ಗಣೇಶ ಹಬ್ಬಕ್ಕೆ ಊರಿಗೆ ಹೋಗುವವರಿಗೆ ರೈಲ್ವೆ ಇಲಾಖೆಯಿಂದ ಸಿಹಿ ಸುದ್ದಿ

Published : Sep 03, 2024, 06:12 PM IST
ಗಣೇಶ ಹಬ್ಬಕ್ಕೆ ಊರಿಗೆ ಹೋಗುವವರಿಗೆ ರೈಲ್ವೆ ಇಲಾಖೆಯಿಂದ ಸಿಹಿ ಸುದ್ದಿ

ಸಾರಾಂಶ

ಗೌರಿ- ಗಣೇಶ ಹಬ್ಬದ ಪ್ರಯುಕ್ತ ಊರಿಗೆ ಹೋಗುವವರಿಗೆ ರೈಲ್ವೆ ಇಲಾಖೆಯು ಭುವನೇಶ್ವರ-ಬೆಳಗಾವಿ ನಡುವೆ ವಿಶೇಷ ರೈಲು ಸೇವೆಯನ್ನು ನೀಡಲಿದೆ. ಈ ರೈಲು ಸೇವೆಯು ಸೆಪ್ಟೆಂಬರ್ ತಿಂಗಳಲ್ಲಿ ವಿಶೇಷವಾಗಿ ಕಾರ್ಯನಿರ್ವಹಿಸಲಿದೆ.

ಬೆಂಗಳೂರು (ಸೆ.03) : ಗೌರಿ- ಗಣೇಶ ಹಬ್ಬದ ಪ್ರಯುಕ್ತ ಊರಿಗೆ ಹೋಗುವವರಿಗೆ ರೈಲ್ವೆ ಇಲಾಖೆಯಿಂದ ಸಿಹಿ ಸುದ್ದಿ ನೀಡಲಾಗಿದೆ. ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರ ಸಂಖ್ಯೆ ಹೆಚ್ಚಿರಲಿದೆ ಎಂಬುದನ್ನು ಮನಗಂಡ ರೈಲ್ವೆ ಇಲಾಖೆಯು ಭುವನೇಶ್ವರ-ಬೆಳಗಾವಿ ನಡುವೆ ವಿಶೇಷ ರೈಲು ಸೇವೆಯನ್ನು ನೀಡಲು ಮುಂದಾಗಿದೆ.

ನಮ್ಮ ದೇಶದಲ್ಲಿ ಗೌರಿ ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಇನ್ನು ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಗೋವಾ, ಮುಂಬೈ ನಗರಗಳಲ್ಲಿ ಗಣೇಶ ಹಬ್ಬವನ್ನು ಜಾತ್ರೆಗಿಂತಲೂ ದೊಡ್ಡ ಮಟ್ಟದಲ್ಲಿ ಆಚರಣೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕೆಲಸ ಮಾಡುವ ಸ್ಥಳದಿಂದ ಊರಿಗೆ ಹೋಗುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆ ಇಲಾಖೆಯಿಂದ (Indian Railway Special train for Ganesh Chaturthi 2024) ವಿಶೇಷ ರೈಲು ಸೇವೆ ನೀಡಲು ಮುಂದಾಗಿದೆ. ಈ ಮೂಲಕ ಸಾಮಾನ್ಯ ದಿನಗಳಲ್ಲಿ ಸಂಚಾರ ಮಾಡುವ ರೈಲುಗಳಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ತಪ್ಪಿಸಲು ಚಿಂತಿಸಿದೆ.

ಗಣೇಶ ಹಬ್ಬಕ್ಕೆ ಗುಡ್ ನ್ಯೂಸ್ ಕೊಟ್ಟ ಭಾರತೀಯ ರೈಲ್ವೇ, ಸುಗಮ ಸಂಚಾರಕ್ಕೆ 342 ವಿಶೇಷ ಟ್ರೈನ್!

ಭುವನೇಶ್ವರ-ಬೆಳಗಾವಿ ನಿಲ್ದಾಣಗಳ ನಡುವೆ ವಾರದ ವಿಶೇಷ ರೈಲು ಬಿಡಲಾಗುತ್ತಿದೆ. ರೈಲು ಸಂಖ್ಯೆ 02813/02814 ರೈಲುಗಳನ್ನು ಓಡಿಸಲಾಗುತ್ತಿದೆ.

