ಚಿಕ್ಕಮಗಳೂರು: ಉಗ್ರ ಸ್ವರೂಪ ತಾಳಿದ ಕಲ್ಲತ್ತಿಗರಿ ಜಲಪಾತ, ಪಾಲ್ಸ್‌ ಬಳಿ ನಿಲ್ಲೋದಕ್ಕೂ ಪ್ರವಾಸಿಗರಿಗೆ ಭಯ..!

Published : Jul 19, 2024, 05:10 PM ISTUpdated : Jul 19, 2024, 05:22 PM IST
ಚಿಕ್ಕಮಗಳೂರು: ಉಗ್ರ ಸ್ವರೂಪ ತಾಳಿದ ಕಲ್ಲತ್ತಿಗರಿ ಜಲಪಾತ, ಪಾಲ್ಸ್‌ ಬಳಿ ನಿಲ್ಲೋದಕ್ಕೂ ಪ್ರವಾಸಿಗರಿಗೆ ಭಯ..!

ಸಾರಾಂಶ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಮೈದುಂಬಿ ಕಲ್ಲತ್ತಿಗರಿ ಜಲಪಾತ ಧುಮ್ಮಿಕ್ತಿ ಹರಿಯುತ್ತಿದೆ. ಕಳೆದ ವಾರ ಜಲಪಾತದಲ್ಲಿ ನೀರಿನ ಪ್ರಮಾಣ ಸಾಧಾರಣವಾಗಿತ್ತು. ಆದ್ರೆ, ನಾಲ್ಕೈದು ದಿನದಿಂದ ವರುಣ ಅಬ್ಬರಿಸುತ್ತಿರುವ ಹಿನ್ನಲೆಯಲ್ಲಿ ಜಲಪಾತ ಧುಮ್ಮಿಕ್ಕುತ್ತಿದೆ.     

ಚಿಕ್ಕಮಗಳೂರು(ಜು.19):  ಪಶ್ಚಿಮಘಟ್ಟ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕಲ್ಲತ್ತಿಗರಿ ಜಲಪಾತ ಉಗ್ರ ಸ್ವರೂಪ ಪಡೆದಿದೆ. ಹೌದು,  ಜಿಲ್ಲೆಯ ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ತಪ್ಪಲಿನಲ್ಲಿದೆ ಫಾಲ್ಸ್‌ನಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. 

ತರೀಕೆರೆ ತಾಲೂಕಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಮೈದುಂಬಿ ಕಲ್ಲತ್ತಿಗರಿ ಜಲಪಾತ ಧುಮ್ಮಿಕ್ತಿ ಹರಿಯುತ್ತಿದೆ. ಕಳೆದ ವಾರ ಜಲಪಾತದಲ್ಲಿ ನೀರಿನ ಪ್ರಮಾಣ ಸಾಧಾರಣವಾಗಿತ್ತು. ಆದ್ರೆ, ನಾಲ್ಕೈದು ದಿನದಿಂದ ವರುಣ ಅಬ್ಬರಿಸುತ್ತಿರುವ ಹಿನ್ನಲೆಯಲ್ಲಿ ಜಲಪಾತ ಧುಮ್ಮಿಕ್ಕುತ್ತಿದೆ. 

ಭೂಕುಸಿತ, ಪ್ರವಾಹ ಭೀತಿ, ಇನ್ನೆಷ್ಟು ಕಾಲ ಈ ಜಲದಿಗ್ಬಂಧನ? ಯಾವ್ಯಾವ ಜಿಲ್ಲೆಗಳ ಪರಿಸ್ಥಿತಿ ಏನಾಗಿದೆ..?

ಕೆಮ್ಮಣ್ಣುಗುಂಡಿ ಗುಡ್ಡಗಾಡು ತಪ್ಪಲ್ಲಿನಲ್ಲಿ ಭಾರೀ ಮಳೆಯಾಗುತ್ತಿದೆ. ಜಲಪಾತ ನೋಡಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಜಲಪಾತದ ಬಳಿ ನಿಲ್ಲೋದಕ್ಕೂ ಪ್ರವಾಸಿಗರು ಭಯ ಪಡುತ್ತಿದ್ದಾರೆ.

PREV

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Traffic Mantra: ಟ್ರಾಫಿಕ್‌ನಲ್ಲಿ ಶಾಂತವಾಗಿರೋದು ಹೇಗೆ? ಈ ಮಂತ್ರ ಪಠಿಸಿ ಸಾಕು!
ಭಾರತೀಯರು 2025ರಲ್ಲಿ ಅತಿಹೆಚ್ಚು ಹುಡುಕಾಡಿದ ಪ್ರವಾಸಿ ಸ್ಥಳ ಯಾವುದು? ಟಾಪ್-10ರಲ್ಲಿ ಥೈಲ್ಯಾಂಡ್, ಮಾಲ್ಡೀವ್ಸ್