
ಕಿರುತೆರೆ ನಟಿ ಅಮೃತಾ ರೂಪೇಶ್ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಹೌದು, ಅಮೃತಾ ಮನೆಯಲ್ಲಿ ಸಂತಸ ಮನೆ ಮಾಡಿದೆ. ಅಮೃತಾ ಗಂಡು ಮಗುವಿಗೆ ತಾಯಿಯಾಗಿದ್ದಾರೆ. ಈ ಮೂಲಕ ನಟಿಯ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.
ಅನೇಕ ಸಿನಿಮಾ, ಧಾರಾವಾಹಿಗಳಲ್ಲಿ ಮತ್ತು ಶೋ ಮೂಲಕ ಗುರುತಿಸಿಕೊಂಡಿದ್ದ ಅಮೃತಾ ರೂಪೇಶ್ ಬದುಕಲ್ಲಿ ಇತ್ತೀಚೆಗೆಷ್ಟೇ ಸಾಕಷ್ಟು ಕಷ್ಟದ ದಿನಗಳನ್ನು ಏದುರಿಸಿದ ನಂತರ ಇದೀಗ ಮತ್ತೆ ಖುಷಿಯಾಗಿದ್ದಾರೆ. ಇತ್ತೀಚಿಗಷ್ಟೆ ಅಮೃತಾ ರೂಪೇಶ್ ಮುದ್ದು ಮಗಳು ಸಮನ್ವಿ ಸಾವಿನ ನಂತರ ಸಾಕಷ್ಟು ಕುಗ್ಗಿ ಹೋಗಿದ್ದರು. ಇದೀಗ ಗಂಡು ಮಗು ಆಗಮನದಿಂದ ಕುಟುಂಬಕ್ಕೆ ಹೊಸ ಚೈತನ್ಯ ಸಿಕ್ಕಿದೆ.
ಮನ ಮಿಡಿಯುವಂತಿತ್ತು ಅಮೃತಾ ಪೋಸ್ಟ್!
ಮಗಳನ್ನು ಕಳೆದುಕೊಂಡು ನೋವಿನಲ್ಲಿಯೇ, ತಾಯಿ ಯಾಗುತ್ತಿದ್ದ ಅಮೃತಾ ಬಾಳಲ್ಲಿ ಭರವಸೆಯೊಂದು ಇತ್ತು. ಈ ನೋವಿನಲ್ಲಿ ಅಮೃತಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಒಂದು ಪೋಸ್ಟ್ ಮಾಡಿದ್ದು, ನೆಟ್ಟಿಗರಿಂದ ಕಮೆಂಟ್ಸ್ ಬಂದಿದ್ದವು. ಏನಿತ್ತು ಆ ಪೋಸ್ಟಿನಲ್ಲಿ?
ದುಷ್ಟ ಶಕ್ತಿಗಳ ಮಧ್ಯೆ ಸೂಪರ್ ಪವರೊಂದು ನಟಿ ಅಮೃತಾ ನಾಯ್ಡುರನ್ನು ಕಾಪಾಡುತ್ತಿದೆ!
'ನನ್ನ ಜೀವನದಲ್ಲಿ ಒಂದು ದಿನ ಜೋರಾದ ಗುಡುಗು ಬಡಿದ ನಂತರ ನನ್ನ ಪ್ರಪಂಚ ನಲುಗಿತ್ತು. ನಾನು ಹಿಡಿದಿಟ್ಟುಕೊಳ್ಳಲು ಜೀವನದಲ್ಲಿ ಏನೂ ಇಲ್ಲಿ ಅನಿಸಿತ್ತು. ನನಗೆ ಏನೂ ಯಾವುದೂ ಅರ್ಥವಾಗರಲಿಲ್ಲ, ಉಸಿರಾಡುತ್ತಿದ್ದೇನೆ. ಆದರೆ ಒಳಗೆ ಸತ್ತಿದ್ದೇನೆ ಎಂದು ಭಾವಿಸಿದೆ. ನನ್ನ ಜೀವನದ ಸ್ಪೆಷಲ್ ವ್ಯಕ್ತಿಗಳಿಂದ ನಿಮ್ಮೆಲ್ಲರ ಪ್ರೀತಿ ಮತ್ತು ಆಶೀರ್ವಾದದಿಂದ ನನ್ನ ಜೀವನ ಹೀಗಿದೆ. ನೀವು ನನ್ನೊಳಗೆ ಇನ್ನೊಂದು ಜೀವವಿದೆ ನನ್ನ ಜೀವನವನ್ನು ಮತ್ತೆ ಬದಲಾಯಿಸುತ್ತದೆ ಆ ಬೆಳಕನ್ನು ನೋಡುತ್ತೇನೆ ಎಂದು ನೆನಪಿಸುತ್ತಿದ್ದಿರಿ.'
