ಉತ್ತಮ ಪದಗಳನ್ನು ಬಳಸಿ ಟೀಕಿಸಿ : ಎಚ್‌ಡಿಕೆಗೆ ದತ್ತ

Kannadaprabha News   | Asianet News
Published : Jul 08, 2021, 07:50 AM IST
ಉತ್ತಮ ಪದಗಳನ್ನು ಬಳಸಿ ಟೀಕಿಸಿ : ಎಚ್‌ಡಿಕೆಗೆ ದತ್ತ

ಸಾರಾಂಶ

‘ಮಾತನಾಡುವಾಗ ಉತ್ತಮ ಪದಗಳನ್ನು ಬಳಸಿ ಮಾತನಾಡಬೇಕು. ಉತ್ತಮ ಪದಗಳನ್ನು ಬಳಸಿ ರಾಜಕಾರಣದಲ್ಲಿ ಟೀಕೆ ಮಾಡಲು ಅವಕಾಶವಿದೆ’ ಹಿರಿಯ ನಾಯಕ ವೈ.ಎಸ್‌.ವಿ.ದತ್ತ ಅವರು ತಮ್ಮ ಪಕ್ಷದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಗೆ ಹೇಳಿಕೆ

 ಬೆಂಗಳೂರು (ಜು.08):  ‘ಮಾತನಾಡುವಾಗ ಉತ್ತಮ ಪದಗಳನ್ನು ಬಳಸಿ ಮಾತನಾಡಬೇಕು. ಉತ್ತಮ ಪದಗಳನ್ನು ಬಳಸಿ ರಾಜಕಾರಣದಲ್ಲಿ ಟೀಕೆ ಮಾಡಲು ಅವಕಾಶವಿದೆ’ ಎಂದು ಜೆಡಿಎಸ್‌ ಹಿರಿಯ ನಾಯಕ ವೈ.ಎಸ್‌.ವಿ.ದತ್ತ ಅವರು ತಮ್ಮ ಪಕ್ಷದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಮಂಡ್ಯ ಸಂಸದೆ ಸುಮಲತಾ ಬಗ್ಗೆ ಕುಮಾರಸ್ವಾಮಿ ಆಡಿದ ಮಾತು ವಿವಾದಕ್ಕೀಡಾಗಿತ್ತು. ಈ ಹಿನ್ನೆಲೆಯಲ್ಲಿ ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದತ್ತ, ಈ ರೀತಿಯ ಹೇಳಿಕೆಗೆ ನನ್ನದೇ ಆಕ್ಷೇಪವಿದೆ. ಇತ್ತೀಚೆಗೆ ಎಲ್ಲ ರಾಜಕಾರಣಿಗಳು ಇದೇ ರೀತಿ ಹೇಳಿಕೆಗಳನ್ನು ನೀಡುತ್ತಿರುವುದು ಸರಿ ಕಾಣುವುದಿಲ್ಲ. ಉತ್ತಮ ಭಾಷಾ ಪ್ರಯೋಗದಿಂದ ರಾಜಕಾರಣಿಗಳು ಮಾದರಿಯಾಗಬೇಕು ಎಂದರು

.ಸುಮಲತಾರನ್ನು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದ ಎಚ್‌ಡಿಕೆ .

ಕನ್ನಡ ಶ್ರೀಮಂತ ಭಾಷೆ, ಕನ್ನಡದಲ್ಲಿ ಸಾಕಷ್ಟುಪದ ಭಂಡಾರವಿದೆ. ಹೀಗಾಗಿ ಉತ್ತಮ ಪದ ಬಳಕೆ ಹಾಗೂ ಭಾಷಾ ಪ್ರಯೋಗದಿಂದ ರಾಜಕಾರಣಿಗಳು ಮಾದರಿಯಾಗಬೇಕು. ಇತ್ತೀಚೆಗೆ ಎಲ್ಲ ಪಕ್ಷಗಳ ರಾಜಕಾರಣಿಗಳೂ ಭಾಷೆ ಮೇಲೆ ಸಂವೇದನಾಶೀಲರಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಯೋಚಿಸಿ ಪದ ಬಳಕೆ ಮಾಡುತ್ತಿಲ್ಲ. ಇದು ತುಂಬಾ ತಪ್ಪಾಗುತ್ತದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ
ಗಡೀಪಾರು ಸಂಕಷ್ಟದಲ್ಲಿ Mahesh Shetty Timarodi: ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ ದೇಗುಲದಲ್ಲಿ ಪ್ರಾರ್ಥನೆ