ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ತಂದೆ ವಿಧಿವಶ

Published : Jan 26, 2023, 09:20 PM IST
ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ತಂದೆ ವಿಧಿವಶ

ಸಾರಾಂಶ

ವಯೋಸಹಜ ಅನಾರೋಗ್ಯದಿಂದ ಗುಬ್ಬಿ ಶಾಸಕ ಎಸ್‌ಆರ್‌ ಶ್ರೀನಿವಾಸ್‌ ಅವರ ತಂದೆ ರಾಮೇಗೌಡ ನಿಧನರಾದರು. ನಾಳೆ ಮಧ್ಯಾಹ್ನ ಸ್ವಗ್ರಾಮ ಸರ್ವೇಗಾರ ಪಾಳ್ಯದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.  

ತುಮಕೂರು (ಜ.26): ಗುಬ್ಬಿ ಶಾಸಕ ಎಸ್‌ಆರ್‌ ಶ್ರೀನಿವಾದ್‌ ಅವರಿಗೆ ಪಿತೃವಿಯೋಗವಾಗಿದೆ. ಅವರ ತಂದೆ ರಾಮೇಗೌಡ ವಯೋಸಹಜ ಅನಾರೋಗ್ಯದಿಂದ ಸಾವು ಕಂಡಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ನಾಳೆ ಮಧ್ಯಾಹ್ನ ಸ್ವಗ್ರಾಮ ಗುಬ್ಬಿ ತಾಲೂಕಿನ ಸರ್ವೇಗಾರನ ಪಾಳ್ಯದಲ್ಲಿ ಅಂತ್ಯ ಕ್ರಿಯೆ. ಪುತ್ರ‌ರಾದ ಎಸ್.ಆರ್.ಶ್ರೀನಿವಾಸ್, ಎಸ್.ಆರ್.ಜಗದೀಶ್, ಪುತ್ರಿ ಸುನಂದಾರನ್ನ ಅವರು ಅಗಲಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ 23 ವರ್ಷಗಳ ಕಾಲ ದೀರ್ಘವಾಗಿ ಸೇವೆ ಸಲ್ಲಿಸಿದ್ದ ಇವರು ತಾಲೂಕು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಹಿರಿಯ ರಾಜಕೀಯ ನಾಯಕರಾಗಿದ್ದ ಇವರು ಹಲವರಿಗೆ ರಾಜಕೀಯವಾಗಿ ಗುರು ಕೂಡ ಎನಿಸಿಕೊಂಡಿದ್ದರು.

PREV
click me!

Recommended Stories

ಪರಮೇಶ್ವರ್ ಮುಂದಿನ ಸಿಎಂಗೆ ಆಗ್ರಹಿಸಿ ರಕ್ತದಲ್ಲಿ ನೂರಾರು ಜನರಿಂದ ಸಹಿ ಸಂಗ್ರಹ
ಮನ್‌ ಕೀ ಬಾತ್: ಕರ್ನಾಟಕದ ಜೇನು ಕೃಷಿಗೆ ಪ್ರಧಾನಿ ಮೋದಿ ಶ್ಲಾಘನೆ, ಪುತ್ತೂರು ಮತ್ತು ತುಮಕೂರು ಉಲ್ಲೇಖ