'ನನ್ನೊಳಗಿರುವ ಪುಟ್ಟ ಜೀವ ಕಾಣಿಸಿಕೊಳ್ಳುತ್ತಿದೆ. ಜೀವನದಲ್ಲಿ ಎಂದೂ ಮಾಸದ ನೋವುಗಳು ಕಾಣಿಸಿಕೊಳ್ಳುತ್ತವೆ. ಇದು ಯಾವತ್ತೂ ಮರೆಯಲು ಅಸಾಧ್ಯ. ಎಲ್ಲ ಭಾವನೆಗಳನ್ನು ನನ್ನ ಮೇಲೆ ಹಾಕಿಕೊಳ್ಳಬಾರದು. ಕೆಲವು ವಿಷಯಗಳನ್ನು ಬದಲಾಯಿಸಲಾಗದಿದ್ದರೂ ಜೀವನದಲ್ಲಿ ಆ ನೋವಿನಿಂದ ಎಂದಿಗೂ ಚೇತರಿಸಿಕೊಳ್ಳುವುದಿಲ್ಲ. ಈ ನೋವುಗಳು ಏನಿದ್ದರೂ ಅದು ನನಗೆ ಮಾತ್ರ ಇರಬೇಕು. ಈ ಪುಟ್ಟ ಜೀವಕ್ಕೆ ಏನೂ ಗೊತ್ತಾಗಬಾರದು. ಅದು ಸದಾ ನನ್ನ ಸಂತೋಷದ ಕ್ಷಣಗಳನ್ನು ಮಾತ್ರ ನೋಡಬೇಕು,' ಎಂದು ಅಮೃತಾ ಹೇಳಿ ಕೊಂಡಿದ್ದರು.
ಸಮನ್ವಿ ಬಂದ್ರೆ ಜೀವನ ಮತ್ತೆ ಫ್ರೆಶ್ ಆಗುತ್ತೆ ಇಲ್ಲದಿದ್ದರೆ ಹೊಸ ಫ್ರೆಶ್ ಶೇಡ್ ಸಿಗುತ್ತೆ: ಅಮೃತಾ ನಾಯ್ಡು
ಕೆಲವು ತಿಂಗಳ ಹಿಂದೆ ಅಮೃತಾ ನಾಯ್ಡು (Amruita Naidu) ಮತ್ತು ಸಮನ್ವಿ ಬೆಂಗಳೂರಿನ ಕೋಣನಕುಂಟೆ ಬಳಿಯ ವಾಜರಹಳ್ಳಿಯಲ್ಲಿ ಪ್ರಯಾಣಿಸುವಾಗ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತವಾಗಿತ್ತು. 6 ವರ್ಷದ ಸಮನ್ವಿ ಸ್ಥಳದಲ್ಲೇ ಮೃತಪಟ್ಟಳು. ಈ ಘಟನೆ ಚಿತ್ರರಂಗಕ್ಕೆ ಮಾತ್ರವಲ್ಲ, ಇಡೀ ಕರ್ನಾಟಕಕ್ಕೆ ದೊಡ್ಡ ಶಾಕ್ ಆಗಿತ್ತು. ನನ್ನಮ್ಮ ಸೂಪರ್ ಸ್ಟಾರ್ ಮೂಲಕ ಸಮನ್ವಿ ಕರ್ನಾಟಕ ಜನತೆಯ ಮನೆ ಮಗಳಾಗಿದ್ದಳು.
ಅಮೃತಾ ಈ ಸಮಯದಲ್ಲಿ ಗರ್ಭಿಣಿ ಆಗಿದ್ದ ಕಾರಣ ಕುಟುಂಬಸ್ಥರು ಮತ್ತು ಸ್ನೇಹಿತರು ಹೆಚ್ಚಿನ ಕಾಳಜಿ ವಹಿಸಿದರು. ಈ ಸಮಯದಲ್ಲಿ ರಾಜಕಾರಣಿಗಳು ಕೂಡ ಅಮೃತಾ ನಿವಾಸಕ್ಕೆ ಭೇಟಿ ಕೊಟ್ಟು, ಸಂತಾಪ ಸೂಚಿಸಿದ್ದರು. ಖ್ಯಾತ ಹರಿಕಥೆ ದಾಸ ಗುರುರಾಜ ನಾಯ್ಡು ಅವರ ಮೊಮ್ಮಗಳು ಅಮೃತಾ ಮೇಲೆ ಕನ್ನಡ ವೀಕ್ಷಕರಿಗೆ ಅಪಾರ ಪ್ರೀತಿ.
ಅಮೃತಾ ಕುಟುಂಬಕ್ಕೆ ಒಳ್ಳೆಯದಾಗಲಿ. ಕಂದಮ್ಮ ಮತ್ತೆ ಸಂತೋಷ ತರಲಿ ಎಂದು ನಾವೆಲ್ಲರೂ ಆಶಿಸೋಣ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.