ದುಬಾರಿಯಾಯ್ತು ಚಿಕ್ಕಬಳ್ಳಾಪುರದ ಸ್ಕಂದಗಿರಿ ಬೆಟ್ಟ ಪ್ರವೇಶ: ಚಾರಣಿಗರ ಆಕ್ರೋಶ

Published : May 21, 2023, 09:25 PM IST
ದುಬಾರಿಯಾಯ್ತು ಚಿಕ್ಕಬಳ್ಳಾಪುರದ ಸ್ಕಂದಗಿರಿ ಬೆಟ್ಟ ಪ್ರವೇಶ: ಚಾರಣಿಗರ ಆಕ್ರೋಶ

ಸಾರಾಂಶ

ಚಾರಣಿಗರ ಸ್ವರ್ಗಲೋಕ ಎಂದೆ ಖ್ಯಾತಿಯಾಗಿರುವ ಸ್ಕಂದಗಿರಿ ಬೆಟ್ಟ ತಾಲೂಕಿನ ಕಳವಾರ ಗ್ರಾಮದ ಬಳಿ ಇದ್ದು, ಸ್ಕಂದಗಿರಿ ಬೆಟ್ಟ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿದ್ದು, ಸಮುದ್ರ ಮಟ್ಟದಿಂದ 1350 ಮೀಟರ್‌ ಗಳ ಎತ್ತರದಲ್ಲಿದೆ.   

ದಯಾಸಾಗರ್‌ ಆರ್‌.

ಚಿಕ್ಕಬಳ್ಳಾಪುರ (ಮೇ.21): ಚಾರಣಿಗರ ಸ್ವರ್ಗಲೋಕ ಎಂದೆ ಖ್ಯಾತಿಯಾಗಿರುವ ಸ್ಕಂದಗಿರಿ ಬೆಟ್ಟ ತಾಲೂಕಿನ ಕಳವಾರ ಗ್ರಾಮದ ಬಳಿ ಇದ್ದು, ಸ್ಕಂದಗಿರಿ ಬೆಟ್ಟ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿದ್ದು, ಸಮುದ್ರ ಮಟ್ಟದಿಂದ 1350 ಮೀಟರ್‌ ಗಳ ಎತ್ತರದಲ್ಲಿದೆ. ಬೆಂಗಳೂರಿನಿಂದ ಕೇವಲ 65 ಕಿಲೋ ಮೀಟರ್‌ ದೂರ ಇರುವ ಕಾರಣ ರಾಜ್ಯದ ಸಾಕಷ್ಟು ಚಾರಣಿಗರು ಸೇರಿದಂತೆ ಐಟಿ ಬಿಟಿಯ ಟೆಕ್ಕಿಗಳು ವಾರಾಂತ್ಯ ಬಂದ್ರೆ ಸಾಕು ಸ್ಕಂದಗಿರಿಯತ್ತ ಮುಖ ಮಾಡುತ್ತಾರೆ. ಇದನ್ನೆ ಬಂಡವಾಳ ಮಾಡಿಕೊಂಡಿರುವ ಕರ್ನಾಟಕ ಇಕೊ ಟೂರಿಸಂ ಬೋರ್ಡ್‌ನವರು ಪ್ರವೇಶ ಶುಲ್ಕ ಏರಿಕೆ ಮಾಡಿ ಚಾರಣಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಸ್ಕಂದಗಿರಿಯ ಪ್ರಕೃತಿ ಸೌಂದರ್ಯ ಸವಿಯಲು ಪ್ರತಿನಿತ್ಯ ನೂರಾರು ಚಾರಣಿಗರು, ವಾರಾಂತ್ಯದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಇಲ್ಲಿಗೆ ಬರುತ್ತಾರೆ. ಚಾರಣ ಮಾಡಲು ತಲಾ ಇನ್ನೂರೈವತ್ತು ರೂಪಾಯಿಗಳನ್ನು ಇಷ್ಟು ದಿನ ನೀಡುತ್ತಿದ್ದರು. ಆದರೆ ಈಗ ಅದೆ ಚಾರಣಕ್ಕೆ ತಲಾ 607 ರುಪಾಯಿ ಶುಲ್ಕ ನೀಡಬೇಕಾದ ಅನಿವಾರ್ಯತೆ ಎದುರಾಗಿದೆ.

ಚನ್ನಪಟ್ಟಣ ಕ್ಷೇತ್ರದಲ್ಲಿ ಎಚ್‌ಡಿಕೆ ಮುಂದಿದೆ ಸಾಕಷ್ಟು ಅಭಿವೃದ್ಧಿ ಸವಾಲುಗಳು

ಚಾರಣಕ್ಕೆ ಯಾವುದೇ ಸೌಲಭ್ಯ ಇಲ್ಲ: ಸ್ಕಂದಗಿರಿ ಬೆಟ್ಟಕ್ಕೆ ಚಾರಣಕ್ಕೆ ಯಾವುದೇ ಮೆಟ್ಟಿಲಾಗಲಿ, ಟಾರ್‌ ರಸ್ತೆಯಾಗಲಿ, ಕೇಬಲ್‌ ಕಾರ್‌ಗಳಾಗಲಿ ಮತ್ತು ಇಕೊ ವಾಹನಗಳಾಗಲಿ ಇಲ್ಲ. ಪ್ರಕೃತಿ ದತ್ತವಾದ ಕಾಡಿನ ಮಾರ್ಗವೇ ಇಲ್ಲಿಯ ವೈಶಿಷ್ಟ್ಯ. ವಿಶ್ರಾಂತಿಗೆ ಕೊಠಡಿಗಳು, ಹಾದಿ ತಪ್ಪಿದರೆ ಅಥವಾ ಕಾಡು ಪ್ರಾಣಿಗಳಿಂದ ರಕ್ಷಿಸಲು ಭದ್ರತಾ ಸಿಬ್ಬಂದಿ ಮತ್ತು ಕನಿಷ್ಠ ಕುಡಿಯುವ ನೀರು ಸೇರಿದಂತೆ ಯಾವುದೆ ಮೂಲಭೂತ ಸೌಕರ್ಯಗಳು ಇಲ್ಲವೆ ಇಲ್ಲ. ಆದರೂ ಕರ್ನಾಟಕ ಇಕೊ ಟೂರಿಸಂ ಬೋರ್ಡ್‌ ಶನಿವಾರ, ಭಾನುವಾರ ಎರಡು ದಿನಗಳ ಕಾಲ ಬರುವ ಚಾರಣಿಗರಿಗೆ ಪ್ರವೇಶ ಶುಲ್ಕ ಹೆಚ್ಚಿಸಿದೆ.

