ಗೌತಮ್​ ಹೊಟ್ಟೆಗೆ ಇಳಿದಿದೆ ಸೋಮರಸ... ಹಾಸಿಗೆ ಹಾಕ್ತಿರುವಾಗಲೇ ಕೊನೆಗೂ ಬಂತು ಆ ಮೊದಲ ಅಕ್ಷರ...

Published : May 18, 2024, 02:30 PM IST
ಗೌತಮ್​ ಹೊಟ್ಟೆಗೆ ಇಳಿದಿದೆ ಸೋಮರಸ... ಹಾಸಿಗೆ ಹಾಕ್ತಿರುವಾಗಲೇ ಕೊನೆಗೂ ಬಂತು ಆ ಮೊದಲ ಅಕ್ಷರ...

ಸಾರಾಂಶ

ಗೌತಮ್​ಗೆ ಪಾನೀಯದಲ್ಲಿ ಮದ್ಯ ಸೇವಿಸಿ ನೀಡಿದ್ದಾನೆ ಗೆಳೆಯ ಆನಂದ್. ಈಗಲಾದ್ರೂ ಭೂಮಿಕಾಗೆ ಪ್ರೀತಿ ನಿವೇದನೆ ಮಾಡಿಕೊಳ್ತಾನಾ ಗೌತಮ್​?  

ಇದುವರೆಗೂ ಮನಸ್ಸು ಬಿಚ್ಚಿ ಐ ಲವ್​ ಯೂ ಎಂದು ಹೇಳದ ಗೌತಮ್​ ಮತ್ತು ಭೂಮಿಕಾ ಜೋಡಿ ಸದ್ಯ ಹನಿಮೂನ್​ಗೆ ತೆರಳಿದೆ.  ಚಿಕ್ಕಮಗಳೂರಿನ ಮಲೆನಾಡಿನ ಸೌಂದರ್ಯವನ್ನು ಅವರು ಸವಿಯುತ್ತಿದ್ದಾರೆ. ಸದಾ ಜಗಳವಾಡುತ್ತಲೇ ಮದುವೆಯಾಗಿ, ಇದೀಗ ಒಬ್ಬರನ್ನೊಬ್ಬರು ಸಕತ್​ ಲವ್​ ಮಾಡ್ತಿರೋ ಜೋಡಿ ಇದು.  ಸದಾ ಕಿತ್ತಾಡುತ್ತಲೇ ಇದ್ದ ಈ ದಂಪತಿ ಈಗ ಒಬ್ಬರನ್ನೊಬ್ಬರು ಬಿಟ್ಟಿರಲಾರದಷ್ಟು ಅನ್ಯೋನ್ಯವಾಗಿದ್ದಾರೆ. ಇದುವರೆಗೂ ಪರಸ್ಪರ ಪ್ರೀತಿಯ ವಿಷಯವನ್ನು ಹಂಚಿಕೊಳ್ಳದಿದ್ದರೂ, ನೇರವಾಗಿ ನಾನು ನಿನ್ನನ್ನು ಪ್ರೀತಿಸುತ್ತಿದ್ದೇನೆ ಎಂದು ಹೇಳದಿದ್ದರೂ, ಇವರ ಪ್ರೀತಿಗೆ ಇವರೇ ಸಾಟಿ. ಇದೀಗ ಈ ಜೋಡಿ ಹನಿಮೂನ್​ಗೆ ಹೋಗಲು ರೆಡಿಯಾಗಿದೆ. ನಾಚಿಕೊಳ್ಳುತ್ತಲೇ ಮಧುಚಂದ್ರಕ್ಕೆ ಹೋಗಿದ್ದಾರೆ.  ಇದೇ ವೇಳೆ ಮದುವೆಯಾಗಿ ಇಷ್ಟು ದಿನವಾದರೂ, ಭೂಮಿಕಾರಿಗೆ ತಾನು ಏನೂ ಗಿಫ್ಟ್​ ಕೊಟ್ಟಿಲ್ಲ ಎಂದು ಅಜ್ಜಿಯ ಬಳಿ ಹೇಳಿಕೊಂಡ ಗೌತಮ್​, ಚಿಕ್ಕಮಗಳೂರಿನಲ್ಲಿರುವ ಎಸ್ಟೇಟ್​ ಅನ್ನು ಭೂಮಿಕಾ ಹೆಸರಿಗೆ ಬರೆದು ಕೊಟ್ಟಿದ್ದಾನೆ. 

