ಕರಾವಳಿ, ಮಲೆನಾಡಲ್ಲಿ ಭಾರೀ ಮಳೆ: ಉಡುಪಿಗೆ ಇಂದು Yellow Alert

Kannadaprabha News   | Asianet News
Published : Oct 18, 2021, 07:32 AM IST
ಕರಾವಳಿ, ಮಲೆನಾಡಲ್ಲಿ ಭಾರೀ ಮಳೆ: ಉಡುಪಿಗೆ ಇಂದು Yellow Alert

ಸಾರಾಂಶ

*   ಪ್ರಾಕೃತಿಕ ಹಾನಿಯೊಂದಿಗೆ ಕೃಷಿಗೂ ಅಪಾರ ನಷ್ಟ *   ಕರಾವಳಿಯಲ್ಲಿ ಯಲ್ಲೋ ಎಲರ್ಟ್‌ *   ಕಂದಾಯ ಅಧಿಕಾರಿಗಳಿಗೆ ಸ್ಥಳದಲ್ಲೇ ಮೊಕ್ಕಾಂ ಇರುವಂತೆ ಸೂಚನೆ   

ಬೆಂಗಳೂರು(ಅ.18): ಅರಬ್ಬಿ ಸಮುದ್ರದಲ್ಲಿ(Arabian Sea) ವಾಯುಭಾರ ಕುಸಿತವುಂಟಾಗಿರುವ(Airway Collapse) ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ(Coastal) ಮತ್ತು ಮಲೆನಾಡಿನ(Malenadu) ಕೆಲಭಾಗಗಳಲ್ಲಿ ಭಾನುವಾರವೂ ಮುಂದುವರಿದಿದ್ದು ಅಲ್ಲಲ್ಲಿ ಪ್ರಾಕೃತಿಕ ಹಾನಿಯೊಂದಿಗೆ ಕೃಷಿಗೂ ಅಪಾರ ನಷ್ಟವಾಗಿದೆ. 

ಮಂಗಳೂರು(Mangaluru) ತಾಲೂಕಿನಲ್ಲಿ ಐದು ಮನೆ ಸಂಪೂರ್ಣ ನಾಶವಾಗಿವೆ. ನಾಲ್ಕು ಮನೆ ಭಾಗಶಃ ಹಾನಿಗೀಡಾಗಿದೆ. ಇತರೆ 12 ಕಡೆಗಳಲ್ಲಿ ಆವರಣ ಗೋಡೆ ಕುಸಿದಿದೆ. ಮೂರು ಕಡೆ ಮನೆಗಳ ಗುಡ್ಡ ಕುಸಿದಿದೆ. ಮೂಲ್ಕಿಯಲ್ಲಿ ಭತ್ತದ ಗದ್ದೆಗೆ ನೀರು ನುಗ್ಗಿದೆ. ಗುರುಪುರ, ಕೊಳಂಬೆ, ಅದ್ಯಪಾಡಿಗಳಲ್ಲಿ ಕೃಷಿ(Agriculture) ತೋಟಕ್ಕೆ ನೀರು ಪ್ರವೇಶಿಸಿದೆ. ಇದರಿಂದ ಅಪಾರ ಪ್ರಮಾಣದಲ್ಲಿ ಕೃಷಿ ಹಾನಿ ಸಂಭವಿಸಿದೆ. ಸೋಮವಾರ ಕರಾವಳಿಯ ಕೆಲವು ಭಾಗದಲ್ಲಿ ಭಾರಿ ಮಳೆಯಾಗಲಿದೆ(Rain) ಎಂದು ತಿಳಿಸಿರುವ ಹವಾಮಾನ ಇಲಾಖೆ(Department of Meteorology) ಉಡುಪಿ ಜಿಲ್ಲೆಗೆ ಯೆಲ್ಲೋ ಅಲರ್ಟ್‌(Yellow Alert) ಘೋಷಿಸಿದೆ.

