು ಅಷ್ಟೇ. ಕೇಂದ್ರದಿಂದ ಇನ್ನಷ್ಟು ನೆರವು ದೊರೆಯುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಶನಿವಾರ ಹೇಳಿದ್ದಾರೆ.

ಕೇಂದ್ರ ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿರುವ 577 ಕೋಟಿ ರು. ಹಣ ಮೊದಲ ಕಂತು. ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಇನ್ನಷ್ಟುನೀಡುವ ವಿಶ್ವಾಸವಿದೆ. ಅಲ್ಲದೆ, ಕೇಂದ್ರದಿಂದ ಹೆಚ್ಚಿನ ಪರಿಹಾರ ಪಡೆಯಲು ಎಲ್ಲ ರೀತಿಯ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡಲಿದೆ. ನಮ್ಮ ನಿರೀಕ್ಷೆಯಂತೆ ಪರಿಹಾರ ದೊರೆಯುವ ವಿಶ್ವಾಸವಿದೆ ಎಂದರು.

ಪುತ್ರ ಹೇಳಿದ ಒಂದೇ ಮಾತಿಗೆ ಜಾರಿಗೊಳಿಸಿದ ಸಿಎಂ: ಇದೆಲ್ಲ ಬಸವ'ಕಲ್ಯಾಣ'ಕ್ಕಾಗಿ...!

9,883 ಕೋಟಿ ರು. ನಷ್ಟ:

ಕಳೆದ ಆಗಸ್ಟ್‌ ಮತ್ತು ಅಕ್ಟೋಬರ್‌ ಮಧ್ಯ ಸುರಿದ ಭಾರಿ ಮಳೆ, ಪ್ರವಾಹದಿಂದಾಗಿ ರಾಜ್ಯದ 25 ಜಿಲ್ಲೆಗಳ 173 ತಾಲೂಕುಗಳನ್ನು ಪ್ರವಾಹಪೀಡಿತ ಪ್ರದೇಶ ಎಂದು ರಾಜ್ಯ ಸರ್ಕಾರ ಘೋಷಿಸಿತ್ತು. ಬೆಳೆಹಾನಿ, ಅಸ್ತಿ-ಪಾಸ್ತಿ ಸೇರಿದಂತೆ ಸುಮಾರು 9,883 ಕೋಟಿ ರು. ಹಾನಿಯಾಗಿತ್ತು. ರಾಜ್ಯ ಸರ್ಕಾರ ಎನ್‌ಡಿಆರ್‌ಎಫ್‌ನಿಂದ 2100 ಕೋಟಿ ರು. ಬಿಡುಗಡೆ ಮಾಡುವಂತೆ ಇತ್ತೀಚೆಗೆ ಕೇಂದ್ರಕ್ಕೆ ಮನವಿ ಮಾಡಿತ್ತು. ಆದರೆ ಕೇಂದ್ರ ಸರ್ಕಾರ ಈಗ ಕೇವಲ 577 ಕೋಟಿ ರು. ಮಾತ್ರ ಬಿಡುಗಡೆ ಮಾಡಿದೆ.

ಎಚ್‌ಡಿಕೆ ಜತೆ ರಾಜಕೀಯ ಚರ್ಚಿಸಿಲ್ಲ: ಬಿಎಸ್‌ವೈ ಸ್ಪಷ್ಟನೆ

ಶುಕ್ರವಾರ ತಮ್ಮ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ನಡುವಿನ ಸಭೆ ಬಗ್ಗೆ ಹೆಚ್ಚಿನ ವ್ಯಾಖ್ಯಾನ ಮಾಡಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮನವಿ ಮಾಡಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿಗಳು, ಶುಕ್ರವಾರ ಮಂಡ್ಯ ಡಿಸಿಸಿ ಬ್ಯಾಂಕ್‌ ಚುನಾವಣೆ ಸಂಬಂಧ ಚರ್ಚಿಸಲು ಕುಮಾರಸ್ವಾಮಿ ಭೇಟಿ ಮಾಡಿದ್ದರು. ಇದನ್ನು ಬಿಟ್ಟು ಬೇರೆ ವಿಷಯ ಚರ್ಚಿಸಿಲ್ಲ. ಅವರನ್ನು ಭೇಟಿಯಾಗಿರುವುದಕ್ಕೆ ಹೆಚ್ಚಿನ ವ್ಯಾಖ್ಯಾನ ಮಾಡುವುದು ಸರಿಯಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಆಗುಂಬೆ ಘಾಟ್ ಭೀಕರ ತಿರುವುಗಳಿಗೆ ಮುಕ್ತಿ: ಪಶ್ಚಿಮ ಘಟ್ಟದ ಸೌಂದರ್ಯ ಹಾಳುಗೆಡವದೇ ಸುರಂಗ ನಿರ್ಮಾಣಕ್ಕೆ ಕೇಂದ್ರ ಸಜ್ಜು!
ಇನ್ಮುಂದೆ ಹೋಟೆಲ್‌ಗಳಲ್ಲಿ 10 ರೂ ಕಾಫಿ ಹೀರುತ್ತಾ ಕೂತರೆ ಗ್ರಾಹಕರಿಗೆ ಬೀಳಲಿದೆ 1000 ರೂ.ವರೆಗೆ ದಂಡ!