
ನವದೆಹಲಿ[ಸೆ.21]: ಚಂದ್ರಯಾನ-2 ನೌಕೆಯ ‘ವಿಕ್ರಮ್’ ಲ್ಯಾಂಡರ್ ಜತೆ ಸಂಪರ್ಕ ಸಾಧಿಸಲು ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ವಿಜ್ಞಾನಿಗಳಿಗೆ ಇದ್ದ ಕಟ್ಟಕಡೆಯ ಅವಕಾಶವೂ ಬಹುತೇಕ ಕೊನೆಗೊಂಡಿದೆ. ಹೀಗಾಗಿ ಚಂದ್ರನ ಮೇಲೆ ಇಳಿಯುವಾಗ ಕೊನೆಯ ಕ್ಷಣದಲ್ಲಿ ಸಂಪರ್ಕ ಕಡಿದುಕೊಂಡ ಲ್ಯಾಂಡರ್ ಜೊತೆ ಮರು ಸಂಪರ್ಕ ಸಾಧಿಸುವ ಇಸ್ರೋದ ಯತ್ನ ಕನಸಾಗಿಯೇ ಉಳಿದಿದೆ. ಚಂದ್ರನ ಮೇಲೆ ಶನಿವಾರ ಮುಂಜಾನೆಯಿಂದ ಕತ್ತಲು ಕವಿಯಲು ಆರಂಭವಾಗಲಿದೆ. ಹೀಗಾಗಿ ವಿಕ್ರಮ್ ಲ್ಯಾಂಡರ್ ಶಾಶ್ವತವಾಗಿ ಸ್ತಬ್ಧವಾಗಲಿದೆ.
ರಾತ್ರಿ ವೇಳೆ ಚಂದ್ರನಲ್ಲಿ ಮೈನಸ್ 240 ಡಿಗ್ರಿವರೆಗೂ ಉಷ್ಣಾಂಶವಿರಲಿದೆ. ಇಂತಹ ಪ್ರತಿಕೂಲ ಹವಾಮಾನದಲ್ಲಿ ಲ್ಯಾಂಡರ್ ಹಾಗೂ ಅದರ ಒಡಲಲ್ಲಿರುವ ‘ಪ್ರಜ್ಞಾನ್’ ರೋವರ್ ಬ್ಯಾಟರಿಗಳು ಕಾರ್ಯನಿರ್ವಹಿಸುವುದಿಲ್ಲ. ಚಂದ್ರನ ಮೇಲೆ 14 ದಿನಗಳ ಬಳಿಕ ಹಗಲು ಆರಂಭವಾದ ಬಳಿಕ ಲ್ಯಾಂಡರ್ ಬಿದ್ದಿರುವ ಸ್ಥಳವನ್ನು ಪತ್ತೆ ಮಾಡಬಹುದಾಗಿದೆ.
ಸೆ.7ರ ನಸುಕಿನ ವೇಳೆ ಚಂದ್ರನ ಮೇಲ್ಮೈಗೆ ಹತ್ತಿರದಲ್ಲಿರುವಾಗ ಲ್ಯಾಂಡರ್ ಸಂಪರ್ಕ ಕಡಿದುಕೊಂಡಿತ್ತು. ಅಂದಿನಿಂದಲೂ ಇಸ್ರೋ ವಿಜ್ಞಾನಿಗಳು ಸಾಧ್ಯವಿರುವ ಎಲ್ಲ ಪ್ರಯತ್ನ ನಡೆಸಿ ಅದರ ಜತೆ ಸಂಪರ್ಕ ಸಾಧಿಸಲು ಯತ್ನಿಸುತ್ತಲೇ ಬಂದಿತ್ತು. ಈ ನಡುವೆ, ನಾಸಾದ ಆರ್ಬಿಟರ್ ಕೂಡ ಲ್ಯಾಂಡರ್ ಇರುವ ಸ್ಥಳದ ಚಿತ್ರವನ್ನು ಸೆರೆ ಹಿಡಿಯಲು ಯತ್ನ ನಡೆಸಿತ್ತು.
ಸ್ಮಾರ್ಟ್ಫೋನ್ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್ಡೇಟ್. ಡಿಜಿಟಲ್ ಟ್ರೆಂಡ್ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್ಅಪ್ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.