ವೇದಿಕೆಯಲ್ಲೇ ಜೆಡಿಎಸ್ ಶಾಸಕಗೆ ಬೆವರಿಳಿಸಿದ ಜನ

Published : Nov 04, 2019, 03:25 PM IST
ವೇದಿಕೆಯಲ್ಲೇ ಜೆಡಿಎಸ್ ಶಾಸಕಗೆ ಬೆವರಿಳಿಸಿದ ಜನ

ಸಾರಾಂಶ

ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಅವರಿಗೆ ವೇದಿಕೆಯಲ್ಲೇ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ.  ಈ ವೇಳೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ತಕ್ಷಣವೇ ಶಾಸಕರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. 

ತುಮಕೂರು [ನ.04]: ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್ ಗೆ ವೇದಿಕೆಯಲ್ಲೇ ಜನರು ಬೆವರಿಳಿಸಿದ್ದಾರೆ. 

ಹಾಗಲವಾಡಿ ಗ್ರಾಮದ ಕರಿಯಮ್ಮ ದೇವಾಲಯದ ಸಮುದಾಯ ಭವನ ಉದ್ಘಾಟನೆಗೆ ಆಗಮಿಸಿದ್ದ ವೇಳೆ , ಇಲ್ಲಿನ ಕೆರೆಗೆ ನೀರು ಹರಿಸದೆ ಇರುವುದರಿಂದ ಶಾಸಕರಿಗೆ ತರಾಟೆ ತೆಗೆದುಕೊಳ್ಳಲಾಗಿದೆ. 

ವೇದಿಕೆಯಲ್ಲಿಯೇ ಹೇಮಾವತಿ ನೀರು ಹರಿಸುವ ವಿಚಾರವಾಗಿ ಮಾತನಾಡುತ್ತಿದ್ದಾಗ, ನೀರು ಹರಿಸುವ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದೀರಾ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ವೇಳೆ ಭಾಷಣಕ್ಕೂ ಅಡ್ಡಿಪಡಿಸಲಾಗಿದೆ. 

ಬಳಿಕ ವೇದಿಕೆಯಿಂದ ಶಾಸಕರು ಕೆಳಗಿಳುತ್ತಿದ್ದಂತೆ ಜನರು ತರಾಟೆಗೆ ತೆಗೆದುಕೊಂಡಿದ್ದು, ಸ್ಥಳದಲ್ಲಿ ನೂಕಾಟ-ತಳ್ಳಾಟವಾಗಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. 

ಶಾಸಕರನ್ನೇ ಗ್ರಾಮಸ್ಥರು ತಳ್ಳಾಡಿದ್ದು ಪರಿಸ್ಥಿತಿ ಗಂಭೀರವಾಗುತ್ತಿದ್ದ ಶಾಸಕರು ಸ್ಥಳದಿಂದ ತಕ್ಷಣವೇ ಹೊರಟಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಗುಬ್ಬಿ ಜೆಡಿಎಸ್ ಶಾಸಕರಾಗಿರುವ ಎಸ್.ಆರ್.ಶ್ರೀನಿವಾಸ್ ಅವರು ಈ ಹಿಂದೆ ಪಕ್ಷ ತೊರೆಯಲಿದ್ದಾರೆ ಎನ್ನುವ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಅಲ್ಲದೇ ಪಕ್ಷದ ವರಿಷ್ಠ ಬಗ್ಗೆ ಶ್ರೀನಿವಾಸ್ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು. 

PREV
click me!

Recommended Stories

ಜನರ ಮೇಲೆ ಮತ್ತೊಂದು ಹೊರೆ... ಸಿಲಿಂಡರ್ ದರ ಏರಿಕೆಗೆ ಡಿಸಿಎಂ ಪರಮೇಶ್ವರ್ ಆಕ್ರೋಶ
ತುಮಕೂರಿನಲ್ಲಿ ಹೃದಯವಿದ್ರಾವಕ ಘಟನೆ: ಆಟವಾಡುತ್ತಿದ್ದ 9 ವರ್ಷದ ವಿದ್ಯಾರ್ಥಿ ನೀರಿನ ಹೊಂಡಕ್ಕೆ ಬಿದ್ದು ಸಾವು!