
ಕಲಬುರಗಿ (ಜ.2): ಯುವನಿಧಿ ಯೋಜನೆಗೆ ಕಳೆದ 7 ದಿನಗಳಲ್ಲಿ ರಾಜ್ಯಾದ್ಯಂತ 19,392 ಮಂದಿ ಯುವಕರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಸಚಿವ ಶರಣ್ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಕಾಂಗ್ರೆಸ್ನ ಐದನೇ ಖಾತರಿ ಯೋಜನೆಯಾದ ಯುವ ನಿಧಿಯ ನೋಂದಣಿಯನ್ನು ಡಿಸೆಂಬರ್ 26 ರಂದು ಬೆಂಗಳೂರಿನಲ್ಲಿ ಪ್ರಾರಂಭಿಸಲಾಯಿತು.
ಯುವ ನಿಧಿ(Yuva nidhi scheme) ಅಡಿಯಲ್ಲಿ, 2023 ರಲ್ಲಿ ತಮ್ಮ ಪದವಿ ಮತ್ತು ಡಿಪ್ಲೊಮಾವನ್ನು ಪೂರ್ಣಗೊಳಿಸಿದ ನಂತರ ನಿರುದ್ಯೋಗಿಗಳಾಗಿ ಉಳಿದಿರುವ ಯುವಕರು ಎರಡು ವರ್ಷಗಳವರೆಗೆ ಅಥವಾ ಅವರು ಉದ್ಯೋಗ ಪಡೆಯುವವರೆಗೆ ಕ್ರಮವಾಗಿ ರೂ 3,000 ಮತ್ತು ರೂ 1,500 ರ ಮಾಸಿಕ ನಿರುದ್ಯೋಗ ಭತ್ಯೆಯನ್ನು ಪಡೆಯುತ್ತಾರೆ.
ಯುವಶಕ್ತಿಗೆ ಯುವನಿಧಿ: ಲೋಕಸಭೆ ಚುನಾವಣೆಗೆ"ಕೈ" ಹಿಡಿಯುತ್ತಾ 5 ಗ್ಯಾರಂಟಿ ಶಕ್ತಿಗಳು?
ಜನವರಿ 12ರಂದು (ವಿವೇಕಾನಂದ ಜಯಂತಿ) ಫಲಾನುಭವಿಗಳಿಗೆ ಹಣ ಜಮಾ ಆಗಲಿದೆ. ಸುಮಾರು 1 ಲಕ್ಷ ಯುವಕರು ಈ ಯೋಜನೆಗೆ ನೋಂದಾಯಿಸಿಕೊಳ್ಳುವ ನಿರೀಕ್ಷೆಯಿದ್ದು, ಇದೇ ಜನವರಿ 12 ರಂದು ಶಿವಮೊಗ್ಗದಲ್ಲಿ ನಡೆಯುವ ಬಿಡುಗಡೆ ಕಾರ್ಯಕ್ರಮದಲ್ಲಿ ಇಷ್ಟೇ ಸಂಖ್ಯೆಯ ಮಂದಿ ಭಾಗವಹಿಸುವ ಸಾಧ್ಯತೆಯಿದೆ ಎಂದು ಡಾ.ಪಾಟೀಲ್ ಹೇಳಿದರು.
ಸುಮಾರು 5 ಲಕ್ಷ ಯುವಕರನ್ನು ಅರ್ಹ ಫಲಾನುಭವಿಗಳೆಂದು ಗುರುತಿಸಲಾಗಿದೆ. ಅರ್ಜಿದಾರರು ಕರ್ನಾಟಕದ ನಿವಾಸಿಗಳಾಗಿರಬೇಕು ಮತ್ತು ಅವರು 2022-23 ಶೈಕ್ಷಣಿಕ ವರ್ಷದಲ್ಲಿ ತಮ್ಮ ಪದವಿ ಅಥವಾ ಡಿಪ್ಲೊಮಾವನ್ನು ಉತ್ತೀರ್ಣರಾಗಿರಬೇಕು. ಅರ್ಹ ಫಲಾನುಭವಿಗಳು ನೇರ ಬ್ಯಾಂಕ್ ವರ್ಗಾವಣೆ (ಡಿಬಿಟಿ) ಮೂಲಕ ನೇರವಾಗಿ ತಮ್ಮ ಬ್ಯಾಂಕ್ ಖಾತೆಗಳಲ್ಲಿ ಮಾಸಿಕ ಸಹಾಯವನ್ನು ಪಡೆಯುತ್ತಾರೆ ಎಂದು ಡಾ ಪಾಟೀಲ್ ವಿವರಿಸಿದರು.
ಯುವನಿಧಿ ಯೋಜನೆ: ನಿರುದ್ಯೋಗಿಗಳಿಗೆ ಈ ಭತ್ಯೆ ಬೂಸ್ಟರ್ ಡೋಸ್ ಇದ್ದಂತೆ, ಸಚಿವ ಪರಮೇಶ್ವರ
ಷರತ್ತುಗಳನ್ನು ಪೂರೈಸುವ ಯುವಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅಥವಾ ತಮ್ಮ ಹತ್ತಿರದ ಕರ್ನಾಟಕ ಒನ್/ಬೆಂಗಳೂರು ಒನ್, ಗ್ರಾಮ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಡಾ ಪಾಟೀಲ್ ಹೇಳಿದರು. ಯುವ ನಿಧಿಯನ್ನು ಪ್ರಾರಂಭಿಸುವುದರೊಂದಿಗೆ, ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಚುನಾವಣಾ ಪ್ರಚಾರದ ಸಮಯದಲ್ಲಿ ಸಾರ್ವಜನಿಕರಿಗೆ ನೀಡಿದ ಎಲ್ಲಾ ಐದು ಭರವಸೆಗಳನ್ನು ಪೂರೈಸುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