ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣ ಕಾವೇರಿ ನಿಸರ್ಗಧಾಮ ಪ್ರವಾಸಿಗರಿಗೆ ಮುಕ್ತ

Published : Nov 27, 2022, 12:59 PM IST
ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣ ಕಾವೇರಿ ನಿಸರ್ಗಧಾಮ ಪ್ರವಾಸಿಗರಿಗೆ ಮುಕ್ತ

ಸಾರಾಂಶ

ತಾತ್ಕಾಲಿಕ ಪರ್ಯಾಯ ಸೇತುವೆ ಮೂಲಕ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ, ಮರಳಿನ ಮೂಟೆ, ಸಿಮೆಂಟ್ ಪೈಪ್ ಮರಗಳನ್ನು ಬಳಸಿ ತಾತ್ಕಾಲಿಕ ಸೇತುವೆ ನಿರ್ಮಾಣ 

ಕೊಡಗು(ನ.27):  ಪ್ರಸಿದ್ಧ ಪ್ರವಾಸಿ ತಾಣ ಕಾವೇರಿ ನಿಸರ್ಗಧಾಮ ಪುನರ್ ಆರಂಭಗೊಂಡಿದೆ. ಹೌದು,(ಭಾನುವಾರ) ಇಂದಿನಿಂದ ಕಾವೇರಿ ನಿಸರ್ಗಧಾಮ ಮತ್ತೆ ಪ್ರವಾಸಿಗರಿಗೆ ಮುಕ್ತವಾಗಿದೆ. 

ತಾತ್ಕಾಲಿಕ ಪರ್ಯಾಯ ಸೇತುವೆ ಮೂಲಕ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಮರಳಿನ ಮೂಟೆ,  ಸಿಮೆಂಟ್ ಪೈಪ್ ಮರಗಳನ್ನು ಬಳಸಿ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಲಾಗಿದೆ. 5 ಲಕ್ಷ ವೆಚ್ಚದಲ್ಲಿ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಲಾಗುಗಿದ್ದು, ಸೇತುವೆಯನ್ನ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಅವರು ಉದ್ಘಾಟಿಸಿದ್ದಾರೆ. 

ಚುಮುಚುಮು ಚಳಿಯಲ್ಲಿ ಹನಿಮೂನ್ ಎಂಜಾಯ್ ಮಾಡಲು ಈ ತಾಣಗಳು ಬೆಸ್ಟ್

ನಿಸರ್ಗಧಾಮದ ತೂಗು ಸೇತುವೆ ಶಿಥಿಲಗೊಂಡಿದ್ದ ಹಿನ್ನೆಲೆಯಲ್ಲಿ ದುರಸ್ಥಿ ಕಾರ್ಯಕ್ಕಾಗಿ ಪ್ರವಾಸಿ ತಾಣ ಬಂದ್ ಮಾಡಲಾಗಿತ್ತು. ತೂಗು‌ ಸೇತುವೆ ದುರಸ್ತಿಗೆ ಹೆಚ್ಚು ಸಮಯ‌ ಹಿಡಿಯುವ ಹಿನ್ನೆಲೆಯಲ್ಲಿ ಇದೀಗ ಪರ್ಯಾಯವಾಗಿ  ತಾತ್ಕಾಲಿಕ ಸೇತುವೆಯನ್ನ ನಿರ್ಮಾಣ ಮಾಡಲಾಗಿದೆ. 2800 ಮರಳಿನ ಮೂಟೆ, 9 ಸಿಮೆಂಟ್ ಪೈಪ್ ಹಾಗೂ ಮರದ ಹಲಗೆಯಿಂದ ಸೇತುವೆಯನ್ನ ನಿರ್ಮಿಸಲಾಗಿದೆ.

PREV

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಯೋಧ್ಯೆಯ ರಾಮಲಲ್ಲಾ ಪ್ರತ್ಯಕ್ಷನಾಗಿ ಆಶೀರ್ವದಿಸಿದರೆ ಹೇಗಿರತ್ತೆ? ರೋಮಾಂಚಕಾರಿ ವಿಡಿಯೋ ವೈರಲ್​
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!