ಸಿದ್ಧಗಂಗಾ, ತಾಳಗುಪ್ಪ, ಯಶವಂತಪುರ ಎಕ್ಸ್‌ಪ್ರೆಸ್‌ ಅರಸೀಕೆರೆಯಲ್ಲಿ ಕೊನೆ; ರೈಲುಗಳ ಸಂಚಾರ ರದ್ದು

Published : Aug 18, 2026, 11:42 AM IST
Indian Railways

ಸಾರಾಂಶ

ಮಲ್ಲಸಂದ್ರ ಮತ್ತು ಗುಬ್ಬಿ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ನಡೆಯುತ್ತಿರುವ ಕಾಮಗಾರಿಯಿಂದಾಗಿ, ಆಗಸ್ಟ್ 2026ರ ನಿಗದಿತ ದಿನಾಂಕಗಳಲ್ಲಿ ಹಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ, ಭಾಗಶಃ ರದ್ದುಗೊಳಿಸಲಾಗಿದೆ ಮತ್ತು ಮಾರ್ಗ ಬದಲಾವಣೆ ಮಾಡಲಾಗಿದೆ. ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್, ಸಿದ್ಧಗಂಗಾ ಎಕ್ಸ್‌ಪ್ರೆಸ್ ಸೇರಿದಂತೆ ಪ್ರಮುಖ ರೈಲುಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಬೆಂಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 48 (LC-48) ರಲ್ಲಿ ಆರ್‌ಸಿಸಿ ಬಾಕ್ಸ್‌ಗಳನ್ನು ಅಳವಡಿಸಲು ತಾತ್ಕಾಲಿಕ ಗಿರ್ಡರ್‌ಗಳನ್ನು ಹಾಕುವ ಮತ್ತು ತೆರವುಗೊಳಿಸುವ ಲೈನ್ ಬ್ಲಾಕ್ ಹಾಗೂ ಪವರ್ ಬ್ಲಾಕ್ ಕಾಮಗಾರಿಗಳ ಹಿನ್ನೆಲೆಯಲ್ಲಿ ಕೆಳಗಿನ ರೈಲು ಸೇವೆಗಳನ್ನು ರದ್ದುಗೊಳಿಸಲಾಗುತ್ತದೆ, ಭಾಗಶಃ ರದ್ದುಗೊಳಿಸಲಾಗುತ್ತದೆ, ಮಾರ್ಗ ಬದಲಾಯಿಸಲಾಗುತ್ತದೆ, ಸಮಯ ಮರುನಿಗದಿಗೊಳಿಸಲಾಗುತ್ತದೆ ಮತ್ತು ನಿಯಂತ್ರಿಸಲಾಗುತ್ತದೆ:

1.ರೈಲುಗಳ ಸಂಚಾರ ರದ್ದು:

ದಿನಾಂಕ 19.08.2026 ಮತ್ತು 26.08.2026 ರಂದು ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16239), ಯಶವಂತಪುರ-ಚಿಕ್ಕಮಗಳೂರು ಎಕ್ಸ್‌ಪ್ರೆಸ್ (16240), ಕೆಎಸ್‌ಆರ್ ಬೆಂಗಳೂರು-ಮೈಸೂರು ಒಡೆಯರ್ ಎಕ್ಸ್‌ಪ್ರೆಸ್ (12614), ಕೆಎಸ್‌ಆರ್ ಬೆಂಗಳೂರು-ತುಮಕೂರು ಮೆಮು (66567) ಮತ್ತು ತುಮಕೂರು-ಕೆಎಸ್‌ಆರ್ ಬೆಂಗಳೂರು ಮೆಮು (66572) ರೈಲುಗಳ ಸಂಚಾರ ರದ್ದಾಗಲಿವೆ.

ದಿನಾಂಕ 19.08.2026, 22.08.2026 ಮತ್ತು 26.08.2026 ರಂದು ಯಲಹಂಕ-ಅರಸೀಕೆರೆ ಮೆಮು (66505) ಹಾಗೂ ಅರಸೀಕೆರೆ-ಯಲಹಂಕ ಮೆಮು (66506) ರೈಲುಗಳ ಸಂಚಾರ ರದ್ದಾಗಲಿವೆ.

ರೈಲುಗಳ ಸಂಚಾರ ಭಾಗಶಃ ರದ್ದು

ದಿನಾಂಕ 19.08.2026, 22.08.2026, 23.08.2026 ಮತ್ತು 26.08.2026 ರಂದು ಹೊರಡುವ ರೈಲು ಸಂಖ್ಯೆ 20652 ತಾಳಗುಪ್ಪ-ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ ಅರಸೀಕೆರೆ ಮತ್ತು ಕೆಎಸ್‌ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಲಿದ್ದು, ಅರಸೀಕೆರೆಯಲ್ಲಿಯೇ ಪ್ರಯಾಣ ಮುಕ್ತಾಯಗೊಳಿಸಲಿದೆ.