ದಿಢೀರನೆ ಪ್ರವೇಶ ಶುಲ್ಕ ಹೆಚ್ಚಳ: ಅದರಲ್ಲಿ 500 ರುಪಾಯಿ ಪ್ರವೇಶ ಶುಲ್ಕ, ಟಿಕೇಟ್‌ ಬುಕಿಂಗ್‌ ಗೆ ಆನ್‌ ಲೈನ್‌ ವ್ಯವಸ್ಥೆ ಮಾಡಿದ್ದಕ್ಕೆ 14 ರೂಪಾಯಿ 50 ಪೈಸೆ, ಜಿ.ಎಸ್‌.ಟಿ ಶೇ 18 ಪರ್ಸೆಂಟ್‌ ಅಂತ 607 ರು.ಗಳನ್ನು ನಿಗದಿ ಮಾಡಿದೆ. ಇದರಿಂದಾಗಿ ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದವರು ದುಬಾರಿ ಹಣ ನೀಡಿ ಚಾರಣ ಮಾಡೋದು ಕನಸಿನ ಮಾತಾಗಿದೆ ಎಂದು ಚಾರಣಕ್ಕೆ ಬಂದಿದ್ದ ಚಿತ್ರದುರ್ಗದ ಮಹೇಶ್‌ ಮತ್ತು ಸಂಗಡಿಗರು, ಬೇಂಗಳೂರಿನ ಸ್ವಾತಿ ಹಾಗೂ ಅವರ ಜೊತೆ ಬಂದಿದ್ದವರು ಮತ್ತು ಇತರ ಚಾರಣಿಗರು ಅಸಮಧಾನ ವ್ಯಕ್ತಪಡಿಸಿ ಕರ್ನಾಟಕ ಇಕೊ ಟೂರಿಸಂ ಬೋರ್ಡ್‌ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಸಿಪಿಪಿ ಸಹಯೋಗದಲ್ಲಿ ಬಿಬಿಎಂಪಿಯಿಂದ ಹೆಮ್ಮಿಗೆಪುರ ವಾರ್ಡ್‌ನಲ್ಲಿ ವಿಶೇಷ ಸ್ವಚ್ಛತಾ ಅಭಿಯಾನ

ನಂದಿಗಿರಿಧಾಮಕ್ಕೆ ಬರೊ ಪ್ರವಾಸಿಗರು, ಸ್ವಲ್ಪ ತಡವಾಗಿ ಬಂದರೆ ನಂದಿಗಿರಿಧಾಮಕ್ಕೆ ವಾಹನಗಳ ಪ್ರವೇಶಕ್ಕೆ ಅವಕಾಶ ಸಿಗದೆ ಇದ್ದಾಗ ಪರ್ಯಾಯವಾಗಿ ಸ್ಕಂದಗಿರಿಯತ್ತ ಮುಖ ಮಾಡುತ್ತಾರೆ. ಈಶಾ ಕೇಂದ್ರಕ್ಕೆ ಬಂದವರೂ ಸಹಾ ಆಗಮಿಸುತ್ತಾರೆ. ಸ್ಕಂದಗಿರಿಯ ಬೆಳ್ಳಿ ಮೊಡಗಳಲ್ಲಿ ಪಯಣಸಿದ ಅನುಭವ, ಸೂರ್ಯೋದಯದ ವಿಹಂಗಮ ನೋಟ ನೋಡಿ ಅಸ್ವಾದಿಸ ಬಯಸುತ್ತಾರೆ. ಆದರೆ ಇಲ್ಲಿ ಯಾವುದೇ ಮೂಲಬೂತ ಸೌಲಭ್ಯ ಕಲ್ಪಿಸದಿದ್ದಾರೂ ಪ್ರವೇಶ ಶುಲ್ಕ ಮಾತ್ರ ಹೆಚ್ಚು ಮಾಡಲಾಗಿದೆ.

PREV

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಇದು ಭಾರತದ ಅತ್ಯಂತ ನಿಧಾನ ರೈಲು; 46 ಕಿ.ಮೀ ಪ್ರಯಾಣಕ್ಕೆ ಬರೋಬ್ಬರಿ 5 ಗಂಟೆ, ಟಿಕೆಟ್‌ ಸಿಗೋದಿಲ್ಲ ಅಷ್ಟು ರಶ್‌!
ವರದಕ್ಷಿಣೆ ರೂಪದಲ್ಲಿ ವಧುಗೆ ಸಿಗುತ್ತೆ ಪೋರ್ಟಬಲ್ ಟಾಯ್ಲೆಟ್ ! ವಿಚಿತ್ರವಾಗಿದೆ ಪದ್ಧತಿ