ಹಿಂಸೆಗೊಳಗಾದ ಪ್ರಾಣಿಗಳಿಗಾಗಿ ಮಿಡಿದ ನಟಿ ಸುಧಾರಾಣಿ… ಕ್ರೂರಿಗಳ ವಿರುದ್ಧ ಕಠಿಣ ಶಿಕ್ಷೆಗೆ ಕರೆ

Published : Jan 15, 2025, 12:59 PM ISTUpdated : Jan 15, 2025, 01:04 PM IST
ಹಿಂಸೆಗೊಳಗಾದ ಪ್ರಾಣಿಗಳಿಗಾಗಿ ಮಿಡಿದ ನಟಿ ಸುಧಾರಾಣಿ… ಕ್ರೂರಿಗಳ ವಿರುದ್ಧ ಕಠಿಣ ಶಿಕ್ಷೆಗೆ ಕರೆ

ಸಾರಾಂಶ

ಪ್ರಾಣಿಹಿಂಸೆ ವಿಡಿಯೋಗಳ ಬಗ್ಗೆ ನಟಿ ಸುಧಾರಾಣಿ, ಕ್ರೂರಿಗಳ ವಿರುದ್ಧ ಕಠಿಣ ಶಿಕ್ಷೆಗೆ ಆಗ್ರಹಿಸಿದ್ದಾರೆ. ಕಾಮಧೇನುವಿನ ಮೇಲಿನ ಹಿಂಸೆ ಮನಕಲಕಿದೆ ಎಂದಿರುವ ಅವರು, 50 ರೂ. ದಂಡ ಸಾಲದು, ಜಾಮೀನು ರಹಿತ ಅಪರಾಧವಾಗಬೇಕು, ಕ್ರಿಮಿನಲ್ ದಾಖಲೆಯಾಗಬೇಕೆಂದು ಒತ್ತಾಯಿಸಿದ್ದಾರೆ.  

ಪ್ರಾಣಿ ಪ್ರಿಯೆಯಾಗಿರುವ ಕನ್ನಡ ಹಿರೆತೆರೆ ಹಾಗೂ ಕಿರುತೆರೆ ನಟಿ ಸುಧಾರಾಣಿ (Actress Sudharani) ಪ್ರಾಣಿಪ್ರಿಯೆಯಾಗಿದ್ದು, ಇದೀಗ ಅವರು ಪ್ರಾಣಿಗಳಿಗೆ, ಪಕ್ಷಿಗಳಿಗೆ ಹಿಂಸೆ ನೀಡುವ ಅದರಲ್ಲು ಹಸುಗಳಿಗೆ ಹಿಂಸೆ ನೀಡಿರುವ ಕೆಲವೊಂದಿಷ್ಟು ವಿಡೀಯೋಗಳು ವೈರಲ್ ಆಗಿರುವ ಬಗ್ಗೆ ನೊಂದುಕೊಂಡಿದ್ದು, ಪ್ರಾಣಿ ಹಿಂಸೆ ಮಾಡುತ್ತಿರುವ ಕ್ರೂರಿಗಳ ವಿರುದ್ಧ ಕಠಿಣ ಶಿಕ್ಷೆಗೆ  (punishment) ನಟಿ ಆಗ್ರಹಿಸಿದ್ದಾರೆ. ಈ ಕುರಿತು ಸುಧಾರಾಣಿ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಒಂದು ದೊಡ್ಡದಾದ ನೋಟ್ ಬರೆದಿದ್ದಾರೆ. 

ನೇರಪ್ರಸಾರದಲ್ಲಿ ಬಂದ ಸುಧಾರಾಣಿ ವೀಕ್ಷಕರಿಗೆ ಕೊಟ್ಟಿದ್ದಾರೆ ಬಿಗ್‌ ಆಫರ್! ಏನದು ನೋಡಿ...

