
ಮಂಗಳೂರು (ಮೇ.27): ಹಗಲು ವೇಳೆ ವಾಹನಗಳ ಓಡಾಟದ ಮಧ್ಯೆಯೇ ಯುವಕರು ನಡುರಸ್ತೆಗೆ ಕುಳಿತು ನಮಾಜ್ ಮಾಡಿದ ಘಟನೆ ಮಂಗಳೂರಿನ ಕಂಕನಾಡಿ ರಸ್ತೆಯಲ್ಲಿ ನಡೆದಿದೆ.
ಎರಡು ದಿನಗಳ ಹಿಂದೆ ನಡೆದಿರುವ ಘಟನೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಂಕನಾಡಿ ರಸ್ತೆಗೆ ಹೊಂದಿಕೊಂಡಂತಿರುವ ಮಸೀದಿ ಮುಂಭಾಗದ ರಸ್ತೆಗೆ ಕುಳಿತು ಯುವಕರು ನಮಾಜ್ ಮಾಡುತ್ತಿರುವ ದೃಶ್ಯವನ್ನ ಸ್ಥಳೀಯರೊಬ್ಬರು ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ.
ಕರಾವಳಿಯಲ್ಲಿ ಯೆಲ್ಲೋ ಅಲರ್ಟ್: ಮೇ.29ರ ವರೆಗೆ ಭಾರಿ ಮಳೆ ಮುನ್ಸೂಚನೆ
ಯುವಕರು ನಡುರಸ್ತೆಯಲ್ಲೇ ನಮಾಜ್ಗೆ ಕುಳಿತಿರುವುದರಿಂದ ವಾಹನ ಸವಾರರು ಮುಂದೆ ಚಲಿಸಲು ತೊಂದರೆಯಾಗಿದೆ. ಯೂಟರ್ನ್ ತೆಗೆದುಕೊಳ್ಳುವ ದೃಶ್ಯವೂ ಸ್ಪಷ್ಟವಾಗಿ ಸೆರೆಯಾಗಿದೆ. ಈ ಘಟನೆ ವಿಡಿಯೋ ಶೇರ್ ಮಾಡಿಕೊಂಡು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮಾಜ್ ಮಾಡಲೆಂದೇ ಮಸೀದಿ ಇರುವುದು ಆದರೆ ಮಸೀದಿ ಬಿಟ್ಟು ನಡುರಸ್ತೆಗೆ ಕುಳಿತು ನಮಾಜ್ ಮಾಡಿದರೆ ವಾಹನಗಳು ಸಂಚರಿಸುವುದು ಹೇಗೆಂದು ಪ್ರಶ್ನಿಸಿದ್ದಾರೆ. ರಸ್ತೆ ಮಧ್ಯೆ ನಮಾಜ್ ಮಾಡುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