ಬೆಂಗ್ಳೂರಲ್ಲಿ ವಾಡಿಕೆಗಿಂತ ಹೆಚ್ಚು ವರ್ಷಧಾರೆ..!

ಉಡುಪಿ(Udupi) ಜಿಲ್ಲಾದ್ಯಂತ ಶನಿವಾರ ರಾತ್ರಿಯಿಂದ ಭಾನುವಾರ ಮಧ್ಯಾಹ್ನದವರೆಗೆ ಬಿಡದೇ ಲಘು ಮಳೆಯಾಗಿದೆ. ರಾತ್ರಿ ಮಳೆಯ ಪ್ರಭಾವ ಜೋರಿರದಿದ್ದರೂ, ಗುಡುಗು ಮತ್ತು ಮಿಂಚುಗಳು ಜನರ ಆತಂಕಕ್ಕೆ ಕಾರಣವಾಗಿತ್ತು. ಮೀನುಗಾರರಿಗೆ(Fishermen) ಸಮುದ್ರಕ್ಕೆ(Sea) ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಇನ್ನು ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಕಡೂರು ಹಾಗೂ ಕೊಪ್ಪ ತಾಲೂಕುಗಳ ಕೆಲವೆಡೆ ಉತ್ತಮ ಮಳೆಯಾಗಿದೆ.
ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ದಕ್ಷಿಣ ಕನ್ನಡದ ಪಣಂಬೂರಿನಲ್ಲಿ 15 ಸೆಂ.ಮಿ. ಮಳೆಯಾಗಿದೆ. ದಕ್ಷಿಣ ಕನ್ನಡದ ಧರ್ಮಸ್ಥಳ, ಮಂಗಳೂರು, ಕೊಡಗಿನ ಪೊನ್ನಂಪೇಟೆ ತಲಾ 10 ಸೆಂಮೀ, ದಕ್ಷಿಣ ಕನ್ನಡದ ಸುಳ್ಯ, ಮೈಸೂರಿನ ಸರಗೂರು ತಲಾ 7 ಸೆಂಮೀ, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 6 ಸೆಂಮೀ, ದಕ್ಷಿಣ ಕನ್ನಡದ ಸುಳ್ಯ, ವಿಟ್ಲ, ಉಡುಪಿಯ ಸಿದ್ದಾಪುರ, ಬೀದರ್‌ನ ಹುಮ್ನಾಬಾದ್‌, ರಾಮನಗರದ ಮಾಗಡಿ, ಮಂಡ್ಯದ ಕೆ. ಆರ್‌. ಪೇಟೆಯಲ್ಲಿ ತಲಾ 5 ಸೆಂಮೀ ಮಳೆಯಾಗಿದೆ.

ಕರಾವಳಿಯಲ್ಲಿ ಯಲ್ಲೋ ಎಲರ್ಟ್‌: 

ಸೋಮವಾರ ಕರಾವಳಿಯ ಕೆಲವು ಭಾಗದಲ್ಲಿ ಭಾರಿ ಮಳೆಯಾಗಲಿದೆ. ರಾಜ್ಯದ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಡುಪಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಿರುವ ಹಿನ್ನೆಲೆಯಲ್ಲಿ ಕಂದಾಯ ಅಧಿಕಾರಿಗಳಿಗೆ ಸ್ಥಳದಲ್ಲೇ ಮೊಕ್ಕಾಂ ಇರುವಂತೆ ಸೂಚನೆ ನೀಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

'ನಿಮ್ಮ ಸುರಕ್ಷತೆ ನನಗೂ ಮುಖ್ಯ..' ಮಹಿಳಾ ಪ್ರಯಾಣಿಕರ ಮನ ಗೆದ್ದ ಆಟೋ ಚಾಲಕ, ಸಂದೇಶ ವೈರಲ್ ಮಾಡಿದ ಬೆಂಗಳೂರು ಪೊಲೀಸರು!
ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!