ನನ್ನಪ್ಪ ಗೋಲ್ಡ್ ಮೆಡಲಿಸ್ಟ್, ಬಿಟ್ಟು ಹೋದ ಅಪ್ಪನ ಬಗ್ಗೆ ಮೊದಲ ಬಾರಿ ಮಾತನಾಡಿದ ಅನುಶ್ರೀ

Published : May 15, 2024, 11:15 AM ISTUpdated : May 17, 2024, 06:15 PM IST
ನನ್ನಪ್ಪ ಗೋಲ್ಡ್ ಮೆಡಲಿಸ್ಟ್, ಬಿಟ್ಟು ಹೋದ ಅಪ್ಪನ ಬಗ್ಗೆ ಮೊದಲ ಬಾರಿ ಮಾತನಾಡಿದ ಅನುಶ್ರೀ

ಸಾರಾಂಶ

ನಾನು ಮಾತು ಜಾಸ್ತಿ ಆಡುವುದೆಂದರೆ ಅದು ನನ್ನ ಅಪ್ಪನಿಂದ ಬಂದ ಒಂದೇ ಒಂದೇ ಬಳುವಳಿ. ಅವರು ತುಂಬಾ ಮಾತನಾಡುತ್ತಿದ್ದರು ಎಂದು ನಿರೂಪಕಿ ಅನುಶ್ರೀ ಅಪ್ಪನ ಬಗ್ಗೆ ಹೇಳಿಕೊಂಡಿದ್ದಾರೆ.

ಕರಾವಳಿ ಬೆಡಗಿ ಪ್ರಸಿದ್ಧ ನಿರೂಪಕಿ ಅನುಶ್ರೀ ಅವರು ಮೊದಲ ಬಾರಿಗೆ ತುಳುವಿನಲ್ಲಿ ಸಂದರ್ಶನ ನೀಡಿದ್ದಾರೆ. ತುಳುವಿನ ಪಾಡ್‌ ಕಾಸ್ಟ್ ಚಿಲ್ಲಿಂಗ್ ವಿಥ್ ಚಿಲಿಂಬಿ ಕಾರ್ಯಕ್ರಮಕ್ಕೆ ಬಂದಿದ್ದು, ದಿ ಪವರ್ ಹೌಸ್‌ ವೈನ್ಸ್ ಯೂಟ್ಯೂಬ್‌ ನಲ್ಲಿ ಲಭ್ಯವಿದೆ.

ನೀವು ಮಾತು ಜಾಸ್ತಿ ಮಾತನಾಡುವುದು ಹೇಗೆ? ಎಲ್ಲಿ ನಿರೂಪಣೆ ಕಲಿತಿರಿ ಎಂದು ಸಂದರ್ಶಕ ಪ್ರಶ್ನೆ ಕೇಳಿದಾಗ ಉತ್ತರಿಸಿದ ಅನುಶ್ರೀ ನಾನು ಮಾತು ಜಾಸ್ತಿ ಆಡುವುದೆಂದರೆ ಅದು ನನ್ನ ಅಪ್ಪನಿಂದ ಬಂದ ಒಂದೇ ಒಂದೇ ಬಳುವಳಿ. ಅವರು ತುಂಬಾ ಮಾತನಾಡುತ್ತಿದ್ದರು. ಅವರು ಕೆಲಸ ಮಾಡಿಕೊಂಡಿದ್ದ ಕಂಪೆನಿಯಲ್ಲಿ ಮಾರ್ಕೆಟಿಂಗ್‌ ನಲ್ಲಿ ಅವರು ಗೋಲ್ಡ್ ಮೆಡಲಿಸ್ಟ್. ಮಾತು ನನಗೆ ನನ್ನ ತಂದೆಯಿಂದಲೇ ಬಂದಿದ್ದು.

ಕೋಟ್ಯಂತರ ಜನರ ಪ್ರಶ್ನೆಗೆ ಇಲ್ಲಿದೆ ಉತ್ತರ, ಮದುವೆಯಾಗಲು ನಿರ್ಧರಿಸಿದ ...

ಒಬ್ಬ ತಂದೆಯಾದವನು ಹಿರೋ ತರ ಇರಬೇಕು. ನಮ್ಮ ತಂದೆ ನಮಗೆ ಹಿರೋ ತರ ಇರಲಿಲ್ಲ. ನನ್ನ ಅಮ್ಮನ ಜೊತೆಗೆ ಒಳ್ಳೆಯ ಗಂಡನಂತೆ ಇದ್ರಾ ನನಗದು ಗೊತ್ತಿಲ್ಲ. ಅವರು ಮನೆಗೆ ಸರಿಯಾಗಿ ಬರುತ್ತಿರಲಿಲ್ಲ ಅವರ ಬ್ಯುಸಿನೆಸ್‌ , ಅವರ ಫ್ರೆಂಡ್ಸ್, ಅವರ ಸ್ಟಾಂಡರ್ಡ್‌ ಅದೇ ಜೀವನ ಆಗಿತ್ತು. ನಮ್ಮ ಜೀವನ,  ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸಿದ್ದೇ ಇಲ್ಲ. ಒಂದು ಸಮಯದಲ್ಲಿ ಅವರಿಗೆ ನಮ್ಮ ಜೊತೆಗೆ ಇರಲು ಇಷ್ಟ ಇರಲಿಲ್ಲ. ಅವರೇ ತೀರ್ಮಾನಿಸಿ ನಮ್ಮನ್ನು ಬಿಟ್ಟು ಹೋದರು. 25 ವರ್ಷಗಳ ಹಿಂದೆ ನಮ್ಮನ್ನು ಬಿಟ್ಟು ಹೋದರು. 25 ವರ್ಷ ಅವರಿಲ್ಲದೆ ನಾವು ಬೆಳೆದಿದ್ದು.

