ಕಣ್ಣೀರು ಹಾಕಿ ಸಚಿವ ಮಾಧುಸ್ವಾಮಿಗೆ ಕೈ ಮುಗಿದ ಡಿಕೆಶಿ ಸಂಬಂಧಿ ಶಾಸಕ

Published : Nov 08, 2019, 08:29 AM IST
ಕಣ್ಣೀರು ಹಾಕಿ ಸಚಿವ ಮಾಧುಸ್ವಾಮಿಗೆ ಕೈ ಮುಗಿದ ಡಿಕೆಶಿ ಸಂಬಂಧಿ ಶಾಸಕ

ಸಾರಾಂಶ

ಸಚಿವ ಮಾಧುಸ್ವಾಮಿಗೆ ಕಣ್ಣೀರು ಹಾಕಿ ಕೈ ಮುಗಿದು ಮನವಿ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಸಂಬಂಧಿಯಾಗಿರುವ ಡಾ. ರಂಗನಾಥ್ ಕೇಳಿಕೊಂಡಿದ್ದಾರೆ. 

ತುಮಕೂರು (ನ.08): ಕುಣಿಗಲ್ ಕ್ಷೇತ್ರಕ್ಕೆ ತಡೆ ಹಿಡಿಯಲಾಗಿರುವ ಅನುದಾನವನ್ನು ಬಿಡುಗಡೆ ಮಾಡುವಂತೆ ಡಿ.ಕೆ.ಶಿವಕುಮಾರ್ ಸಹೋದರ ಸಂಬಂಧಿ, ಶಾಸಕ ಡಾ.ರಂಗನಾಥ್ ಗದ್ಗದಿತರಾಗಿ ಕೈ ಮುಗಿದು ಸಚಿವ ಮಾಧುಸ್ವಾಮಿ ಬಳಿ ಕೇಳಿಕೊಂಡ ಘಟನೆ  ನಡೆದಿದೆ.

ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಮಾಧುಸ್ವಾಮಿ ನೇತೃತ್ವದಲ್ಲಿ ಕೆಡಿಪಿ ಸಭೆ ಆಯೋಜನೆಯಾಗಿತ್ತು. ಈ ಸಂದರ್ಭದಲ್ಲಿ ಡಾ.ರಂಗನಾಥ್ ಮಾತನಾಡಿ, ಕುಣಿಗಲ್ ಕ್ಷೇತ್ರದ ರಸ್ತೆ ಅಭಿವೃದಿಟಛಿಗಾಗಿ ಬಿಡುಗಡೆ ಮಾಡಿದ್ದ 14 ಕೋಟಿ ರು. ತಡೆ ಹಿಡಿಯಲಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಇದರಿಂದ ಕ್ಷೇತ್ರದ ಅಭಿವೃದಿಟಛಿ ಕುಂಟಿತವಾಗಿದ್ದು, ನನಗೆ ತುಂಬಾ ನೋವಾಗಿದೆ ಎಂದು ಗದ್ಗದಿತರಾಗಿ ಆದಷ್ಟು ಬೇಗ ಅನುದಾನ ಬಿಡುಗಡೆ ಮಾಡುವಂತೆ ಮಾಧುಸ್ವಾಮಿ ಬಳಿ ಕೈ ಮುಗಿದು ಕೇಳಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಮಾಧುಸ್ವಾಮಿ, ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ಸಲುವಾಗಿ ಅನುದಾನಗಳನ್ನು ತಡೆಹಿಡಿಯಲಾಗಿದೆ ಎಂದರು.

PREV
click me!

Recommended Stories

ತುಮಕೂರು: ಸತ್ಯಮಂಗಲದಲ್ಲಿ ಬಯಲಾದ 700 ವರ್ಷಗಳ ಹಿಂದಿನ ರಹಸ್ಯ! ಅಪರೂಪದ ವಿಶೇಷ ವೀರಗಲ್ಲು ಶಾಸನ ಪತ್ತೆ
ತುಮಕೂರು ಗ್ರಾಮ ಆಡಳಿತ ಅಧಿಕಾರಿ (VAO) ಕರ್ತವ್ಯ ಮುಗಿಸಿ ಮನೆಗೆ ಹೊರಟರು; ಆದ್ರೆ ದಾರಿಯಲ್ಲೇ ಮಸಣ ಸೇರಿದರು!