
ತೆರೆಯ ಮೇಲೆ ಒಂದು ದೃಶ್ಯವನ್ನು ತೋರಿಸುವಾಗ ಅದರ ಹಿಂದೆ ನಟ-ನಟಿಯರು ಎಷ್ಟೆಲ್ಲಾ ಸರ್ಕಸ್ ಮಾಡಿರುತ್ತಾರೆ. ಎಷ್ಟೋ ಸಂದರ್ಭದಲ್ಲಿ ಜೀವಕ್ಕೆ ಅಪಾಯ ತಂದುಕೊಂಡಿರುವ ಉದಾಹರಣೆಗಳೂ ಸಾಕಷ್ಟು ಇವೆ. ಅದರಲ್ಲಿಯೂ ಆ್ಯಕ್ಷನ್ ದೃಶ್ಯಗಳನ್ನು ಮಾಡುವಾಗ ನಟ-ನಟಿಯರಿಗೆ ಗಂಭೀರ ಸ್ವರೂಪದ ಗಾಯಗಳಾಗುವ ಸುದ್ದಿಗಳೂ ಆಗ್ಗಾಗ್ಗೆ ಬರುತ್ತಲೇ ಇರುತ್ತವೆ. ಆದರೆ ಒಂದು ಚಿತ್ರ ಯಶಸ್ಸು ಆಗಬೇಕಾದರೆ ನಟರು ಇವೆಲ್ಲಾ ಮಾಡುವುದು ಅನಿವಾರ್ಯವೇ. ಇಷ್ಟು ಮಾಡಿದ ಮೇಲೂ ಚಿತ್ರ ಯಶಸ್ವಿ ಆಗಿಯೇ ಆಗುತ್ತದೆ ಎಂದೂ ಹೇಳುವುದು ಕಷ್ಟ. ಇದು ಸಿನಿಮಾದ ಮಾತಾದರೆ, ಇಂದು ಸೀರಿಯಲ್ಗಳೂ ಯಾವ ಸಿನಿಮಾಕ್ಕೂ ಕಮ್ಮಿ ಏನಿಲ್ಲ. ಸಿನಿಮಾಗಳ ಮಾದರಿಯಲ್ಲಿಯೇ ದೃಶ್ಯಗಳ ಶೂಟಿಂಗ್ ನಡೆಯುತ್ತದೆ.
ಒಂದು ಸಿನಿಮಾ ಅಥವಾ ಸೀರಿಯಲ್ ಎಷ್ಟರಮಟ್ಟಿಗೆ ಸಕ್ಸಸ್ ಆಗುತ್ತದೆಯೆಂದು ಹೇಳುವುದು ಕಷ್ಟ. ಹಾಗೆಂದು ಯಾವುದೇ ನಿರ್ದೇಶಕರು ತಮ್ಮ ಸರ್ವ ಪ್ರಯತ್ನವನ್ನೂ ಮಾಡಲೇಬೇಕು. ಅದಕ್ಕಾಗಿಯೇ ವೀಕ್ಷಕರಿಗೆ ಇಷ್ಟವಾಗುವಂಥ ಹೊಸ ಹೊಸ ರೋಚಕತನವನ್ನು ತೋರಿಸಲಾಗುತ್ತದೆ. ವೀಕ್ಷಕರಿಗೆ ರೋಚಕತೆ ಮುಂದಿಡಲು ಇಂಥ ಕೆಲವು ಕಠಿಣ ದೃಶ್ಯಗಳಿಗೆ ನಟ-ನಟಿಯರು ಒಗ್ಗಿಕೊಳ್ಳಲೇಬೇಕು. ಅವರಿಗೆ ಈ ರೀತಿಯ ಶೂಟಿಂಗ್ ಮಾಡುವಾಗ ಎಲ್ಲ ರೀತಿಯ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆಯಾದರೂ ಇಂಥ ಆ್ಯಕ್ಷನ್ ಶೂಟಿಂಗ್ ಮಾಡುವುದು ಸುಲಭದ ಮಾತಲ್ಲ ಎನ್ನುವುದೂ ಅಷ್ಟೇ ದಿಟ.
ಮದ್ವೆ ಸೀನ್ ಮಾಡಲ್ಲ ಎಂದು ಭಾಗ್ಯಲಕ್ಷ್ಮಿ ಶೂಟಿಂಗ್ ಸೆಟ್ನಲ್ಲೇ ಶ್ರೇಷ್ಠಾ ಕಣ್ಣೀರು! ಅಷ್ಟಕ್ಕೂ ಆಗಿದ್ದೇನು?