ತಮ್ಮ ಇನ್ ಸ್ಟಾಗ್ರಾಂನಲ್ಲಿ ತಮ್ಮ ಹಾಗೂ ಮಗಳ ಹಸುವಿನ ಜೊತೆಗಿರುವ ಫೋಟೊಗಳನ್ನು ಶೇರ್ ಮಾಡಿರುವ ಸುಧಾರಾಣಿ ‘ಒಬ್ಬ ಪ್ರಾಣಿ ಪ್ರೇಮಿಯಾಗಿ ಈ ಕೃತ್ಯಕ್ಕೆ ಸಂಬಂಧಿಸಿದ ಕೆಲವು ವಿಡೀಯೋಗಳನ್ನ ನೋಡಿ, ಇದರ ಬಗ್ಗೆ ಓದಿ ನನ್ನಿಂದ ಸುಮ್ಮನೆ ಇರೋದಕ್ಕೆ ಸಾಧ್ಯವಾಗಲಿಲ್ಲ, ಸುಮ್ಮನೆ ಇರೋದು ಕೂಡ ತಪ್ಪು. ನಾವು ತಾಯಿ ಸ್ಥಾನ ಕೊಟ್ಟಿರೋ ಕಾಮಧೇನುವಿಗೆ ಹೀಗೆ ಅಮಾನವೀಯವಾಗಿ ಹಿಂಸೆ ಕೊಟ್ಟಿರೋದನ್ನ ನೋಡಿದ್ರೆ ಕರುಳು ಕಿವುಚಿ ಬರುವಷ್ಟು ಸಂಕಟ ಆಗತ್ತೆ. ಈಗಲಾದರು ಶಾಸಕಾಂಗ ಎಚ್ಚೆತ್ತುಕೊಳ್ಳಬೇಕು. ಕೆಟ್ಟದ್ದನ್ನೇ ಅರಿಯದ ನಾಯಿ, ಕುರಿ, ಹಸು, ಕುದುರೆ, ಕತ್ತೆ ಇಂಥ ಯಾವುದೇ ಮೂಕಪ್ರಾಣಿಗಳಿಗೆ, ಪಕ್ಷಿಗಳಿಗೆ ಹಿಂಸೆ ಕೊಡೋ ಕ್ರೂರಿಗಳಿಂದ 50 ರೂಪಾಯಿ ದಂಡ ಕಟ್ಟಿಸಿಕೊಂಡು ಬಿಟ್ಟುಬಿಡೋದಲ್ಲ. ಇದು Bailable Offence ಕೂಡ ಅಲ್ಲ ಎಂದಿದ್ದಾರೆ. 

ಸುಧಾರಾಣಿಯ ಕ್ರಷ್‌ ಯಾರು? ಇಷ್ಟದ ಹಾಡು, ಸಿನಿಮಾ ಯಾವುದು? 90 ಸೆಕೆಂಡ್‌ನಲ್ಲಿ ಸಿಕ್ಕಿತು ಉತ್ತರ!

