
ಬೆಂಗಳೂರು (ಮೇ.2): ಮೈಸೂರು, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಶುಕ್ರವಾರ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚುರುಕುಗೊಂಡಿದ್ದು, ಮುಂದಿನ 24 ಗಂಟೆಯಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಒಂದು ವಾರ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಮಳೆಯೊಂದಿಗೆ ಗಾಳಿಯು ಗಂಟೆಗೆ 50 ಕಿ.ಮೀ. ವೇಗದಲ್ಲಿ ಇರಲಿದೆ. ಗುಡುಗು, ಮಿಂಚಿನ ಅಬ್ಬರ ಸಹ ಇರಲಿದೆ ಎಂದು ತಿಳಿಸಿದೆ.
ಉತ್ತರ ಒಳನಾಡಿನಲ್ಲಿ ಮೊದಲ ಮೂರ್ನಾಲ್ಕು ದಿನ ಕಲಬುರಗಿ, ವಿಜಯಪುರ, ರಾಯಚೂರು, ಗದಗ, ಯಾದಗಿರಿ, ಕೊಪ್ಪಳ, ಹಾವೇರಿ, ಧಾರವಾಡದಲ್ಲಿ ಗಾಳಿಯೊಂದಿಗೆ ಹಗುರ ಮಳೆ ಸಾಧ್ಯತೆ ಇದೆ. ನಂತರ ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಲ್ಲೂ ಇದೇ ವಾತಾವರಣ ಇರಲಿದೆ.
ಇದನ್ನೂ ಓದಿ: Bengaluru rains: ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ
ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ವರದಿ ಪ್ರಕಾರ, ಕೆ.ಆರ್.ಪೇಟೆಯಲ್ಲಿ ಅತಿ ಹೆಚ್ಚು 10 ಸೆಂ.ಮೀ ಮಳೆಯಾಗಿದೆ. ಉಳಿದಂತೆ ಬೆಂಗಳೂರಿನ ಟಿ.ಜಿ.ಹಳ್ಳಿ, ಹಿರಿಯೂರಿನಲ್ಲಿ ತಲಾ 5, ಮೈಸೂರು 4, ಗುಬ್ಬಿ 3, ಬೆಳ್ತಂಗಡಿ, ಸುಳ್ಯ, ನಾಗಮಂಗಲ, ಗೌರಿಬಿದನೂರು, ಚಿಕ್ಕಬಳ್ಳಾಪುರ, ಕೃಷ್ಣರಾಜಸಾಗರದಲ್ಲಿ ತಲಾ 2, ಉಪ್ಪಿನಂಗಡಿ, ಮದ್ದೂರು, ಬಾಳೆಹೊನ್ನೂರು, ನಾಯಕಹಟ್ಟಿ, ಕೊಟ್ಟಿಗೆಹಾರ, ಚಿತ್ರದುರ್ಗ, ಚಿಕ್ಕಮಗಳೂರು, ತುಮಕೂರಿನಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