ತಾಳಗುಪ್ಪ-ಬೆಂಗಳೂರು ಎಕ್ಸ್​ಪ್ರೆಸ್​ ಸೇರಿ ಕೆಲ ರೈಲು ಸಂಚಾರದಲ್ಲಿ ವ್ಯತ್ಯಯ- ಕೆಲವು ರದ್ದು; ಡಿಟೇಲ್ಸ್​ ಇಲ್ಲಿದೆ

Published : Aug 18, 2026, 05:52 PM IST
Indian Railway

ಸಾರಾಂಶ

ಮಲ್ಲಸಂದ್ರ ಮತ್ತು ಗುಬ್ಬಿ ನಡುವಿನ ಕಾಮಗಾರಿಯಿಂದಾಗಿ, ಆಗಸ್ಟ್ 19 ರಿಂದ 26 ರವರೆಗೆ ತಾಳಗುಪ್ಪ-ಬೆಂಗಳೂರು ಎಕ್ಸ್‌ಪ್ರೆಸ್ ಸೇರಿದಂತೆ ಹಲವು ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ. ಕೆಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದ್ದು, ಇನ್ನು ಕೆಲವು ರೈಲುಗಳ ಸೇವೆಯನ್ನು ಸಂಪೂರ್ಣವಾಗಿ ರದ್ದುಪಡಿಸಲಾಗಿದೆ.

ನಾಳೆ ಅರ್ಥಾತ್​ ಆಗಸ್ಟ್​ 19ರಿಂದ ಬರುವ 26ನೇ ತಾರೀಖಿನವರೆಗೆ ಕೆಲವೊಂದು ದಿನಾಂಕಗಳಲ್ಲಿ ತಾಳಗುಪ್ಪ-ಬೆಂಗಳೂರು ಎಕ್ಸ್​ಪ್ರೆಸ್​ ಸೇರಿ ಕೆಲ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಕೆಲವು ರೈಲುಗಳನ್ನು ಭಾಗಶಃ ರದ್ದು ಮಾಡಲಾಗಿದೆ. ಮಲ್ಲಸಂದ್ರ ಮತ್ತು ಗುಬ್ಬಿ ನಡುವೆ ನಡೆಯುತ್ತಿರುವ ಕಾಮಗಾರಿ ಹಿನ್ನೆಲೆ ಈ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ತಾಳಗುಪ್ಪ ಹಾಗೂ ಶಿವಮೊಗ್ಗ ಮಾರ್ಗದ ಪ್ರಮುಖ ರೈಲುಗಳ ಸಂಚಾರ ಭಾಗಶಃ ರದ್ದು ಮತ್ತು ಮಾರ್ಗ ಬದಲಾವಣೆ ಮಾಡಲಾಗಿದ್ದು, ಅವುಗಳ ಫುಲ್​ ಡಿಟೇಲ್ಸ್​ ಇಲ್ಲಿದೆ:

ಭಾಗಶಃ ರದ್ದು ಆಗಲಿರುವ ರೈಲುಗಳು

ರೈಲು ಸಂಖ್ಯೆ 20652: ತಾಳಗುಪ್ಪ–ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್ (Talguppa – KSR Bengaluru Express) ರೈಲಿನ ಸಂಚಾರವು ಭಾಗಶಃ ರದ್ದಾಗಲಿದೆ. ಆಗಸ್ಟ್ 19, 22, 23 ಮತ್ತು 26 ರಂದು ಈ ರೈಲು ಅರಸೀಕೆರೆಯಲ್ಲಿಯೇ ಮುಕ್ತಾಯಗೊಳ್ಳಲಿದ್ದು, ಮುಂದೆ ಹೋಗುವವರು ಬೇರೆ ವ್ಯವಸ್ಥೆ ಮಾಡಿಕೊಳ್ಳಬೇಕಿದೆ.

