
ಬೆಂಗಳೂರು: ಬಿಜೆಪಿ ನಾಯಕ, ಕೇಂದ್ರ ಸಚಿವ ಅನಂತ್ ಕುಮಾರ್ ಇಹಲೋಕ ಪಯಣವನ್ನು ಮುಗಿಸಿದ್ದಾರೆ. ರಾಜಕಾರಣಿಯಾಗಿದ್ದು, ಸಂಸದನಿಂದ ಕೇಂದ್ರ ಸಚಿವ ಹುದ್ದೆಗೇರಿದರೂ, ಜನರನ್ನು ತಲುಪುವ ಹಾಗೂ ಜನರು ಅವರನ್ನು ತಲುಪುವ ಯಾವುದೇ ಅವಕಾಶವನನ್ನು ಅವರು ಮಿಸ್ ಮಾಡಿಕೊಳ್ಳಲು ಇಷ್ಟಪಡುತ್ತಿರಲಿಲ್ಲ. ಆದಕ್ಕಾಗಿ ಅವರು ಸಂವಹನ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸುವವರಲ್ಲಿ ಅವರೂ ಒಬ್ಬರು.
ಅದಕ್ಕೆ ಅವರ ಈ ನಡೆಯೇ ಸಾಕ್ಷಿ:
ಮೊದಲ ಬಾರಿಗೆ 1996ರಲ್ಲಿ ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ ಅವರು ನಂತರ 1998ರ ಸಾರ್ವತ್ರಿಕ ಚುನಾವಣೆಯಲ್ಲಿ www.dataindia.com ಮತ್ತು www.ananth.org ವೆಬ್ ಸೈಟ್ ಗಳನ್ನು ಪ್ರಾರಂಭಿಸುವ ಮೂಲಕ ಸ್ವಂತ ವೆಬ್ ಸೈಟ್ ನ್ನು ಪ್ರಾರಂಭಿಸಿದ ಮೊದಲ ರಾಜಕಾರಣಿ ಎನ್ನುವ ಖ್ಯಾತಿಗೆ ಅನಂತ್ ಕುಮಾರ್ ಪಾತ್ರರಾಗಿದ್ದರು.
ಟ್ವಿಟರ್ ಹಾಗೂ ಫೇಸ್ಬುಕ್ ನಂಥ ಸೋಶಿಯಲ್ ಮೀಡಿಯಾದಲ್ಲೂ ಬಲು ಸಕ್ರಿಯರಾಗಿದ್ದ ಅನಂತ್ ಕುಮಾರ್ ಲಕ್ಷಾಂತರ ಫಾಲೋವರ್ ಗಳನ್ನು ಹೊಂದಿದ್ದರು. ಟ್ವೀಟರ್ ನಲ್ಲಿ 3.35 ಲಕ್ಷ ಹಾಗೂ 7.78 ಫಾಲೋವರ್ಗಳನ್ನು ಹೊಂದಿದ್ದ ಅವರು ಜನರ ಸಲಹೆ-ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು.
ಅ.27 ರಂದು ಅವರು ಮಾಡಿರುವ ಫೇಸ್ಬುಕ್ ಪೋಸ್ಟ್ ಮತ್ತು ಟ್ವೀಟ್ ಬೆಂಗಳೂರು ಹಾಗೂ ಪರಿಸರದ ಬಗ್ಗೆಗಿನ ಅವರ ಬದ್ಧತೆಯನ್ನು ಸೂಚಿಸುತ್ತದೆ.
ಸ್ಮಾರ್ಟ್ಫೋನ್ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್ಡೇಟ್. ಡಿಜಿಟಲ್ ಟ್ರೆಂಡ್ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್ಅಪ್ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.