ರಾಮ-ಸೀತಾಮಾತೆ ಜನ್ಮಸ್ಥಳ ಸಂಪರ್ಕಿಸಲು ಹೊಸ ರೈಲು, ಡಿ.30ರಂದು ಮೋದಿ ಚಾಲನೆ

Published : Dec 24, 2023, 08:31 AM ISTUpdated : Dec 24, 2023, 10:00 AM IST
ರಾಮ-ಸೀತಾಮಾತೆ ಜನ್ಮಸ್ಥಳ ಸಂಪರ್ಕಿಸಲು ಹೊಸ ರೈಲು, ಡಿ.30ರಂದು ಮೋದಿ ಚಾಲನೆ

ಸಾರಾಂಶ

ರಾಮನ ಜನ್ಮಸ್ಥಳ ಅಯೋಧ್ಯೆ ಮತ್ತು ಸೀತೆಯ ಜನ್ಮಸ್ಥಳ ಸೀತಾಮಡಿಯನ್ನು ಸಂಪರ್ಕಿಸುವ ರಾಷ್ಟ್ರದ ಮೊದಲ ಅಮೃತ್‌ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ಡಿ.30ರಂದು ಚಾಲನೆ ನೀಡಲಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ನವದೆಹಲಿ: ರಾಮನ ಜನ್ಮಸ್ಥಳ ಅಯೋಧ್ಯೆ ಮತ್ತು ಸೀತೆಯ ಜನ್ಮಸ್ಥಳ ಸೀತಾಮಡಿಯನ್ನು ಸಂಪರ್ಕಿಸುವ ರಾಷ್ಟ್ರದ ಮೊದಲ ಅಮೃತ್‌ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ಡಿ.30ರಂದು ಚಾಲನೆ ನೀಡಲಿದ್ದಾರೆ. ಈ ರೈಲು ತನ್ನ ಮೊದಲ ಪ್ರಯಾಣದಲ್ಲಿ ಅಯೋಧ್ಯೆಯಿಂದ ಸೀತಾಮಡಿಯ ಮೂಲಕ ದರ್ಭಾಂಗಕ್ಕೆ ತೆರಳಲಿದೆ. ಮರುದಿನದಿಂದ ಆ ರೈಲುದೆಹಲಿಯಿಂದ ಅಯೋಧ್ಯೆ-ಸೀತಾಮಡಿಯ ಮೂಲಕ ದರ್ಭಾಂಗಕ್ಕೆ ಸಂಚಾರ ನಡೆಸುತ್ತದೆ. 

ಕೋಳಿ ಅಂಗಡಿಯಾದ ಪಾಕಿಸ್ತಾನದ ಪ್ರಸಿದ್ಧ ರಾಮ-ಸೀತೆ ದೇವಸ್ಥಾನ!

ಇದೇ ವೇಳೆ ಪ್ರಧಾನಿ ಅಯೋಧ್ಯೆಯಲ್ಲಿ ವಂದೇ ಭಾರತ್ ಹಾಗೂ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಚಾಲನೆ ನೀಡುವ ನಿರೀಕ್ಷೆಯಿದೆ. ಅಮೃತ್‌ ಭಾರತ್ ರೈಲುಗಳು ಹವಾನಿಯಂತ್ರಣ ರಹಿತ ರೈಲುಗಳಾಗಿದ್ದು, ವಲಸೆ ಕಾರ್ಮಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಪರಿಚಯಿಸಲಾಗುತ್ತಿದೆ. ಈ ರೈಲು ಹೆಚ್ಚಾಗಿ ರಾತ್ರಿಯ ವೇಳೆ ಸಂಚರಿಸುತ್ತವೆ.

PREV

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಭೂರೂಪ ಬದಲಾಯಿಸಿದ ಪ್ರವಾಹ.. ವಿಶ್ವದ ಅತಿದೊಡ್ಡ ನದಿ ಮಜುಲಿ ದ್ವೀಪ ಬಗ್ಗೆ ನಿಮಗೆ ಗೊತ್ತೇ?
ನಿವೃತ್ತಿ ನಂತ್ರವೂ ಪರದಾಡಬೇಕಾಗಿಲ್ಲ, ನೆಮ್ಮದಿ ಜೀವನಕ್ಕೆ ಈ ದೇಶಗಳು ಬೆಸ್ಟ್