ಅಷ್ಟೇ ಅಲ್ಲ ಎಷ್ಟೋ ಜನ ಪ್ರಾಣಿ ಪಕ್ಷಿ ಪ್ರೇಮಿಗಳು ಮೂಕಜೀವಿಗಳಿಗೆ ಹಿಂಸೆ ಕೊಡೋದು ಜಾಮೀನು ರಹಿತ ಅಪರಾಧ ಅನ್ನೋ ಕಾನೂನನ್ನ ತರೋದಕ್ಕೆ ಹೋರಾಟ ಮಾಡ್ತಾ ಇದ್ದಾರೆ. ಇಂಥ ಕ್ರೂರಿಗಳನ್ನ ಜೈಲಿನಲ್ಲಿಟ್ಟು ಸಾಕಬೇಕಾ? ಒಳಗಡೆ ಚೆನ್ನಾಗಿ ಊಟ ತಿಂಡಿ ಮಾಡ್ಕೊಂಡು ಆರಾಮಾಗಿ ಇರ್ತಾರೆ. ಇವರಿಗೆ 50 ರೂಪಾಯಿ, 50 ಸಾವಿರ ಅಂತ ದಂಡ ಹಾಕಿದ್ರೆ ಹೇಗೋ ಏನೋ ಮಾಡಿ, ಸಾಲ ಮಾಡಿ ಆದರೂ ದಂಡ ಕಟ್ಟಿ ಹೊರಗಡೆ ಬರ್ತಾರೆ. ಈ ಎರಡು ಶಿಕ್ಷೆಗಳಿಂದ ಯಾವುದೇ ಬದಲಾವಣೆ ತರೋಕೆ ಸಾಧ್ಯವಿಲ್ಲ, ಇಂಥವರಿಗೆ ಘೋರವಾದ ಶಿಕ್ಷೆ ಕೊಡಬೇಕಾದ ಅವಶ್ಯಕತೆ ಇದೆ. ಬೇರೆ ದೇಶಗಳಲ್ಲಿ ಇರೋ ಹಾಗೆ ನಮ್ಮ ದೇಶದಲ್ಲೂ ಪ್ರಾಣಿ ಪಕ್ಷಿಗಳ ಹಿಂಸೆ ಮಾಡೋರಿಗೆ ಕಠಿಣವಾದ ಶಿಕ್ಷೆ ಕೊಡಬೇಕು, ಇದೆಲ್ಲಕ್ಕಿಂತ ಮುಖ್ಯವಾಗಿ ಪ್ರಾಣಿಹಿಂಸೆ ಮಾಡೋರ ವಿರುದ್ಧ Criminal Record File ಆಗಬೇಕು ಎಂದು ಹೇಳಿಕೊಂಡಿದ್ದಾರೆ. 

ವಿಷ್ಣುವರ್ಧನ್ ಜೊತೆಗಿನ ಆ ಸಿನಿಮಾ ರಿಜೆಕ್ಟ್ ಮಾಡಿದ್ಯಾಕೆ ಸುಧಾರಾಣಿ? ಅವರೇ ಹೇಳಿದ ಕಾರಣ ಇದು!

ಜೊತೆಗೆ ಅವರು ಇನ್ನೇನೇ ಕೆಲಸ ಮಾಡೋಕೆ ಪ್ರಯತ್ನ ಪಟ್ಟರು ಇಂಥ ಕೆಲಸ ಮಾಡಿರೋದಕ್ಕೆ Criminal Background ಇರಬೇಕು. ಈ ಕ್ರಮ ಕೈಗೊಂಡಾಗ ಮಾತ್ರ ಈ ರೀತಿ ಮಾಡಬೇಕು ಅಂದುಕೊಳ್ಳೋರಿಗೆ ಯೋಚನೆ ಮಾಡೋಕೆ ಕೂಡ ಭಯ ಶುರುವಾಗತ್ತೆ. ಪ್ರಾಣಿಗಳಿಗೆ ಉಪಯುಕ್ತವಾಗೋ ಕಾನೂನನ್ನ ಈಗಲಾದರೂ ಜಾರಿಗೆ ತಂದರೆ ಮಾತ್ರ ಮುಂದೆ ಇಂಥ ಕೃತ್ಯಗಳು ನಡೆಯದೇ ಇರೋ ಹಾಗೆ ತಡೆಗಟ್ಟಬಹುದು ಎಂದು ಕೇಳಿಕೊಂಡಿದ್ದಾರೆ ನಟಿ ಸುಧಾರಾಣಿ. 
 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

BBK 12: ಕಾವ್ಯ ಶೈವ ಹತ್ತಿಸಿದ ಕಿಡಿ; ಧ್ರುವಂತ್‌, ರಜತ್‌ ಮಧ್ಯೆ ಮಾರಾಮಾರಿ ಜಗಳ, ಹೊರಬೀಳೋರು ಯಾರು?
Amruthadhaare Serial: ಪ್ಲ್ಯಾನ್‌ ಬದಲಾಯಿಸಿದ ಜಯದೇವ್;‌ ಇನ್ನೊಂದು ಅವಾಂತರ ಆಗಲಿದೆಯಾ?