ತುಂತುರು ಅಲ್ಲಿ ನೀರ ಹಾಡು... ಎಂದ ಅಮೃತಧಾರೆ ಮಲ್ಲಿ ಕಂಠಕ್ಕೆ ಫ್ಯಾನ್ಸ್‌ ಫಿದಾ! ವಿಡಿಯೋ ವೈರಲ್‌

Published : Nov 30, 2024, 04:21 PM IST
ತುಂತುರು ಅಲ್ಲಿ ನೀರ ಹಾಡು... ಎಂದ ಅಮೃತಧಾರೆ ಮಲ್ಲಿ ಕಂಠಕ್ಕೆ ಫ್ಯಾನ್ಸ್‌ ಫಿದಾ!  ವಿಡಿಯೋ ವೈರಲ್‌

ಸಾರಾಂಶ

ತುಂತುರು ಅಲ್ಲಿ ನೀರ ಹಾಡು.. ಹಾಡಿದ ಅಮೃತಧಾರೆ ಮಲ್ಲಿ ಅಂದ್ರೆ ರಾಧಾ ಭಗವತಿ ಅವರ ಕಂಠಕ್ಕೆ ಫ್ಯಾನ್ಸ್‌ ಫಿದಾ ಆಗಿದ್ದಾರೆ. ವಿಡಿಯೋ ವೈರಲ್‌ ಆಗಿದೆ.   

ಅಕ್ಕವ್ರೇ ಅಕ್ಕವ್ರೇ ಎನ್ನುತ್ತಲೇ ಎಲ್ಲರ ಮನವನ್ನು ಗೆದ್ದಾಕೆ ಅಮೃತಧಾರೆಯ ಮಲ್ಲಿ. ಗಂಡನನ್ನು ಅಗತ್ಯಕ್ಕಿಂತ ಹೆಚ್ಚು ನಂಬಿ ಮೋಸ ಹೋದರೂ ಗಂಡನನ್ನೇ ಸರ್ವಸ್ವ ಎಂದುಕೊಂಡಾಕೆ ಈ ಹೆಣ್ಣಮಗಳು. ಮನೆ ಕೆಲಸದಾಕೆಯಾದವಳು ಮನೆಯೊಡತಿ ಆಗಿದ್ದಾಳೆ. ಆದರೆ ತನ್ನ ಮುಗ್ಧತೆಯನ್ನುಮಾತ್ರ ಬಿಟ್ಟುಕೊಟ್ಟಿಲ್ಲ. ಕುತಂತ್ರಿ ಜೈದೇವ ಸದ್ಯ ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳುವಂತೆ ನಾಟಕ ಮಾಡುತ್ತಿದ್ದಾನೆ. ಇದಾಗಲೇ ಸಾಯಿಸಲು ಹೊರಟಿದ್ದ ಪತಿ, ಕೆಟ್ಟವನು ಎಂದು ತಿಳಿದರೂ ಅವನನ್ನು ಮತ್ತೆ ನಂಬಿದ್ದಾಳೆ. ತನ್ನ ಮಗುವಿನ ಸಾವಿಗೆ ಕಾರಣನಾದವ ಎಂದು ಗೊತ್ತಿದ್ದರೂ, ಪತಿಯನ್ನು ಕ್ಷಮಿಸಿದ್ದಾಳೆ. ಈಗ ಏಕಾಏಕಿ ಬದಲಾಗಿದ್ದು ಏಕೆ ಎನ್ನುವುದನ್ನೂ ಅರಿಯದ ಮುಗ್ಧೆ ಈಕೆ.  ಪಕ್ಕಾ ಹಳ್ಳಿ ಹುಡುಗಿಯಾಗಿ ನಟಿಸುತ್ತಿರುವ ಸ್ಟೈಲಿಷ್ ನಟಿ ಈಕೆ.  


