ಯೋಗೇಶ್‌ಗೌಡ ಕೊಲೆ ಕೇಸ್‌: ವಿನಯ್ ಕುಲಕರ್ಣಿಪರ ವಕೀಲರ ಫೋನ್ ಕದ್ದಾಲಿಸಿತಾ ಸಿಬಿಐ?

Published : Apr 18, 2025, 04:15 AM ISTUpdated : Apr 18, 2025, 05:19 AM IST
ಯೋಗೇಶ್‌ಗೌಡ ಕೊಲೆ ಕೇಸ್‌: ವಿನಯ್ ಕುಲಕರ್ಣಿಪರ ವಕೀಲರ ಫೋನ್ ಕದ್ದಾಲಿಸಿತಾ ಸಿಬಿಐ?

ಸಾರಾಂಶ

ಧಾರವಾಡ ಜಿಪಂ ಯೋಗೇಶ್‌ಗೌಡ ಕೊಲೆ ಪ್ರಕರಣ ಸಂಬಂಧ ವಿಚಾರಣೆ ವೇಳೆ ತಮ್ಮ ಮೊಬೈಲ್‌ಗಳ ಕದ್ದಾಲಿಕೆಯಾಗುತ್ತಿದೆ ಎಂದು ಆರೋಪಿ ಪರ ವಕೀಲರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಗಂಭೀರ ಸ್ವರೂಪದ ಆರೋಪ ಮಾಡಿದರು.

ಬೆಂಗಳೂರು (ಏ.18): ಧಾರವಾಡ ಜಿಪಂ ಯೋಗೇಶ್‌ಗೌಡ ಕೊಲೆ ಪ್ರಕರಣ ಸಂಬಂಧ ವಿಚಾರಣೆ ವೇಳೆ ತಮ್ಮ ಮೊಬೈಲ್‌ಗಳ ಕದ್ದಾಲಿಕೆಯಾಗುತ್ತಿದೆ ಎಂದು ಆರೋಪಿ ಪರ ವಕೀಲರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಗಂಭೀರ ಸ್ವರೂಪದ ಆರೋಪ ಮಾಡಿದರು.

ಗುರುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಶಾಸಕ ವಿನಯ್ ಕುಲಕರ್ಣಿ ಸೇರಿ ಇತರೆ ಆರೋಪಿಗಳ ಜಾಮೀನು ರದ್ದು ಕೋರಿ ವಿಚಾರಣೆ ನಡೆಯಿತು. ಈ ವೇಳೆ ವಿನಯ್ ಕುಲಕರ್ಣಿ ಪರ ವಕೀಲರಾದ ಸಿ.ವಿ.ನಾಗೇಶ್‌ ಮತ್ತು ಶ್ಯಾಮ್‌ ಸುಂದರ್‌, ವಕೀಲರ ದೂರವಾಣಿ ಕರೆ ಕದ್ದಾಲಿಕೆಯಾಗುತ್ತಿರುವ ಬಗ್ಗೆ ನ್ಯಾಯಾಲಯದ ಗಮನಕ್ಕೆ ತಂದರು. ಅಲ್ಲದೇ, ಸಿಬಿಐ ನಡೆ ಬಗ್ಗೆ ಆಕ್ಷೇಪಿಸಿ ಅರ್ಜಿ ಸಲ್ಲಿಸಿದರು.

ಸಿಬಿಐ ಅಧಿಕಾರಿಗಳು ವಕೀಲರ ಮೊಬೈಲ್ ಕರೆಗಳನ್ನು ಗುಪ್ತವಾಗಿ ಆಲಿಸುವುದು ಮತ್ತು ಅವರ ಮೇಲೆ ನಿಗಾ ಇರಿಸುವ ಕೆಲಸ ನಡೆಯುತ್ತಿದೆ. ತನಿಖೆಯಲ್ಲಿ ಸಿಬಿಐ ನಿಷ್ಪಕ್ಷಪಾತವಾಗಿ ನಡೆದುಕೊಳ್ಳುತ್ತಿಲ್ಲ. ಹೀಗಾಗಿ ಜಾಮೀನು ರದ್ದು ಕೋರಿ ಸಲ್ಲಿಸಿರುವ ಅರ್ಜಿಯನ್ನು ಹಿಂಪಡೆಯಲು ಸಿಬಿಐಗೆ ಸೂಚನೆ ನೀಡಬೇಕು ಎಂದು ದೂರಿದರು.

ಇದನ್ನೂ ಓದಿ: ಮಾರ್ಚ್ ನಂತರ ಸಚಿವ ಸಂಪುಟ ವಿಸ್ತರಣೆ, ನಾನೂ ಈ ಸಲ ಸಚಿವನಾಗ್ತೇನೆ;

ಈ ಬಗ್ಗೆ ವಾದ ಆಲಿಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್‌, ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಸಿಬಿಐ ಪರ ವಕೀಲ ಗಂಗಾಧರ ಶೆಟ್ಟಿಗೆ ಸೂಚನೆ ನೀಡಿ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Justice for Bongo: ಮಗು ಹುಟ್ಟಿದ್ದಕ್ಕೆ ಸಾಕಿ ಸಲುಹಿದ ಶ್ವಾನ ಕೊಂದ್ರಾ ಪಾಪಿಗಳು? ಸಿಲಿಕಾನ್ ಸಿಟಿಯಲ್ಲಿ 'ಬೋಂಗೋ' ಸಾವಿನ ರೋಚಕ ಕಹಾನಿ!
ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