ಪರಮೇಶ್ವರ್ ಒಡೆತನದ ಕಾಲೇಜು ಒಮ್ಮೆಯೂ ತೆರಿಗೆ ಕಟ್ಟಿಲ್ಲ..! ಕೋಟಿ ಕೋಟಿ ವಂಚನೆ

Published : Oct 12, 2019, 08:50 AM IST
ಪರಮೇಶ್ವರ್ ಒಡೆತನದ ಕಾಲೇಜು ಒಮ್ಮೆಯೂ ತೆರಿಗೆ ಕಟ್ಟಿಲ್ಲ..! ಕೋಟಿ ಕೋಟಿ ವಂಚನೆ

ಸಾರಾಂಶ

ಮಾಜಿ ಡಿಸಿಎಂ ಜಿ. ಪರಮೇಶ್ವರ್ ಅವರ ಒಡೆತನದ ಕಾಲೇಜು ಆರಂಭವಾದಾಗಿನಿಂದ ಇಲ್ಲಿಯ ತನಕ ಒಮ್ಮೆಯೂ ತೆರಿಗೆ ಕಟ್ಟಿಲ್ಲ ಅನ್ನೋ ವಿಚಾರ ಐಟಿ ದಾಳಿ ಸಂದರ್ಭ ಬೆಳಕಿಗೆ ಬಂದಿದೆ. ಕೋಟಿಗಳಷ್ಟು ತೆರಿಗೆ ವಂಚಿಸಿರುವುದು ವಿಚಾರಣೆಯ ಸಂದರ್ಭ ಅಧಿಕಾರಿಗಳಿಗೆ ತಿಳಿದು ಬಂದಿದೆ.

ತುಮಕೂರು(ಅ.12): ಐಟಿ ಅಧಿಕಾರಿಗಳು ವಶಪಡಿಸಿಕೊಂಡಿರುವ ದಾಖಲೆಗಳಲ್ಲಿ ಪರಮೇಶ್ವರ್‌ ಒಡೆತದ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ತುಮಕೂರು ಮಹಾನಗರ ಪಾಲಿಕೆಗೆ ತೆರಿಗೆ ಕಟ್ಟದೆ ವಂಚಿಸಲಾಗಿದೆ ಎಂಬ ಮಾಹಿತಿ ಬಹಿರಂಗಗೊಂಡಿದೆ.

2002 ರಿಂದಲೂ ಪಾಲಿಕೆಗೆ ಆಡಳಿತ ಮಂಡಳಿ ತೆರಿಗೆ ಕಟ್ಟದೆ ಇರುವ ವಿಷಯ ಬೆಳಕಿಗೆ ಬಂದಿದೆ. ಎಂಜಿನಿಯರಿಂಗ್‌ ಕಾಲೇಜು ಆರಂಭವಾದಾಗಿನಿಂದ ಒಮ್ಮೆಯೂ ತೆರಿಗೆ ಕಟ್ಟಿಲ್ಲ. ಐಟಿ ಅಧಿಕಾರಿಗಳಿಗೆ ಸಿಕ್ಕಿರುವ ಮಾಹಿತಿ ಪ್ರಕಾರ 1.83 ಕೋಟಿ ಬಾಕಿ ಉಳಿಸಿಕೊಂಡಿದೆ. ಬಾಕಿ ಸಂಬಂಧ ಪಾಲಿಕೆ ಕೊಟ್ಟನೋಟಿಸ್‌ ಕೂಡ ಐಟಿ ಅಧಿಕಾರಿಗಳಿಗೆ ಲಭ್ಯವಾಗಿದೆ.

ಪರೀಕ್ಷೆಗೆ ಅಡಚಣೆ ಇಲ್ಲ:

ಶುಕ್ರವಾರ ಬೆಳಗ್ಗೆ ಕಾಲೇಜಿನ ಆವರಣದಲ್ಲಿ ಬಿಸಿಎ ವಿಭಾಗದ ಪರೀಕ್ಷೆ 9.30ಕ್ಕೆ ಇತ್ತು. ಬೆಳಗ್ಗೆ ವಾಕಿಂಗ್‌ಗೆ ಜನರು ಪ್ರವೇಶಿಸುವನ್ನು ಪೊಲೀಸರು ನಿರಾಕರಿಸಿದ್ದರೂ ಪರೀಕ್ಷೆಗೆ ಯಾವುದೇ ಅಡಚಣೆ ಮಾಡಲಿಲ್ಲ.

ಐಟಿ ದಾಳಿ ಅಂತ್ಯ:

ಕಳೆದ ಒಂದೂವರೆ ದಿವಸಗಳ ಕಾಲ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯಲ್ಲಿ ನಡೆಸಿದ ದಾಳಿಯನ್ನು ಐಟಿ ಅಧಿಕಾರಿಗಳು ಅಂತ್ಯಗೊಳಿಸಿ ಮೂರು ಇನ್ನೋವಾ ಕಾರಿನಲ್ಲಿ ತೆರಳಿದ್ದಾರೆ.