ಈ ರೀತಿ ಪೆದ್ದು ಪೆದ್ದು ಪಾತ್ರದಲ್ಲಿ ಸೈ ಎನಿಸಿಕೊಂಡಿರುವ ಮಲ್ಲಿಯ ನಿಜವಾದ ಹೆಸರು ರಾಧಾ ಭಗವತಿ. ಸೋಷಿಯಲ್‌ ಮೀಡಿಯಾದಲ್ಲಿ ಸಕತ್‌ ಆಕ್ಟೀವ್‌ ಆಗಿರುವ ಮಲ್ಲಿ ಕ್ಯೂಟ್‌ ಫೋಟೋಗಳನ್ನು ಶೇರ್‌ ಮಾಡಿಕೊಳ್ಳುತ್ತಿರುತ್ತಾರೆ. ಆದರೆ ಇದೀಗ ಸುಂದರವಾಗಿ ಹಾಡಿರುವ ವಿಡಿಯೋ ಶೇರ್‍ ಮಾಡಿಕೊಂಡಿದ್ದಾರೆ. ಅಮೃತವರ್ಷಿಣಿ ಚಿತ್ರದ ತುಂತುರು ಅಲ್ಲಿ ನೀರ ಹಾಡು... ಗಾಯನದಲ್ಲಿನ ಇವರ ಅದ್ಭುತ ಕಂಠಕ್ಕೆ ಅಭಿಮಾನಿಗಳು ಮನಸೋತಿದ್ದಾರೆ. ನಿಮ್ಮ ನಟನೆಯಷ್ಟೇ ಕ್ಯೂಟ್‌ ಆಗಿದೆ ನಿಮ್ಮ ದನಿ, ಮತ್ತೆ ಮತ್ತೆ ಕೇಳಬೇಕು ಎನ್ನಿಸುತ್ತದೆ ಎಂದು ಕಮೆಂಟ್‌ ಮಾಡುತ್ತಿದ್ದಾರೆ. ಅದೇ ರೀತಿ ಕೆಲವರು ನಿಮ್ಮ ಗಂಡ (ಜೈದೇವ) ಒಳ್ಳೆಯವನಲ್ಲ, ಸ್ವಲ್ಪ ಎಚ್ಚರಿಕೆಯಿಂದ ಇರಿ ಎಂದೂ ಹೇಳುತ್ತಿದ್ದಾರೆ. ಅಂದಹಾಗೆ, ರಾಮ್​ಜಿ ನಿರ್ದೇಶನದ ‘ರಾಮಾಚಾರಿ’ ಧಾರಾವಾಹಿಯಲ್ಲಿ ಸಹೋದರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ರಾಧಾ ಅವರು ಇದೀಗ ಮಲ್ಲಿಯ ಪಾತ್ರಕ್ಕೆ ಜೀವ ತುಂಬುತ್ತಿದ್ದಾರೆ. ಕಿರುತೆರೆಯಿಂದ ಕಳೆದ ವರ್ಷ ರಿಲೀಸ್​ ಆದ ವಸಂತಕಾಲದ ಹೂವುಗಳು ಚಿತ್ರದಲ್ಲಿ ಇವರು ಅಭಿನಯಿಸುವ ಮೂಲಕ ಬೆಳ್ಳಿಪರದೆಗೆ ಎಂಟ್ರಿ ಕೊಟ್ಟರು. ವಿಜಯಪುರದ ರಾಧಾ ಅವರು, ಈ ಚಿತ್ರದಲ್ಲಿ  ಸುಮಾ ಹೆಸರಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.  ಇದಾದ ಬಳಿಕ ಈಗ ಮತ್ತೆ ಕಿರುತೆರೆಗೆ ಪ್ರವೇಶ ಪಡೆದು ಅಮೃತಧಾರೆಯಲ್ಲಿ ನಟಿಸುತ್ತಿದ್ದಾರೆ. ಮಾಡೆಲ್ ಕೂಡ ಆಗಿರುವ ಇವರಿಗೆ  ಚಿತ್ರರಂಗದಲ್ಲಿ   ದೊಡ್ಡ ಹೆಸರು ಮಾಡುವ ಆಸೆ ಎಂದಿದ್ದಾರೆ. ಎಂಥ ಪಾತ್ರ ಕೊಟ್ಟರೂ ಸಲೀಸಾಗಿ ಮಾಡುವ ಇವರಿಗೆ ಉಜ್ವಲ ಭವಿಷ್ಯವಿದೆ ಎನ್ನುವುದು ಸಿನಿ ಪ್ರಿಯರ ಅಭಿಮತ. 

ಲಕ್ಷ್ಮಿನಿವಾಸದ ಚಿನ್ನುಮರಿಯ ರಿಯಲ್​ ಗಂಡನನ್ನು ಮದ್ವೆಗೆ ರೆಡಿ ಮಾಡಿದ್ದು ಹೀಗೆ ನೋಡಿ: ವಿಡಿಯೋ ವೈರಲ್​

