
ನವದೆಹಲಿ(ಸೆ.10): ಇಸ್ರೋ ವಿಜ್ಞಾನಿಗಳು ವಿಕ್ರಮ್ ಲ್ಯಾಂಡರ್ ಸಂಪರ್ಕಕ್ಕಾಗಿ ನಿರಂತರವಾಗಿ ಪ್ರಯತ್ನ ನಡೆಸಿದ್ದಾರೆ. ಈ ಮೂಲಕ ಚಂದ್ರಯಾನ-2 ಯೋಜನೆಯ ಯಶಸ್ಸಿಗಾಗಿ ವಿಜ್ಞಾನಿಗಳು ಶ್ರಮಿಸುತ್ತಿದ್ದಾರೆ.
ಆದರೆ ಕೇಂದ್ರ ಸರ್ಕಾರ ಇಸ್ರೋದ ವಿಜ್ಞಾನಿಗಳು ಹಾಗೂ ಇಂಜಿನಿಯರ್'ಗಳ ಹೆಚ್ಚುವರಿ ವೇತನ ಹೆಚ್ಚಳದ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಇಸ್ರೋದ ಹಿರಿಯ ಸಿಬ್ಬಂದಿಯ ಇನ್ಕ್ರಿಮೆಂಟ್ ಕಡಿತಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಕಳೆದ ಜೂನ್ 12ರಂದು ಬಾಹ್ಯಾಕಾಶ ಇಲಾಖೆಯ ಅಧೀನ ಕಾರ್ಯದರ್ಶಿ ಎಂ ರಾಮದಾಸ್ ಹೊರಡಿಸಿರುವ ಆದೇಶದನ್ವಯ, ಎಸ್ಡಿ, ಎಸ್ಇ, ಎಸ್ಎಫ್ ಮತ್ತು ಎಸ್ಜಿ ದರ್ಜೆಯ ವಿಜ್ಞಾನಿಗಳು/ಇಂಜಿನಿಯರ್'ಗಳಿಗೆ ನೀಡಲಾಗಿದ್ದ ಎರಡು ಹೆಚ್ಚುವರಿ ವೇತನವನ್ನು ಜುಲೈ 1, 2019ರಿಂದ ಜಾರಿಗೆ ಬರುವಂತೆ ಕಡಿತಗೊಳಿಸಲಾಗಿದೆ.
6ನೇ ಕೇಂದ್ರ ವೇತನ ಆಯೋಗದ ಶಿಫಾರಸ್ಸು ಮತ್ತು ಕಾರ್ಯಕ್ಷಮತೆಗೆ ಸಂಬಂಧಿತ ಪ್ರೋತ್ಸಾಹಕ ಯೋಜನೆ(PRS ) ಜಾರಿಗೆ ಬಂದ ಪರಿಣಾಮವಾಗಿ, ಹೆಚ್ಚುವರಿ ವೇತನವನ್ನುಕಡಿತಗೊಳಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿರುವ ಬಾಹ್ಯಾಕಾಶ ಇಂಜಿನಿಯರ್ ಸಂಘದ ಪ್ರಧಾನ ಕಾರ್ಯದರ್ಶಿ ಕೆ ಸಂತೋಷ್ ಕುಮಾರ್, ಇದು ಸಂಸ್ಥೆಯ ಆಂತರಿಕ ವಿಷಯವಾಗಿದ್ದು ಸದ್ಯ ಪ್ರತಿಕ್ರಿಯೆ ನೀಡುವುದು ಸರಿಯಲ್ಲ ಎಂದಿದ್ದಾರೆ.
ಆದರೆ ಪ್ರಸಕ್ತ ಆದೇಶ ಹಿಂಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವಂತೆ ಇಂಜಿನಿಯರ್'ಗಳ ಸಂಘ ಇಸ್ರೋ ಅಧ್ಯಕ್ಷ ಕೆ ಶಿವನ್ ಅವರಿಗೆ ಮನವಿ ಮಾಡಿದೆ.
ಸ್ಮಾರ್ಟ್ಫೋನ್ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್ಡೇಟ್. ಡಿಜಿಟಲ್ ಟ್ರೆಂಡ್ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್ಅಪ್ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.