ಅಪ್ಪ ಇಲ್ಲದೆ ಬದುಕೋದು ಮೊದಲಿಗೆ ನಮಗೆ ಕಷ್ಟವಾಯ್ತು. ಸಮಾಜ ನೋಡುವ ರೀತಿ ಬದಲಾಯ್ತು. ಅಪ್ಪ ಇಲ್ಲದ ಹೆಣ್ಣು ಮಗುವನ್ನು ಸಮಾಜ ನೋಡವ ರೀತಿಯೇ ಬೇರೆ. ಅಪ್ಪ ಇಲ್ಲದ ಹೆಣ್ಣು ಮಗು  ಸಂಜೆ 7 ಗಂಟೆ ಮೇಲೆ ಮನೆಗೆ ಬಂದರೆ ನೋಡುವ ರೀತಿಯೇ ಬೇರೆ. ಅಪ್ಪ ಇಲ್ಲದ ಮಕ್ಕಳು ಟಿಲಿವಿಷನ್‌ ಇಂಡಸ್ಟ್ರಿಗೆ ಹೋದರೆ ನೋಡುವ ರೀತಿಯೇ ಬೇರೆ. ಅಪ್ಪ ಇಲ್ಲದ ಹೆಣ್ಣು ಮಕ್ಕಳು ಜೀವನದಲ್ಲಿ ಸಾಧಿಸಿದರೆ ನೋಡುವ ರೀತಿಯೇ ಬೇರೆ. ಅಪ್ಪ ಇಲ್ಲದ ಮಗಳು ಮನೆ ಖರೀದಿ ಮಾಡಿದರೆ ನೊಡುವ ರೀತಿಯೇ ಬೇರೆ. ಅದೇ ಒಂದು ಹುಡುಗ ತೆಗೆದರೆ ಅದು ಇತರರಿಗೆ ಮಾದರಿ ಎನ್ನುತ್ತಾರೆ. ಒಂದು ಹುಡುಗಿ ತೆಗೆದರೆ ಅದಕ್ಕೆ ಬೇರೆಯೇ ಹೆಸರು ನೀಡುತ್ತಾರೆ. ನಾನು ಇದೆಲ್ಲವನ್ನೂ ಅನುಭವಿಸಿದ್ದೇನೆ.

ಚಿನ್ನದ ಕರಿಮಣಿ ಇಲ್ಲವೆಂದು ಯಾವ ಸಮಾರಂಭಕ್ಕೂ ಅಮ್ಮನನ್ನ ಕರೆಯುತ್ತಿರಲ ...

ನನಗೆ ಮಾತಿನ ಮಹತ್ವ ತುಂಬಾ ಲೇಟ್‌ ಆಗಿ ತಿಳಿದಿದ್ದು, ಬೆಂಗಳೂರಿಗೆ ಹೋದ ನಂತರ ಹಣ ಸಿಗುತ್ತದೆ ಕೆಲಸ ಮಾಡಬೇಕು ಅಂದುಕೊಂಡಿದ್ದೆ. ಆಗ ನನಗೆ ಒಂದು ದಿನಕ್ಕೆ 250 ರೂ ವೇತನ ಇತ್ತು. ತಿಂಗಳ ಕೊನೆಗೆ 1500 ರೂ ಬಂದರೆ ಅದು ದೊಡ್ಡ ವಿಷಯವೇ ಆಗಿತ್ತು. ನನ್ನ ಹಾಸ್ಟೆಲ್‌ ಫೀಸ್‌ 2000 ರೂ ಆಗಿತ್ತು. ಹೀಗಾಗಿ ಅದು ಮ್ಯಾಚ್‌ ಆಗುತ್ತಿರಲಿಲ್ಲ. ಬೆಂಗಳೂರಲ್ಲಿ ಆಗ ಎಂಸಿ ರೀನಾ ತುಂಬಾ ಫೇಮಸ್‌ ಆಗಿದ್ದರು ಅವರ ಜೊತೆಗೆ ನಾನು ಸಹಾಯಕಿ ಆಗಿ ಹೊಗುತ್ತಿದ್ದೆ. ಬಳಿಕ ಅವರು ನನಗೆ ನೀನೆ ಮಾಡು ಎಂದು ಹೇಳುತ್ತಿದ್ದರು.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
Bigg Boss: ನಂಗೆ ಮದ್ವೆಯಾದ್ಮೇಲೆ ಮಕ್ಕಳಾಗತ್ತಲ್ವಾ ಎಂದ ರಕ್ಷಿತಾ ಶೆಟ್ಟಿ, ಸೂರಜ್​ ಬಳಿ ಇಂಥ ಪ್ರಶ್ನೆ ಕೇಳೋದಾ?