 
 ರಾಧಾ ಅವರು ನಟಿ ರಾಧಾ ಭಗವತಿ ಅವರು ‘ಆ 90 ದಿನಗಳು’, ‘ವಸಂತ ಕಾಲದ ಹೂಗಳು’, ‘ಅಪಾಯವಿದೆ ಎಚ್ಚರಿಕೆ’ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ‘ಉಘೇ ಉಘೇ ಮಾದೇಶ್ವರ’ ಧಾರಾವಾಹಿಯಲ್ಲಿಯೂ ನಟಿಸಿದ್ದರು. ಇನ್ನು ‘ಬಾನಿಗೊಂದು ತಾರೆ’ ಮ್ಯೂಸಿಕ್ ವಿಡಿಯೋದಲ್ಲಿಯೂ ಅವರು ಕಾಣಿಸಿಕೊಂಡಿದ್ದಾರೆ. ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದ 'ಅಪಾಯವಿದೆ ಎಚ್ಚರಿಕೆ' ಸಿನಿಮಾದಲ್ಲಿ ನಟಿಸಿದ್ದಾರೆ.  ಇದರ ಜೊತೆಗೆ ಎಸ್. ನಾರಾಯಣ್ ನಿರ್ದೇಶನದ 'ಒಂದ್ಸಲ ಮೀಟ್ ಮಾಡೋಣ' ಸಿನಿಮಾದಲ್ಲಿ ನಾಯಕನ ತಂಗಿಯಾಗಿ ನಟಿಸುತ್ತಿದ್ದಾರೆ. ಸದ್ಯ ಒಂದಾದ ಮೇಲೆ ಒಂದರಂತೆ ಅವಕಾಶಗಳನ್ನು ಪಡೆಯುತ್ತಿದ್ದಾರೆ.
 
  ರಾಧಾ ಅವರ ಕುಟುಂಬದವೇ ಕಲಾವಿದರ ಕುಟುಂಬ. ಇವರ ಅಜ್ಜ  ರಂಗಭೂಮಿ ಕಲಾವಿದರು. ಇದರ ಜೊತೆಗೆ ಸವರು ಹರಿಕಥೆ ದಾಸರೂ ಕೂಡಾ ಆಗಿದ್ದರು. ರಾಧಾ ಅವರ ತಾಯಿಯೂ  ಜನಪದ ಗೀತೆಗಳಿಗೆ ದನಿಯಾದವರು.  ಮನೆಯಲ್ಲಿ ಕಲೆಯ ವಾತಾವರಣವಿದ್ದ ಕಾರಣದಿಂದಲೋ ಏನೋ ರಾಧಾ ಭಗವತಿ ಅವರಿಗೆ ನಟನೆಯತ್ತ ಎಳೆ ವಯಸ್ಸಿನಲ್ಲಿಯೇ ಆಸಕ್ತಿ ಮೂಡಿದೆ. ಕಿರುತೆರೆ, ಹಿರಿತೆರೆ, ಮ್ಯೂಸಿಕ್ ಆಲ್ಬಂ ಮಾತ್ರವಲ್ಲದೇ ರಾಧಾ ಅವರು, ಹಿನ್ನೆಲೆ ಗಾಯಕಿಯೂ ಹೌದು. ಈಗಾಗಲೇ ಎರಡು ಸಿನಿಮಾಗಳಲ್ಲಿ ಹಾಡಿರುವ ಈಕೆ ಕಂಠದಾನಕ್ಕೂ ಸೈ. 'ಮದುಮಗಳು' ಧಾರಾವಾಹಿಯಲ್ಲಿನ ನಾಯಕಿಯ ಪಾತ್ರಕ್ಕೆ ಕಂಠದಾನ ಮಾಡುತ್ತಿರುವ ರಾಧಾ ಅವರಿಗೆ ಕಲೆ ಎಂಬುದು ರಕ್ತಗತವಾಗಿಯೇ ಒಲಿದು ಬಂದಿದೆ.
 

ಬಟ್ಟೆ ಬಿಚ್ಚುವ ಮಾತನಾಡಿ ಪೇಚಿಗೆ ಸಿಲುಕಿದ ಸನಾ ಖಾನ್‌! ಜಾಲತಾಣದಲ್ಲಿ ನಟಿ ಇನ್ನಿಲ್ಲದ ಟ್ರೋಲ್‌...

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

BBK 12: ಪದೇ ಪದೇ ಕಿಚ್ಚ ಸುದೀಪ್‌ ಹೇಳ್ತಿರುವಂತೆ ರಜತ್‌ ವೈರಲ್ ವಿಡಿಯೋ ಅಸಲಿ ವಿಷಯ ಏನು? ಅಂಥದ್ದೇನಿದೆ?
ಏನೂ ಮಾಡದೆ ಸ್ಪಂದನಾ ಸೋಮಣ್ಣ Bigg Boss ಮನೇಲಿ ಇರೋದು ಹೇಗೆ? ಕಿಚ್ಚ ಸುದೀಪ್‌ ಬಿಚ್ಚಿಟ್ಟ ಸತ್ಯ ಏನು?