ಪ್ರಧಾನಿ ನಮ್ಮೆಲ್ಲರ ಸ್ಪೂರ್ತಿಯ ಮೂಲ: ಇಸ್ರೋ ಅಧ್ಯಕ್ಷ!

Published : Sep 07, 2019, 09:57 PM ISTUpdated : Sep 07, 2019, 10:01 PM IST
ಪ್ರಧಾನಿ ನಮ್ಮೆಲ್ಲರ ಸ್ಪೂರ್ತಿಯ ಮೂಲ: ಇಸ್ರೋ ಅಧ್ಯಕ್ಷ!

ಸಾರಾಂಶ

ಚಂದ್ರಯಾನ-2 ಯೋಜನೆ ಹಿನ್ನಡೆ ಹಿನ್ನೆಲೆ|  ಲ್ಯಾಂಡರ್ ಸಂಪರ್ಕ ಕಡಿತದ ಕುರಿತು ಇಸ್ರೋ ಅಧ್ಯಕ್ಷ ಪ್ರತಿಕ್ರಿಯೆ| ‘14 ದಿನಗಳ ಕಾಲ ಲ್ಯಾಂಡರ್’ನೊಂದಿಗೆ ಸಂಪರ್ಕ ಸಾಧಿಸುವ ಪ್ರಯತ್ನ’| ಪ್ರಧಾನಿ ಮೋದಿ ನಮ್ಮೆಲ್ಲರ ಸ್ಫೂರ್ತಿಯ ಮೂಲ ಎಂದ ಕೆ. ಸಿವನ್|

ನವದೆಹಲಿ(ಸೆ.07): ಚಂದ್ರಯಾನ-2 ಲ್ಯಾಂಡರ್ ಸಂಪರ್ಕ ಕಡಿತದ ಕುರಿತು ಇಸ್ರೋ ಅಧ್ಯಕ್ಷ ಕೆ.ಸಿವನ್ ಪ್ರತಿಕ್ರಿಯಿಸಿದ್ದು, ಇನ್ನೂ 14 ದಿನಗಳ ಕಾಲ ಲ್ಯಾಂಡರ್’ನೊಂದಿಗೆ ಸಂಪರ್ಕ ಸಾಧಿಸಲು ಯತ್ನಿಸುತ್ತೇವೆ ಎಂದು ಹೇಳಿದ್ದಾರೆ.

ಯೋಜನೆಯ ಕೊನೆಯ ಹಂತವನ್ನು ಸರಿಯಾಗಿ ಕಾರ್ಯಗತಗೊಳಿಸಲು ಸಾಧ್ಯವಾಗಲಿಲ್ಲ, ಆ ಹಂತದಲ್ಲಿ ಲ್ಯಾಂಡರ್ ಜೊತೆ ಸಂಪರ್ಕ ಕಡಿದು ಹೋಯಿತು. ನಂತರ ಮತ್ತೆ ಸಂಪರ್ಕ ಸಾಧಿಸುವುದಕ್ಕೆ ಸಾಧ್ಯವಾಗಲಿಲ್ಲ ಎಂದು ಸಿವನ್ ಹೇಳಿದ್ದಾರೆ. 

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಬೆಂಬಲದ ಕುರಿತು ಮಾತನಾಡಿರುವ ಸಿವನ್, ಅವರು ನಮ್ಮೆಲ್ಲರ ಸ್ಫೂರ್ತಿಯ ಮೂಲ ಎಂದು ಶ್ಲಾಘಿಸಿದ್ದಾರೆ .

ಪ್ರಧಾನಿ ನಮ್ಮೆಲ್ಲರ ಸ್ಪೂರ್ತಿ ಹಾಗೂ ಬೆಂಬಲದ ಮೂಲ. ವಿಜ್ಞಾನವನ್ನು ಫಲಿತಾಂಶಗಳಿಗಾಗಿ ಅಷ್ಟೇ ನೋಡಬಾರದು, ನಿರಂತರ ಪ್ರಯೋಗ ಫಲಿತಾಂಶಕ್ಕೆ ದಾರಿ ಮಾಡಿಕೊಡುತ್ತದೆ ಎಂಬ ವಿಶೇಷ ಅಂಶವನ್ನು ಪ್ರಧಾನಿ ತಮ್ಮ ಭಾಷಣದಲ್ಲಿ ಹೇಳಿದ್ದನ್ನು ತಾವು ಗಮನಿಸಿದ್ದಾಗಿ ಸಿವನ್ ನುಡಿದಿದ್ದಾರೆ.

PREV

ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್‌ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್‌. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್‌ ಸಿಗುವ ಏಕೈಕ ತಾಣ ಏಷ್ಯಾನೆಟ್‌ ಸುವರ್ಣ ನ್ಯೂಸ್‌. ಹೊಸ ಗ್ಯಾಜೆಟ್‌ ರಿಲೀಸ್‌ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್‌ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್‌ ಎಕ್ಸ್‌ಪ್ಲೇನರ್ಸ್‌ ಹಾಗೂ ಗ್ಯಾಜೆಟ್‌ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.

click me!

Recommended Stories

ಹೊಸ ವರ್ಷದ ಆರಂಭದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ರೆಡ್ಮಿ ಮಾಸ್ಟರ್‌ ಪಿಕ್ಸೆಲ್‌ ಫೋನ್‌, ಬೆಲೆ ಎಷ್ಟು ಕಡಿಮೆ ಗೊತ್ತಾ?
ಒಪ್ಪೊ ಫೈಂಡ್ X9 ಸೀರಿಸ್, ಪ್ರೋ ಲೆವಲ್ ಕ್ಯಾಮೆರಾ,AI ಟೂಲ್ಸ್ ಜೊತೆ ಸುದೀರ್ಘ ಸಮಯದ ಬ್ಯಾಟರಿ ಸ್ಮಾರ್ಟ್‌ಫೋನ್