
ಬೆಂಗಳೂರು[ಜು.27]: ಭಾರತದ ಮಹತ್ವಾಕಾಂಕ್ಷೆ ಯೋಜನೆಯಾದ ಚಂದ್ರಯಾನ-2 ನೌಕೆಯ ಕಕ್ಷೆಯನ್ನು ಎರಡನೇ ಬಾರಿಗೆ ಎತ್ತರಿಸುವ ಕಾರ್ಯವನ್ನು ಶುಕ್ರವಾರ ನಡೆಸಲಾಗಿದೆ. ಇದರಿಂದಾಗಿ ಚಂದ್ರನತ್ತ ನೌಕೆ ಮತ್ತೊಂದು ಹೆಜ್ಜೆ ಇಟ್ಟಂತಾಗಿದೆ.
ಶುಕ್ರವಾರ ಬೆಳಿಗ್ಗೆ 1.08 ನಿಮಿಷಕ್ಕೆ 15 ನಿಮಿಷಗಳ ಕಾಲ ಅಂತರಿಕ್ಷದಲ್ಲಿ ನೌಕೆಯ ಇಂಧನವನ್ನು ಉರಿಸುವ ಮೂಲಕ ಭೂ ಕಕ್ಷೆಯಿಂದ ನೌಕೆಯನ್ನು ಎತ್ತರಿಸಲಾಯಿತು. ನೌಕೆಯ ಎಲ್ಲ ಯಂತ್ರಗಳು ಸಾಮಾನ್ಯ ಸ್ಥಿತಿಯಲ್ಲಿದ್ದು, ಜುಲೈ 29ರಂದು ಮೂರನೇ ಬಾರಿಗೆ ಕಕ್ಷೆ ಎತ್ತರಿಸುವ ಕಾರ್ಯ ನಡೆಸಲಾಗುತ್ತದೆ ಎಂದು ಇಸ್ರೋ ವಿಜ್ಞಾನಿಗಳು ತಿಳಿಸಿದ್ದಾರೆ.
ಬುಧವಾರವಷ್ಟೇ ಎರಡನೇ ಹಂತದ ಕಕ್ಷೆ ಎತ್ತರಿಸುವ ಕಾರ್ಯ ನಡೆದಿತ್ತು.
ಸ್ಮಾರ್ಟ್ಫೋನ್ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್ಡೇಟ್. ಡಿಜಿಟಲ್ ಟ್ರೆಂಡ್ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್ಅಪ್ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.