
ಬೆಂಗಳೂರು : ವಿದ್ಯಾರ್ಥಿಗಳು, ಶಿಕ್ಷಕರು, ನಾಗರಿಕರು ಹೀಗೆ ವಿವಿಧ ವರ್ಗದ ಓದುಗರಿಗೆ ಯಾವ ರೀತಿಯಲ್ಲಿ ವಿಜ್ಞಾನ ವಿಷಯಗಳನ್ನು ಮುಟ್ಟಿಸಬೇಕೆಂಬ ಗೊಂದಲವಿದೆ. ಈ ಬಗ್ಗೆ ಮಾಧ್ಯಮಗಳಿಗೆ ವಿಜ್ಞಾನ ಬರಹಗಾರರ ಸಲಹೆ ಸೂಚನೆ ಅವಶ್ಯವಿದೆ ಎಂದು ಸುವರ್ಣ ನ್ಯೂಸ್ . ಕಾಂ ಮುಖ್ಯ ಸಂಪಾದಕರಾದ ಎಸ್.ಕೆ. ಶ್ಯಾಮಸುಂದರ್ ಹೇಳಿದರು.
ವಿಜ್ಞಾನ ಪತ್ರಿಕೆಯ ಶತಮಾನೋತ್ಸವ ಸ್ಮರಣೆ ಅಂಗವಾಗಿ ಜಯನಗರ ನ್ಯಾಷನಲ್ ಕಾಲೇಜಿನಲ್ಲಿ ಭಾನುವಾರ ಆಯೋಜಿಸಿದ್ದ ‘ಕನ್ನಡ ಪತ್ರಿಕೆಗಳಲ್ಲಿ ವಿಜ್ಞಾನ’ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಲ್ಲರಿಗೂ ಸುಲಭವಾಗಿ ವಿಜ್ಞಾನ ತಲುಪುವಂತಹ ವಾತಾವರಣ ನಿರ್ಮಾಣ ಮಾಡಿದರೆ, ಮಾಧ್ಯಮಗಳು ಓದುಗರಿಗೆ ಆಸಕ್ತರಾಗಿರುವ ವಿಜ್ಞಾನ ವಿಷಯಗಳನ್ನು ತಲುಪಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.
ಪತ್ರಿಕೆಗಳಲ್ಲಿ ವಿಜ್ಞಾನ ಬರಹಗಳನ್ನು ಬರೆಯುವ ಎಲ್ಲರಿಗೂ ವಿಜ್ಞಾನದ ಜ್ಞಾನ ಇರುವುದಿಲ್ಲ. ಹೀಗಾಗಿ, ಇದೇ ಕ್ಷೇತ್ರದಲ್ಲಿ ತೊಡಗಿಸಿ ಕೊಂಡಿರುವ ಬರಹಗಾರರು ಸಲಹೆ ಸೂಚನೆಗಳನ್ನು ನೀಡಬೇಕಿದೆ ಎಂದರು.
ಭೌತಶಾಸ್ತ್ರದ ನಿವೃತ್ತ ಪ್ರಾಧ್ಯಾಪಕ ಪ್ರೊ. ಎಚ್. ಆರ್. ರಾಮಕೃಷ್ಣರಾವ್ ಮಾತನಾಡಿ, ವಿಜ್ಞಾನ ಪತ್ರಿಕೆಯು ಬೆಳೆದು ಬಂದ ಹಾದಿ, ಆರಂಭದಲ್ಲಿ ವಿಜ್ಞಾನದ ಭಾಷೆ, ಸದ್ಯದ ಪರಿಸ್ಥಿತಿ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ನ್ಯಾಷನಲ್ ಕಾಲೇಜು ಅಧ್ಯಕ್ಷ ಡಾ. ಎ.ಎಚ್. ರಾಮರಾವ್, ಆಕಾಶವಾಣಿ ಬೆಂಗಳೂರು ಪ್ರಾದೇಶಿಕ ವಿಭಾಗದ ನಿರ್ದೇಶಕ ಜಿ.ಕೆ. ರವೀಂದ್ರಕುಮಾರ್, ಕನ್ನಡಪ್ರಭ ಸಹಾಯಕ ಸಂಪಾದಕ ರವಿಶಂಕರ್ ಭಟ್, ಸಮಯ ಟಿವಿ ಪ್ರಧಾನ ಸಂಪಾದಕ ಟಿ.ಆರ್. ಶಿವಪ್ರಸಾದ್ ಪಾಲ್ಗೊಂಡಿದ್ದರು.
ಸ್ಮಾರ್ಟ್ಫೋನ್ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್ಡೇಟ್. ಡಿಜಿಟಲ್ ಟ್ರೆಂಡ್ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್ಅಪ್ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.