1 . ರೈಲು ಸಂಖ್ಯೆ 02813 - ಸೆ.7, 14, 21 ಮತ್ತು 28, 2024 ರಂದು ಪ್ರತಿ ಶನಿವಾರ ಭುವನೇಶ್ವರದಿಂದ ಸಂಜೆ 07:15 ಗಂಟೆಗೆ ಹೊರಟು, ಸೋಮವಾರ ಬೆಳಗಿನ ಜಾವ 3 ಗಂಟೆಗೆ ಬೆಳಗಾವಿ ನಿಲ್ದಾಣಕ್ಕೆ ಬರಲಿದೆ.
2. ರೈಲು ಸಂಖ್ಯೆ 02814 - ಸೆ. 9, 16, 23 ಮತ್ತು 30 ರಂದು ಪ್ರತಿ ಸೋಮವಾರ ಬೆಳಗಾವಿಯಿಂದ ಬೆಳಗ್ಗೆ 07:30 ಗಂಟೆಗೆ ಹೊರಟು ಮಂಗಳವಾರ ಮಧ್ಯಾಹ್ನ 02:30 ಗಂಟೆಗೆ ಭುವನೇಶ್ವರವನ್ನು ತಲುಪಲಿದೆ.

ಈ ರೈಲು ನಿಲುಗಡೆ ಆಗುವ ನಿಲ್ದಾಣಗಳು:

  • ಖುರ್ದಾ ರೋಡ್
  • ಬ್ರಹ್ಮಪುರ
  • ಪಲಾಸ
  • ಶ್ರೀಕಾಕುಳಂ ರೋಡ, 
  • ವಿಜಯನಗರಂ, 
  • ಪೆಂಡುರ್ತಿ, 
  • ದುವ್ವಾಡ,
  • ರಾಜಮಂಡ್ರಿ, 
  • ಎಲೂರು, 
  • ವಿಜಯವಾಡ, 
  • ಗುಂಟೂರು, 
  • ನಂದ್ಯಾಳ, 
  • ಧೋನೆ, 
  • ಗುಂತಕಲ್, 
  • ಬಳ್ಳಾರಿ,
  • ತೋರಣಗಲ್ಲು, 
  • ಹೊಸಪೇಟೆ, 
  • ಮುನಿರಾಬಾದ್, 
  • ಕೊಪ್ಪಳ,
  • ಗದಗ,
  • ಹುಬ್ಬಳ್ಳಿ,
  • ಧಾರವಾಡ,
  • ಅಳ್ನಾವರ ಮತ್ತು
  • ಲೋಂಡಾ

ತುಮಕೂರು ಜಿಲ್ಲೆಯ ಬಹುದಿನದ ಬೇಡಿಕೆ ಈಡೇರಿಸಿದ ರೈಲ್ವೆ ಇಲಾಖೆ!

ಈ ವಿಶೇಷ ರೈಲು ಹದಿನಾರು ಎಸಿ-3 ಟೈಯರ್ ಬೋಗಿಗಳನ್ನು ಹೊಂದಿರಲಿದೆ. ಎರಡು ಬ್ರೇಕ್, ಲಗೇಜ್ ಕಮ್ ಜನರೇಟರ್ ಕಾರುಗಳನ್ನು ಒಳಗೊಂಡಿದೆ. ಈ ಮೂಲಕ ಉತ್ತರ ಕರ್ನಾಟಕ ರಾಜ್ಯದ ಪ್ರಯಾಣಿಕರಿಗೆ ರೈಲ್ವೆ ಇಲಾಖೆಯಿಂದ ದೊಡ್ಡ ಮಟ್ಟದ ಅನುಕೂಲ ಮಾಡಿಕೊಡಲಾಗಿದೆ. ಇನ್ನು ಮುಂದಿನ ತಿಂಗಳು ಈ ವಿಶೇಷ ರೈಲು ಸಂಚಾರ ಮಾಡುವುದಿಲ್ಲ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಆದರೆ, ಪ್ರಯಾಣಿಕರ ಸಂಚಾರ ದಟ್ಟಣೆ ನೋಡಿಕೊಂಡು ಮತ್ತೊಮ್ಮೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

PREV

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಯೋಧ್ಯೆಯ ರಾಮಲಲ್ಲಾ ಪ್ರತ್ಯಕ್ಷನಾಗಿ ಆಶೀರ್ವದಿಸಿದರೆ ಹೇಗಿರತ್ತೆ? ರೋಮಾಂಚಕಾರಿ ವಿಡಿಯೋ ವೈರಲ್​
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!