ವಾಟ್ಸಾಪ್ ನಲ್ಲಿ ನಕಲಿ ಸಂದೇಶ ಪತ್ತೆ ವ್ಯವಸ್ಥೆ ಜಾರಿಗೆ ಸೂಚನೆ

Published : Aug 22, 2018, 11:28 AM ISTUpdated : Sep 09, 2018, 09:47 PM IST
ವಾಟ್ಸಾಪ್ ನಲ್ಲಿ ನಕಲಿ ಸಂದೇಶ ಪತ್ತೆ ವ್ಯವಸ್ಥೆ ಜಾರಿಗೆ ಸೂಚನೆ

ಸಾರಾಂಶ

ವಾಟ್ಸಾಪಲ್ಲಿ ನಕಲಿ ಸಂದೇಶ ಪತ್ತೆಗೆ ವ್ಯವಸ್ಥೆ ಜಾರಿ ಮಾಡಬೇಕು ಎಂದು ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಅವರು ವಾಟ್ಸಾಪ್ ನಿರ್ದೇಶನ ಮಾಡಿದ್ದಾರೆ. 

ನವದೆಹಲಿ: ನಕಲಿ ಸಂದೇಶ ಹರಡುತ್ತಿರುವವರ ಮೂಲ ಪತ್ತೆ ಮತ್ತು ಅದಕ್ಕೆ ತಾಂತ್ರಿಕ ಪರಿಹಾರ ಕಂಡುಕೊಳ್ಳುವಂತೆ ಹಾಗೂ ಭಾರತದಲ್ಲಿ ತನ್ನ ಸ್ಥಳೀಯ ಕಾರ್ಪೊರೇಟ್‌ ಕಚೇರಿ ತೆರೆಯುವಂತೆ ವಾಟ್ಸಪ್‌ಗೆ ಸರ್ಕಾರ ಮಂಗಳವಾರ ನಿರ್ದೇಶಿಸಿದೆ. ವಾಟ್ಸಪ್‌ ಮುಖ್ಯಸ್ಥ ಕ್ರಿಸ್‌ ಡೇನಿಯಲ್ಸ್‌ ಜೊತೆ ಮಾತುಕತೆಯ ಬಳಿಕ ಐಟಿ ಸಚಿವ ರವಿಶಂಕರ್‌ ಪ್ರಸಾದ್‌ ಈ ವಿಷಯ ತಿಳಿಸಿದ್ದಾರೆ.

ವಾಟ್ಸಪ್‌ ದೇಶದ ಡಿಜಿಟಲ್‌ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ನಿಭಾಯಿಸಿದೆ. ಆದರೆ, ಗುಂಪು ಹತ್ಯೆ ಮತ್ತು ಪ್ರತೀಕಾರದ ಅಶ್ಲೀಲ ಚಿತ್ರಗಳಂತಹ ಕೆಟ್ಟ ಬೆಳವಣಿಗೆಯನ್ನು ನಿರ್ವಹಿಸಲು ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ. ಸ್ಥಳೀಯ ದೂರು ಪರಿಹಾರ ಅಧಿಕಾರಿ ನೇಮಕವೂ ಆಗಬೇಕಿದೆ. ನಕಲಿ ಮತ್ತು ಪ್ರಚೋದನಾತ್ಮಕ ಸಂದೇಶಗಳ ಮೂಲ ಪತ್ತೆ ಹಚ್ಚುವುದಕ್ಕೆ ವ್ಯವಸ್ಥೆ ರೂಪಿಸಬೇಕು ಎಂದು ಡೇನಿಯಲ್ಸ್‌ಗೆ ತಿಳಿಸಿರುವುದಾಗಿ ಸಚಿವರು ತಿಳಿಸಿದ್ದಾರೆ.

ಈ ಕುರಿತು ಕ್ರಮ ಕೈಗೊಳ್ಳದಿದ್ದಲ್ಲಿ ವಾಟ್ಸಪ್‌, ಹಿಂಸೆಗೆ ಕಾರಣವಾದ ವದಂತಿ ಹರಡಲು ಪ್ರಚೋದನೆ ಅಥವಾ ಕುಮ್ಮಕ್ಕು ನೀಡಿದ ಪ್ರಕರಣ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದೇನೆ. ವಾಟ್ಸಪ್‌ ಪಾವತಿ ಸೇವೆಗಳ ವಿಷಯದಲ್ಲಿ ಆರ್‌ಬಿಐ ನೀತಿಗಳನ್ನು ಪಾಲಿಸುವಂತೆಯೂ ನಿರ್ದೇಶಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಕಂಪೆನಿ ಕಾರ್ಯನಿರ್ವಹಿಸಲಿದೆ ಎಂದು ಡೇನಿಯಲ್ಸ್‌ ಭರವಸೆ ನೀಡಿದುದಾಗಿ ಪ್ರಸಾದ್‌ ಹೇಳಿದ್ದಾರೆ.

PREV

ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್‌ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್‌. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್‌ ಸಿಗುವ ಏಕೈಕ ತಾಣ ಏಷ್ಯಾನೆಟ್‌ ಸುವರ್ಣ ನ್ಯೂಸ್‌. ಹೊಸ ಗ್ಯಾಜೆಟ್‌ ರಿಲೀಸ್‌ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್‌ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್‌ ಎಕ್ಸ್‌ಪ್ಲೇನರ್ಸ್‌ ಹಾಗೂ ಗ್ಯಾಜೆಟ್‌ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.

click me!

Recommended Stories

ಗ್ರಾಹಕರಿಗೆ ಬಂಪರ್‌ ಪ್ಲ್ಯಾನ್‌ ಘೋಷಿಸಿದ Vi: 61 ರೂಪಾಯಿಯ ಮೊಬೈಲ್‌ ರಿಚಾರ್ಜ್‌ಗೆ 25 ಸಾವಿರದ ಬೆನಿಫಿಟ್‌!
ಪುರುಷರಿಗೆ ಮಾತ್ರವಲ್ಲ ಮೊಬೈಲ್‌ ಸೇಫ್ಟಿಗೆ ಬಂದಿದೆ ಕಾಂಡೋಮ್‌, ಏನಿದು USB ಕಾಂಡೋಮ್‌?