ದಿನಾಂಕ 19.08.2026, 22.08.2026, 23.08.2026 ಮತ್ತು 26.08.2026 ರಂದು ಹೊರಡುವ ರೈಲು ಸಂಖ್ಯೆ 12725 ಕೆಎಸ್‌ಆರ್ ಬೆಂಗಳೂರು-ಧಾರವಾಡ ಸಿದ್ಧಗಂಗಾ ಎಕ್ಸ್‌ಪ್ರೆಸ್ ಕೆಎಸ್‌ಆರ್ ಬೆಂಗಳೂರು ಮತ್ತು ಅರಸೀಕೆರೆ ನಡುವೆ ಭಾಗಶಃ ರದ್ದಾಗಲಿದ್ದು, ಕೆಎಸ್‌ಆರ್ ಬೆಂಗಳೂರು ಬದಲಿಗೆ ಅರಸೀಕೆರೆಯಿಂದಲೇ ತನ್ನ ನಿಗದಿತ ಸಮಯಕ್ಕೆ ಪ್ರಯಾಣ ಆರಂಭಿಸಲಿದೆ.

ದಿನಾಂಕ 19.08.2026 ಮತ್ತು 26.08.2026 ರಂದು ಹೊರಡುವ ರೈಲು ಸಂಖ್ಯೆ 12726 ಧಾರವಾಡ-ಕೆಎಸ್‌ಆರ್ ಬೆಂಗಳೂರು ಸಿದ್ಧಗಂಗಾ ಎಕ್ಸ್‌ಪ್ರೆಸ್ ಅರಸೀಕೆರೆ ಮತ್ತು ಕೆಎಸ್‌ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಲಿದ್ದು, ಅರಸೀಕೆರೆಯಲ್ಲಿಯೇ ಪ್ರಯಾಣ ಮುಕ್ತಾಯಗೊಳಿಸಲಿದೆ.

ರೈಲುಗಳ ಮಾರ್ಗ ಬದಲಾವಣೆ

ದಿನಾಂಕ 18.08.2026 ಮತ್ತು 25.08.2026 ರಂದು ಹೊರಡುವ ರೈಲು ಸಂಖ್ಯೆ 17310 ವಾಸ್ಕೋ ಡ ಗಾಮ-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಅರಸೀಕೆರೆ-ಹಾಸನ-ನೆಲಮಂಗಲ-ಯಶವಂತಪುರ ಮಾರ್ಗವಾಗಿ ಸಂಚರಿಸಲಿದ್ದು, ತಿಪಟೂರು ಹಾಗೂ ತುಮಕೂರು ನಿಲ್ದಾಣಗಳಲ್ಲಿ ನಿಲ್ಲುವುದಿಲ್ಲ.

ದಿನಾಂಕ 19.08.2026 ಮತ್ತು 26.08.2026 ರಂದು ಹೊರಡುವ ರೈಲು ಸಂಖ್ಯೆ 20676 ಮೈಸೂರು-ಬೆಳಗಾವಿ ವಿಶ್ವಮಾನವ ಎಕ್ಸ್‌ಪ್ರೆಸ್ ಮೈಸೂರು-ಹೊಳೆನರಸೀಪುರ-ಹಾಸನ-ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದ್ದು, ಪಾಂಡವಪುರದಿಂದ ತಿಪಟೂರು ನಡುವಿನ ಯಾವುದೇ ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.

ದಿನಾಂಕ 19.08.2026, 22.08.2026, 23.08.2026 ಮತ್ತು 26.08.2026 ರಂದು ಹೊರಡುವ ರೈಲು ಸಂಖ್ಯೆ 20689 ಯಶವಂತಪುರ-ಶಿವಮೊಗ್ಗ ಟೌನ್ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲು ಚಿಕ್ಕಬಾಣಾವರ-ನೆಲಮಂಗಲ-ಹಾಸನ-ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದ್ದು, ತುಮಕೂರು ಮತ್ತು ತಿಪಟೂರು ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.

PREV

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ವರ್ಷಗಳ ಆಸೆ, ಮಗನ ಪರಿಶ್ರಮ; ಅಪ್ಪ-ಅಮ್ಮನ ಮೊದಲ ವಿಮಾನ ಪ್ರಯಾಣದ ಕ್ಷಣ ವೈರಲ್
5 ವರ್ಷದ ಬಾಲಕನ ಮುದ್ದು ಕಂಠದಲ್ಲಿ ರಾಷ್ಟ್ರಗೀತೆ: ನಾಗಾಲ್ಯಾಂಡ್ ಸೌಂದರ್ಯಕ್ಕೆ ಮನಸೋತ ಆನಂದ್ ಮಹೀಂದ್ರಾ!