ಇತ್ತ ಈ ಜೋಡಿ ಹೀಗೆ ಪ್ರೀತಿಯ ವಿಷಯ ಹೇಳುವುದೇ ಇಲ್ಲ ಎಂದು ತಿಳಿದಿರುವ ಆನಂದ್​ ದಂಪತಿ ಗೌತಮ್​ಗೆ ಪಾನೀಯದಲ್ಲಿ ಮದ್ಯ ಸೇರಿಸಿ ಕೊಟ್ಟಿದ್ದಾರೆ. ಇದಾಗಲೇ ಇದೇ ರೀತಿಯ ಪ್ರಯೋಗ ಭೂಮಿಕಾ ಮೇಲೆ ಮಾಡಿಯಾಗಿತ್ತು. ಆಗ ಭೂಮಿಕಾ ತನ್ನ ಪ್ರೀತಿಯನ್ನು ನಿವೇದಿಸಿಕೊಂಡಿದ್ದಳು. ಇಷ್ಟಾದರೂ ಗೌತಮ್​ಗೆ ಅದರ ಅರಿವೇ ಇರಲಿಲ್ಲ. ಆದರೆ ಈಗ ಕಾಲ ಸ್ವಲ್ಪ ಡಿಫರೆಂಟ್​ ಆಗಿದೆ. ಪತ್ನಿಯ ಮೇಲೆ ಅವನಿಗೂ ಪ್ರೀತಿ ಮೊಳಗಿದೆ, ಆದರೆ ಹೇಳಿಕೊಳ್ಳೋ ಧೈರ್ಯ ಇಲ್ಲವಷ್ಟೇ. ಇದೇ ಕಾರಣಕ್ಕೆ ಆನಂದ್​ ದಂಪತಿ ಮದ್ಯ ಬೆರೆಸಿದ ಪಾನೀಯ ಕೊಟ್ಟಿದ್ದು, ಅದನ್ನು ಗೌತಮ್​ ಕುಡಿದಿದ್ದಾನೆ.

ಹನಿಮೂನೋ, ಆಫೀಸ್​ ಟೂರೋ? ಮಧುಚಂದ್ರಕ್ಕೂ ಸೂಟು ಬೂಟು ಬೇಕಾ? ಗೌತಮ್​ ಕಾಲೆಳೆದ ಫ್ಯಾನ್ಸ್​

ಮಾಮೂಲಿನಂತೆ ಇಬ್ಬರೂ ಬೇರೆ ಬೇರೆ ಮಲಗಲು ಹೋಗಿದ್ದಾರೆ. ಭೂಮಿಕಾ ತಾನು ಕೆಳಗೆ ಮಲಗುವುದಾಗಿ ಹೇಳಿದ್ದಾಳೆ. ಅಷ್ಟರಲ್ಲಿ ಮದ್ಯದ ಅಮಲಿನಲ್ಲಿ ಪ್ರೀತಿಯ ಅಮಲೂ ಸೇರಿರೋ ಗೌತಮ್​, ಭೂಮಿಕಾಗೆ ಐ ಅಷ್ಟೇ ಹೇಳಿದ್ದಾನೆ. ಮುಂದೆ ಹೇಳಲಿಲ್ಲ. ಅಷ್ಟಕ್ಕೇ ಭೂಮಿಕಾ ನಾಚಿ ನೀರಾಗಿದ್ದಾಳೆ. ಮುಂದಿನ ಎರಡು ಶಬ್ದಗಳೂ ಹೇಳಿ ಬೇಗ ಅಂತಿದ್ದಾರೆ ಅಭಿಮಾನಿಗಳು.

ಅದೇ ಇನ್ನೊಂದೆಡೆ,  ಗೌತಮ್​ ಚಿಕ್ಕಮ್ಮ ಈ ಜೋಡಿಯ ಕೊಲೆ ಮಾಡಿಸುವ ಪ್ಲ್ಯಾನ್​ ಮಾಡಿದ್ದರಿಂದ ಇನ್ನೇನು ಆಗಬಹುದು ಎನ್ನುವ ಆತಂಕವೂ ಅಮೃತಧಾರೆ ಅಭಿಮಾನಿಗಳನ್ನು ಕಾಡುತ್ತಿದೆ.  ಮಗ ಗೌತಮ್​ ಮತ್ತು ಸೊಸೆ ಭೂಮಿಕಾ ಎಂದಿಗೂ ಒಂದಾಗಬಾರದು ಎಂದು ಬಯಸ್ತಿರೋ, ಸದಾ ಕುತಂತ್ರ ರೂಪಿಸುತ್ತಿರುವ ಅತ್ತೆ ಶಕುಂತಲಾ ದೇವಿ ಈಗ ಇಬ್ಬರನ್ನೂ ಹನಿಮೂನ್​ಗೆ ಕಳಿಸುವ ಪ್ಲ್ಯಾನ್​ ಮಾಡಿದ್ದಾಳೆ.   ಜಮೀನೊಂದರ ವಿವಾದಕ್ಕೆ ಸಂಬಂಧಿಸಿದಂತೆ ಕೆಲವರು ಬಂದು ಧಮ್ಕಿ ಹಾಕಿ ಹೋಗಿದ್ದಾರೆ. ಆ ಜಮೀನು ಇರುವುದು ಚಿಕ್ಕಮಗಳೂರಿನಲ್ಲಿ. ಆ ಜಮೀನಿನ ವಿವಾದದ ಬಗ್ಗೆ ಗೌತಮ್​ಗೆ ಯಾವುದೇ ಮಾಹಿತಿ ಇಲ್ಲ. ಇದನ್ನು ತಿಳಿಸದಂತೆ ಭೂಮಿಕಾಗೂ ಮನೆಯವರು ಹೇಳಿದ್ದಾರೆ. ಇದನ್ನೇ ದಾಳವಾಗಿಸಿಕೊಂಡ ಶಕುಂತಲಾ ಇಬ್ಬರನ್ನೂ ಹನಿಮೂನ್​ ನೆಪದಲ್ಲಿ ಚಿಕ್ಕಮಗಳೂರಿಗೆ ಕಳಿಸುವ ಪ್ಲ್ಯಾನ್​ ಮಾಡಿದ್ದಾಳೆ. ಅಲ್ಲಿ ಹೋದರೆ ಇಬ್ಬರ ಸಾವು ಖಂಡಿತ ಎನ್ನುವುದು ಆಕೆಯ ಪ್ಲ್ಯಾನ್​. 