ಕೆಲವೊಂದು ಸೀನ್ಗಳನ್ನು ಬಹಳ ಶ್ರಮ ಪಟ್ಟು ತೆಗೆದರೆ, ಮತ್ತೆ ಕೆಲವನ್ನು ಇರುವಲ್ಲಿಯೇ ಸನ್ನಿವೇಶ ಕ್ರಿಯೇಟ್ ಮಾಡಿ ಶೂಟ್ ಮಾಡಲಾಗುತ್ತದೆ. ಅಂಥದ್ದೇ ಒಂದು ದೃಶ್ಯ ಬೆಟ್ಟದ ತುದಿಯ ಮೇಲಿನದ್ದು. ಹಲವು ಸೀರಿಯಲ್ಗಳಲ್ಲಿ ನಟನೋ, ನಟಿಯೋ ಅಥವಾ ಇನ್ನಾರೋ ಬೆಟ್ಟದ ತುದಿಗೆ ಹೋಗಿ ಮೇಲಿನಿಂದ ಕೆಳಕ್ಕೆ ನೋಡುವ ದೃಶ್ಯ ನೋಡಿದರೆ ವೀಕ್ಷಕರ ಮೈ ಝುಂ ಎನ್ನುತ್ತದೆ. ಅಬ್ಬಬ್ಬಾ ಅವರಿಗೆ ತಲೆ ತಿರುಗಿ ಬಿಟ್ಟರೆ ಗತಿಯೇನು ಎನ್ನಿಸುವುದು ಉಂಟು. ಒಂದು ಶೂಟಿಂಗ್ಗೆ ಅಷ್ಟೆಲ್ಲಾ ಶ್ರಮ ಪಡುತ್ತಾರಾ ಎಂದೂ ಅನ್ನಿಸುವುದು ಉಂಟು. ಆದರೆ ಅಸಲಿಗೆ ಎಲ್ಲಾ ಸಂದರ್ಭದಲ್ಲಿ ಬೆಟ್ಟ- ಗುಡ್ಡವನ್ನು ಹುಡುಕಿಯೇ ಶೂಟಿಂಗ್ ಮಾಡುವುದಿಲ್ಲ.
ಬದಲಿಗೆ ನಟರಿಗೆ ಎತ್ತರ ಪ್ರದೇಶದಲ್ಲಿ ನಿಲ್ಲಿಸಿ ಕೆಳಗೆ ಬೆಟ್ಟದ ತುದಿಯಲ್ಲಿ ನಿಂತಾಗ ನೋಡುವಂತೆ ಹೇಳಲಾಗುತ್ತದೆ. ಶೂಟಿಂಗ್ ಮಾಡುವ ಮನೆಗಳಲ್ಲಿಯೇ ಬೇಕಿದ್ದರೆ ಈ ದೃಶ್ಯವನ್ನು ಕ್ರಿಯೇಟ್ ಮಾಡಲಾಗುತ್ತದೆ. ಬೆಟ್ಟದ ತುದಿಯಲ್ಲಿ ಇರುವಂತೆ ಭಾಸವಾಗುವ ರೀತಿಯಲ್ಲಿ ನಟರು ಆ್ಯಕ್ಟ್ ಮಾಡಬೇಕು ಅಷ್ಟೇ. ಬಳಿಕ ಗ್ರೀನ್ ಅಥವಾ ಬ್ಲೂ ಸ್ಕ್ರೀನ್ ತಂತ್ರವನ್ನು ಬಳಸಿ ಅದನ್ನು ಬೆಟ್ಟಕ್ಕೆ ಜೋಡಿಸಿ, ನಟರು ಬೆಟ್ಟದ ಮೇಲೆ ಇರುವಂಥ ದೃಶ್ಯವನ್ನು ಕ್ರಿಯೇಟ್ ಮಾಡಲಾಗುತ್ತದೆ. ಧಾರಾವಾಹಿಯೊಂದರ ಈ ದೃಶ್ಯವನ್ನು ಡಿವಿ ಡ್ರೀಮ್ಸ್ ಯೂಟ್ಯೂಬ್ ಚಾನೆಲ್ ಶೇರ್ ಮಾಡಿಕೊಂಡಿದ್ದು, ಅದೀಗ ವೈರಲ್ ಆಗಿದೆ. ಅದರ ವಿಡಿಯೋ ಈ ಕೆಳಗಿದೆ.
ಗಂಡನ ಕೈಗೆ ತಾಳಿ ಇಟ್ಟು, ಪತಿಯನ್ನು ಲವರ್ಗೆ ಬಿಟ್ಟುಕೊಟ್ಟು ಕುಂಭಮೇಳಕ್ಕೆ ಹೊರಟ ಭಾಗ್ಯ: ನಟಿ ಹೇಳಿದ್ದೇನು ಕೇಳಿ..
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.