
ಬೆಂಗಳೂರು : ದೇಶದ ಅತಿದೊಡ್ಡ ದೂರಸಂಪರ್ಕ ಸೇವಾದಾರ ಕಂಪನಿಯಾದ ಏರ್ಟೆಲ್ನ 4ಜಿ ನೆಟ್ವರ್ಕ್ ಸೇವೆ ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ವ್ಯತ್ಯಯವಾಗುತ್ತಿದೆ. ಈ ಕುರಿತು ಗ್ರಾಹಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬೆಂಗಳೂರು, ಮೈಸೂರು, ಧಾರವಾಡ,ದಕ್ಷಿಣ ಕನ್ನಡ, ಮಂಡ್ಯ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಯಾದಗಿರಿ, ಚಿತ್ರದುರ್ಗ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಎರಡು ದಿನಗಳಿಂದ ಏರ್ಟೆಲ್ನ 4ಜಿ ಸೇವೆಯಲ್ಲಿ ವ್ಯತ್ಯಯವಾಗುತ್ತಿದೆ.
ಏರ್ಟೆಲ್ನ ಗ್ರಾಹಕ ಸೇವಾ ಅಧಿಕಾರಿಗಳನ್ನು ಈ ಕುರಿತು ಸಂಪರ್ಕಿಸಿ ದಾಗ ಶೀಘ್ರ ಈ ಸಮಸ್ಯೆ ಬಗೆಹರಿಯಲಿದೆ ಎನ್ನುವ ಭರವಸೆ ಸಿಗುತ್ತಿದೆ. ಆದರೂ ಪದೇ ಪದೆ ನೆಟ್ವರ್ಕ್ ಕೈ ಕೊಡುವುದು, ನಿಧಾನವಾಗುವುದು ಸೇರಿದಂತೆ ಹಲವು ಸಮಸ್ಯೆಗಳಿಂದ ಗ್ರಾಹಕರು ಕಿರಿಕಿರಿ ಎದುರಿ ಸುತ್ತಿದ್ದಾರೆ. ಕೆಲ ಗ್ರಾಹಕರಂತೂ ಏರ್ಟೆಲ್ನಿಂದ ಪೋರ್ಟ್ ಆಗಲೂ ಚಿಂತನೆ ನಡೆಸುತ್ತಿದ್ದೇವೆ ಎಂದು ಹೇಳಿಕೊಂಡಿದ್ದಾರೆ.
ಈ ಬಗ್ಗೆ ಕನ್ನಡಪ್ರಭ ಏರ್ ಟೆಲ್ ನೆಟ್ವರ್ಕ್ ಇಂಜಿನಿಯರ್ ಒಬ್ಬರನ್ನು ಸಂಪರ್ಕಸಿದರೆ, ನೆಟ್ವರ್ಕ್ ಸಂಬಂಧಿಸಿದಂತೆ ಹೆಚ್ಚು ದೂರುಗಳು ಬಂದಿಲ್ಲ. ನಿಮ್ಮ ದೂರಿನ ಆಧಾರದ ಮೇಲೆ ನೆಟ್ವರ್ಕ್ ಸಮಸ್ಯೆ ಪರಿಶೀಲಿಸುತ್ತೇವೆ ಎಂದು ಹೇಳುತ್ತಾರೆ. ಆದರೆ ನಗರದ ಬಹುತೇಕ ಕಡೆಗಳಲ್ಲಿ ನೆಟ್ವರ್ಕ್ ಸಮಸ್ಯೆ ಉಂಟಾಗಿ ಜನರು ತೀವ್ರವಾಗಿ ಪರದಾಡಿದ್ದಾರೆ. ನೆಟ್ವರ್ಕ್ ಸೇವೆಗಳ ಮೂಲಕವೇ ವ್ಯಾಪಾರ ವಹಿವಾಟು, ಹಲವು ತುರ್ತು ಸೇವೆಗಳನ್ನು ಪಡೆಯಲು ತೊಂದರೆಯಾಯಿತು.
ಸ್ಮಾರ್ಟ್ಫೋನ್ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್ಡೇಟ್. ಡಿಜಿಟಲ್ ಟ್ರೆಂಡ್ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್ಅಪ್ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.