ಮತ್ತೊಂದೆಡೆ,  ಗೌತಮ್​ ಮತ್ತು ಭೂಮಿಕಾ ಇಲ್ಲದ ವೇಳೆ ಏನೋ ಪ್ಲ್ಯಾನ್​ ಮಾಡಿದ್ದಾನೆ ಜೈದೇವ್​. ತನ್ನನ್ನು ಅಪಹರಿಸಿರುವಂತೆ ನಾಟಕವಾಡಿ, ಅದನ್ನು ಪತ್ನಿಯ ಮೊಬೈಲ್​ಗೆ ವಿಡಿಯೋ ಕಳಿಸಿದ್ದಾನೆ. ಇದನ್ನು ನೋಡಿ ಮಲ್ಲಿ ಗಾಬರಿಯಾಗಿದ್ದಾಳೆ. ಕೊನೆಗೆ ಜೈದೇವ್​ ಕಪಾಟಿನಲ್ಲಿ ಇಟ್ಟಿರೋ ಫೈಲ್​ ಒಂದನ್ನು ತಂದುಕೊಡುವಂತೆ  ಮಲ್ಲಿಗೆ ಹೇಳಿದ್ದಾರೆ. ಇದು ಮೋಸದಾಟ ಎಂದು ಅರಿಯದ ಮಲ್ಲಿ ಫೈಲ್​ ತೆಗೆದಿದ್ದಾಳೆ. ಅದೇ ವೇಳೆ ಭೂಮಿಕಾ ಹೇಳಿದಮಾತು ಅವಳಿಗೆ ನೆನಪಾಗಿದೆ. ಹನಿಮೂನ್​ಗೆ ಹೋಗುವ ಸಂದರ್ಭದಲ್ಲಿ ಭೂಮಿಕಾ ಮಲ್ಲಿಗೆ, ನೀನು ತುಂಬಾ ಎಚ್ಚರದಿಂದ ಇರು. ಏನೇ ಒಂದು ನಿರ್ಧಾರ ತೆಗೆದುಕೊಳ್ಳುವುದಿದ್ದರೂ ನನ್ನನ್ನು ಒಂದು ಮಾತು ಕೇಳು ಎಂದಿರುತ್ತಾಳೆ. ಅದು ನೆನಪಾಗಿದೆ.
ಮನೆ ಎರಡು ಭಾಗವಾಗಿದ್ಯಲ್ಲಾ... ಟಾಯ್ಲೆಟ್​ ಹೇಗೆ ಯೂಸ್​ ಮಾಡ್ತೀರಾ? ಸೃಜನ್​ ಪ್ರಶ್ನೆಗೆ ಭಾಗ್ಯ ಹೇಳಿದ್ದೇನು?

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಕಾಲುಂಗುರ ಧರಿಸಿದ ನಟಿ ರಜಿನಿ ಪತಿ…. ಪ್ರಶ್ನಿಸಿದವರಿಗೆ ಏನಂದ್ರು ನೋಡಿ
BBK 12: ಮದುವೆ ಮನೆಯಿಂದ ಗಿಲ್ಲಿ ನಟನನ್ನು ಆಚೆ ಹಾಕಿ, ರಸ್ತೆಗೆ ನೂಕಿದ್ರು: ಗೊತ್ತಿಲ್ಲದ ವಿಷಯ ಬಿಚ್ಚಿಟ್ಟ ತಾಯಿ