ತುಮಕೂರು: ದೇವರ ಪ್ರಸಾದ ಸ್ವೀಕರಿಸಿದ 40ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

Published : Apr 28, 2019, 06:41 PM IST
ತುಮಕೂರು: ದೇವರ ಪ್ರಸಾದ ಸ್ವೀಕರಿಸಿದ 40ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಸಾರಾಂಶ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿಯ ಕಿಚ್ಚುಗತ್ತಿ ಮಾರಮ್ಮ ಪ್ರಸಾದ ದುರಂತ ಮಾಸವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ದೇವಸ್ಥಾನದ ಪ್ರಸಾದ ದುರಂತ ಸಂಭವಿಸಿದೆ.

ತುಮಕೂರು, [ಏ.28]: ದೇವರ ಪ್ರಸಾದ ಸೇವಿಸಿದ 40ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿನ್ನಪ್ಪನಹಳ್ಳಿಯಲ್ಲಿ ನಡೆದಿದೆ.

ಚಿನ್ನಪ್ಪನಹಳ್ಳಿಯ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಇಂದು [ಭಾನುವಾರ] ಹರಿಸೇವೆ ಕಾರ್ಯಕ್ರಮ ಪ್ರಯುಕ್ತ ಬೆಳಗ್ಗೆ 9 ಗಂಟೆಗೆ ಅನ್ನಪ್ರಸಾದ ವಿತರಿಸಲಾಗಿತ್ತು. ಈ ಪ್ರಸಾದ ಸ್ವೀಕರಿಸಿದ ಭಕ್ತರಲ್ಲಿ 40ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ.

ಸುಳ್ವಾಡಿ ವಿಷ ಪ್ರಕರಣ: ಪ್ರಸಾದದಲ್ಲಿತ್ತು ಮಾರಾಣಾಂತಿಕ ಕೀಟನಾಶಕ

ಅಸ್ವಸ್ಥಗೊಂಡವರನ್ನು  ಕೂಡಲೇ ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯಿಂದಾಗಿ ಭಕ್ತರಲ್ಲಿ ಆತಂಕ ಮೂಡಿದೆ. ಈ ಕುರಿತು ಕಳ್ಳಂಬೆಳ್ಳ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿಯ ಕಿಚ್ಚುಗತ್ತಿ ಮಾರಮ್ಮ ದೇವಸ್ಥಾನದಲ್ಲಿ ಕೆಲತಿಂಗಳ ಹಿಂದೆ ದುಷ್ಕರ್ಮಿಗಳು ಪ್ರಸಾದಕ್ಕೆ ವಿಷ ಬೆರೆಸಿದ್ದರಿಂದ, ಅದನ್ನು ಸೇವಿಸಿದ 17ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು. ಈ ಘಟನೆ ಮಾಸುವ ಮುನ್ನವೇ ಶಿರಾದಲ್ಲೂ ಅಂಥದ್ದೇ ಘಟನೆ ನಡೆದಿರುವುದು ವಿಪರ್ಯಾಸ.

PREV
click me!

Recommended Stories

ನಟ ದರ್ಶನ್‌ಗೆ ಮತ್ತೊಂದು ಭಾರಿ ಹಿನ್ನಡೆ! ಅರ್ಜಿ ವಿಚಾರಣೆಗೆ ಯೋಗ್ಯವಲ್ಲವೆಂದು ನ್ಯಾಯಪೀಠಕ್ಕೆ ಹೋಗುವ ಮುನ್ನವೇ ವಜಾ!
ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!