ಕಾಲೇಜು ಪ್ರಾಧ್ಯಾಪಕರು ಚಕ್ಕರ್‌

ಗುರುವಾರದಿಂದ ಐಟಿ ಅಧಿಕಾರಿಗಳು ಶಿಕ್ಷಣ ಸಂಸ್ಥೆ ಮೇಲೆ ನಡೆಸುತ್ತಿರುವ ದಾಳಿ ಹಿನ್ನೆಲೆಯಲ್ಲಿ ಶುಕ್ರವಾರ ಕಾಲೇಜು ಪ್ರಾಧ್ಯಾಪಕರಲ್ಲಿ ಶೇ.30ರಷ್ಟುಮಂದಿ ಗೈರಾಗಿದ್ದರು. ಅಲ್ಲದೆ, ಸಿಬ್ಬಂದಿ ಕೂಡ ಚಕ್ಕರ್‌ ಹಾಕಿದರು. ಐಟಿ ಅಧಿಕಾರಿಗಳ ಪ್ರಶ್ನೆಗೆ ಸಿಬ್ಬಂದಿ ತಡಬಡಾಯಿಸಿದ್ದಾರೆ.

12 ಮಂದಿ ಅಧಿಕಾರಿಗಳ ತಂಡ:

12 ಮಂದಿ ಐಟಿ ಅಧಿಕಾರಿಗಳ ತಂಡ ಗುರುವಾರ ಮಧ್ಯರಾತ್ರಿಯವರೆಗೂ ದಾಳಿ ನಡೆಸಿ ಪರಮೇಶ್ವರ್‌ ಅವರ ಕಾಲೇಜು ಗೆಸ್ಟ್‌ ಹೌಸ್‌ನಲ್ಲಿ ತಂಗಿದ್ದರು. ಐಟಿ ಅಧಿಕಾರಿಗಳು ಮೊಕ್ಕಾಂ ಹೂಡಿದ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ಯಾರಿಗೂ ವಾಕ್‌ ಮಾಡಲು ಅವಕಾಶ ಪೊಲೀಸರು ನೀಡಲಿಲ್ಲ. ಪ್ರತಿ ದಿನ ಇಲ್ಲಿ ನೂರಾರು ಮಂದಿ ವಾಕ್‌ ಮಾಡುತ್ತಿದ್ದರು. ಆದರೆ, ದಾಳಿ ಹಿನ್ನೆಲೆಯಲ್ಲಿ ವಾಕಿಂಗ್‌ಗೆ ಅವಕಾಶ ನೀಡಲಿಲ್ಲ.

 

ನಾಲ್ಕು ಅಂತಸ್ತಿನ ಕಟ್ಟದಲ್ಲಿ ಆಡಳಿತ ವಿಭಾಗದಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ಕಾರ್ಯ ನಡೆಸಿದರು. ಮೇಲಿನ ಮೂರು ಕಟ್ಟಡದಲ್ಲಿ ಇಂಜಿನಿಯರ್‌ ವಿಭಾಗದ ಕ್ಲಾಸ್‌ಗಳು ಮಾಮೂಲಿಯಂತೆ ನಡೆದವು. ಬೆಳಗ್ಗೆ 8.30ಕ್ಕೆ ಗೆಸ್ಟ್‌ ಹೌಸ್‌ನಿಂದ ಎಂಜಿನಿಯರ್‌ ಕಟ್ಟಡ ಆಡಳಿತ ಕಚೇರಿಗೆ ತೆರಳಿದ ಅಧಿಕಾರಿಗಳು ಎರಡನೇ ದಿನದ ಶೋಧ ಕಾರ್ಯ ಆರಂಭಿಸಿದ್ದಾರೆ.

PREV
click me!

Recommended Stories

Government Hospital: ಅಪ್ಪ ದಾನ ಮಾಡಿದ ಜಾಗದಲ್ಲಿ ಕಟ್ಟಿದ್ದ ಆಸ್ಪತ್ರೇಲಿ ಚಿಕಿತ್ಸೆ ಸಿಗದೆ ಮಗ ಸಾವು!
ತುಮಕೂರು: ಮನೆ ದರೋಡೆಗಾಗಿ 5 ವರ್ಷದ ಮಗಳ ಮುಂದೆ ಫ್ಲವರ್ ಅಂಗಡಿ ಮಾಲೀಕನನ್ನು ಕೊಂದ ತಮಿಳುನಾಡು ಹಂತಕರು ಅರೆಸ್ಟ್