ರೈಲು ಸಂಖ್ಯೆ 20689: ಯಶವಂತಪುರ–ಶಿವಮೊಗ್ಗ ಟೌನ್ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ( Yesvantpur–Shivamogga Town Intercity Express) ರೈಲಿನ ಮಾರ್ಗ ಬದಲಾವಣೆ ಮಾಡಲಾಗಿದೆ. ಆಗಸ್ಟ್ 19, 22, 23 ಮತ್ತು 26 ರಂದು ಈ ರೈಲು ಚಿಕ್ಕಬಾಣಾವರ, ನೆಲಮಂಗಲ, ಹಾಸನ ಹಾಗೂ ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದೆ. ಈ ರೈಲಿಗೆ ತುಮಕೂರು ಮತ್ತು ತಿಪಟೂರು ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.

ಈ ರೈಲುಗಳ ಸೇವೆ ರದ್ದು

  • ಆಗಸ್ಟ್ 19 ಮತ್ತು 26 ರಂದು ಈ ರೈಲುಗಳ ಸೇವೆ ರದ್ದು ಆಗಲಿವೆ. ಅವುಗಳೆಂದರೆ
  • ಚಿಕ್ಕಮಗಳೂರು–ಯಶವಂತಪುರ (ರೈಲು ಸಂಖ್ಯೆ: 16239),
  • ಯಶವಂತಪುರ–ಚಿಕ್ಕಮಗಳೂರು (ರೈಲು ಸಂಖ್ಯೆ: 16240),
  • ಕೆಎಸ್ಆರ್ ಬೆಂಗಳೂರು–ಮೈಸೂರು ಒಡೆಯರ್ (ರೈಲು ಸಂಖ್ಯೆ: 12614),
  • ಕೆಎಸ್ಆರ್ ಬೆಂಗಳೂರು–ತುಮಕೂರು ಮೆಮು (ರೈಲು ಸಂಖ್ಯೆ: 66567) ಹಾಗೂ
  • ತುಮಕೂರು–ಕೆಎಸ್ಆರ್ ಬೆಂಗಳೂರು ಮೆಮು (ರೈಲು ಸಂಖ್ಯೆ: 66572)
  • ಅದೇ ರೀತಿ, ಆಗಸ್ಟ್ 19, 22 ಮತ್ತು 26 ರಂದು ಯಲಹಂಕ–ಅರಸೀಕೆರೆ (ರೈಲು ಸಂಖ್ಯೆ: 66505) ಮತ್ತು ಅರಸೀಕೆರೆ–ಯಲಹಂಕ (ರೈಲು ಸಂಖ್ಯೆ: 66506) ಮೆಮು ರೈಲುಗಳ ಸಂಚಾರವೂ ಇರುವುದಿಲ್ಲ. 
  • ಅಂತೆಯೇ, ವಾಸ್ಕೋ ಡ ಗಾಮ–ಯಶವಂತಪುರ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 17310) ಹಾಗೂ ಮೈಸೂರು–ಬೆಳಗಾವಿ ವಿಶ್ವಮಾನವ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 20676) ರೈಲುಗಳ ಮಾರ್ಗವನ್ನು ಬದಲಾಯಿಸಲಾಗಿದೆ. ಇವು ತಿಪಟೂರು ಮತ್ತು ತುಮಕೂರು ಬದಲಿಗೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

PREV

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ಧಗಂಗಾ, ತಾಳಗುಪ್ಪ, ಯಶವಂತಪುರ ಎಕ್ಸ್‌ಪ್ರೆಸ್‌ ಅರಸೀಕೆರೆಯಲ್ಲಿ ಕೊನೆ; ರೈಲುಗಳ ಸಂಚಾರ ರದ್ದು
ವರ್ಷಗಳ ಆಸೆ, ಮಗನ ಪರಿಶ್ರಮ; ಅಪ್ಪ-ಅಮ್ಮನ ಮೊದಲ ವಿಮಾನ ಪ್ರಯಾಣದ ಕ್ಷಣ ವೈರಲ್