ಕೊರೋನಾ ಕಂಟಕದ ಮಧ್ಯೆ ನೀರಿನ ಸಂಕಷ್ಟ: ಮಾಹಾ ಮೊರೆ ಹೋದ ಬಿಎಸ್‌ವೈ...!

Published : May 02, 2020, 10:11 PM IST
ಕೊರೋನಾ ಕಂಟಕದ ಮಧ್ಯೆ ನೀರಿನ ಸಂಕಷ್ಟ: ಮಾಹಾ ಮೊರೆ ಹೋದ ಬಿಎಸ್‌ವೈ...!

ಸಾರಾಂಶ

ಲಾಕ್‌ಡೌನ್ ಮಧ್ಯೆ ಬಡ ಹಾಗೂ ನಿರ್ಗತಿಕ ಜನರಗೆ ಕೂಲಿ ಇಲ್ಲದೆ ಹಣ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಆಹಾರಕ್ಕೂ ಪರದಾಡುವಂತಾಗಿದೆ. ಅಲ್ಲದೇ ಇದೀಗ ನೀರಿನ ಸಮಸ್ಯೆ ಎದುರಾಗಿದ್ದು, ಈ ಬಗ್ಗೆ ಸಿಎಂ ಮಾಹಾ ಮೊರೆ ಹೋಗಿದ್ದಾರೆ.

ಬೆಂಗಳೂರು, (ಮೇ.02): ಒಂದೆಡೆ ಕೊರೋನಾ ವೈರಸ್ ಕಟ್ಟಿಕಾಡುತ್ತಿದ್ರೆ, ಮತ್ತೊಂದೆಡೆ ರಾಜ್ಯದಲ್ಲಿ ನೀರಿನ ತೀವ್ರ ಅಭಾವ ಎದುರಾಗಿದೆ. 

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ತೀವ್ರ ಕುಡಿಯುವ ನೀರು ಸಮಸ್ಯೆ ಎದುರಾಗಿದ್ದು, ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಮೂರು ಟಿಎಂಸಿ, ಉಜಿನಿ ಜಲಾಶಯದಿಂದ ಭೀಮಾ ನದಿಗೆ ಇನ್ನೂ ಮೂರು ಟಿಎಂಸಿ ನೀರು ಬಿಡುಗಡೆ ಮಾಡಬೇಕೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಮನವಿ ಮಾಡಿದ್ದಾರೆ.

8 ತಬ್ಲೀಘಿ ಮೇಲೆ ಮರ್ಡರ್ ಕೇಸ್, ಅಲಿಯಾ ನೀಡಿದ್ರಾ iಫೋನ್ ಪೋಸ್? ಮೇ.2ರ ಟಾಪ್ 10 ಸುದ್ದಿ! 

ರಾಜ್ಯದಲ್ಲಿ ತೀವ್ರ ಒಣ ಹವೆ ಮುಂದುವರಿದಿರುವ ಹಿನ್ನಲೆಯಲ್ಲಿ ಬೆಳಗಾವಿ, ವಿಜಯಪುರ, ಬಾಗಲಕೋಟ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ತೀವ್ರ ತೊಂದರೆಯಿದ್ದು, ಮಹಾರಾಷ್ಟ್ರ ದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಹಾಗೂ ಉಜನಿ ಜಲಾಶಯದಿಂದ ಭೀಮಾ ನದಿಗೆ ತಲಾ 3.00 ಟಿಎಂಸಿ ನೀರು ಬಿಡುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟಕ ಸರ್ಕಾರ ಈ ಹಿಂದೆ ಮಾಡಿಕೊಂಡಿದ್ದ ಎಲ್ಲ ಮನವಿಗಳಿಗೆ ಮಹಾರಾಷ್ಟ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿ ಕೊಯ್ನಾ ಜಲಾಶಯದಿಂದ ರಾಜ್ಯಕ್ಕೆ ನೀರು ಬಿಡುಗಡೆ ಮಾಡಿದೆ ಎಂಬುದನ್ನು ಪತ್ರದಲ್ಲಿ ಸ್ಮರಿಸಿರುವ ಬಿಎಸ್‌ವೈ, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡಿ ರಾಜ್ಯಕ್ಕೆ ನೀರು ಬಿಡುಗಡೆ ಮಾಡಬೇಕು ಎಂದು ಪತ್ರದ ಮೂಲಕ ಕೋರಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕುಡುಕರ ಲಿವರ್‌ ಚಿಕಿತ್ಸೆಗೆ ಹಣ ಕೇಳಿದ ಶಾಸಕರು: ಪರಿಷತ್‌ನಲ್ಲಿ ಸ್ವಾರಸ್ಯಕರ ಚರ್ಚೆ
ಸಾಲುಮರದ ತಿಮ್ಮಕ್ಕ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ ಪ್ರದಾನ: ಸಿಎಂ ಸಿದ್ದರಾಮಯ್ಯ