'ಭಾರ್ಗವಿ ಎಲ್​ಎಲ್​ಬಿ' ನಟಿ ರಾಧಾ ಲೈಫ್​ನಲ್ಲಿ ಲವ್​ ಬ್ರೇಕಪ್​! ಈಗಿರೋ ಆ ವ್ಯಕ್ತಿ ಯಾರು? ಏನಂದ್ರು ಕೇಳಿ...

Published : Mar 23, 2025, 04:05 PM ISTUpdated : Mar 23, 2025, 05:43 PM IST
 'ಭಾರ್ಗವಿ ಎಲ್​ಎಲ್​ಬಿ' ನಟಿ ರಾಧಾ ಲೈಫ್​ನಲ್ಲಿ ಲವ್​ ಬ್ರೇಕಪ್​! ಈಗಿರೋ ಆ ವ್ಯಕ್ತಿ ಯಾರು? ಏನಂದ್ರು ಕೇಳಿ...

ಸಾರಾಂಶ

ನಟಿ ರಾಧಾ ಭಗವತಿ 'ಅಮೃತಧಾರೆ' ಧಾರಾವಾಹಿಯಿಂದ 'ಭಾರ್ಗವಿ ಎಲ್​ಎಲ್​ಬಿ' ಸೀರಿಯಲ್‌ನಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಬ್ರೇಕಪ್ ಆಗಿದ್ದು, ಅದರಿಂದ ಪಾಠ ಕಲಿತಿದ್ದಾಗಿ ಹೇಳಿದ್ದಾರೆ. ಆರಂಭದಲ್ಲಿ 750 ರೂಪಾಯಿ ಸಂಭಾವನೆ ಪಡೆಯುತ್ತಿದ್ದ ರಾಧಾ, 'ರಾಮಾಚಾರಿ' ಧಾರಾವಾಹಿಯಲ್ಲಿ ನಟಿಸಿದ್ದರು. 'ವಸಂತಕಾಲದ ಹೂವುಗಳು' ಚಿತ್ರದ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದರು. ಇವರ ಕುಟುಂಬ ಕಲಾ ಹಿನ್ನೆಲೆ ಹೊಂದಿದ್ದು, ರಾಧಾ ಹಿನ್ನೆಲೆ ಗಾಯಕಿಯಾಗಿಯೂ ಗುರುತಿಸಿಕೊಂಡಿದ್ದಾರೆ.

ಅಕ್ಕವ್ರೇ ಅಕ್ಕವ್ರೇ ಎಂದು ಅಮೃತಧಾರೆಯ ಭೂಮಿಕಾ ಹಿಂದೆ ಮುಂದೆ ಓಡಾಡ್ತಿದ್ದ ಮಲ್ಲಿ ಈಗ ಲಾಯರ್​ ಆಗಿಬಿಟ್ಟಿದ್ದಾಳೆ. ಭಾರ್ಗವಿ ಎಲ್​ಎಲ್​ಬಿ ಸೀರಿಯಲ್​ನಲ್ಲಿ ನಾಯಕಿಯಾಗಿ ಅಲ್ಲಿಯ ಮಲ್ಲಿ ಮಿಂಚುತ್ತಿದ್ದಾಳೆ. ಅಮೃತಧಾರೆ ಮಲ್ಲಿಯಾಗಿ ಬೇರೆ ನಟಿಯ ಎಂಟ್ರಿಯಾಗಿದೆ. ಅಲ್ಲಿ ಮಲ್ಲಿಯಾಗಿ, ಇಲ್ಲಿ ಭಾರ್ಗವಿಯಲ್ಲಿ ಎರಡೂ ವಿಭಿನ್ನ, ತದ್ವಿರುದ್ಧ ಕ್ಯಾರೆಕ್ಟರ್​ನಲ್ಲಿ ನಟಿಸಿ ಎರಡರಲ್ಲಿಯೂ ಸೈ ಎನ್ನಿಸಿಕೊಂಡಿರುವ ನಟಿ ರಾಧಾ ಭಗವತಿ. ಇದಾಗಲೇ ಭಾರ್ಗವಿ ಸೀರಿಯಲ್​ ಮೂಲಕ, ಹೊಸ ಹವಾ ಸೃಷ್ಟಿಸಿದ್ದಾರೆ ನಟಿ. ಇದಾಗಲೇ ಇವರ ನಟನೆಯ ಅಪಾಯವಿದೆ ಎಚ್ಚರಿಕೆ ಸಿನಿಮಾ ಕೂಡ ರಿಲೀಸ್​ ಆಗಿದೆ. 

ಇದೀಗ ನಟಿ, ತಮ್ಮ ಬದುಕಿನ ಕೆಲವೊಂದು ವಿಷಯಗಳನ್ನು ಶೇರ್​  ಮಾಡಿಕೊಂಡಿದ್ದಾರೆ. ಮಿಸ್ಟರ್​ ಡಿ.ಪಿಕ್ಚರ್ಸ್​ ಯೂಟ್ಯೂಬ್​ ಚಾನೆಲ್​  ಜೊತೆ ಮಾತನಾಡಿದ ನಟಿ, ತಮಗೆ ಲವ್​ ಬ್ರೇಕಪ್​ ಆಗಿರುವ ಬಗ್ಗೆ ಹೇಳಿಕೊಂಡಿದ್ದಾರೆ. ಲವ್ ಬ್ರೇಕಪ್​ ಆಗಿದ್ದು ನಿಜ, ಆದರೆ ಅದರಿಂದ ತುಂಬಾ ಪಾಠ ಕಲಿತಿದ್ದೇನೆ ಎಂದಿದ್ದಾರೆ. ಅದೇ ವೇಳೆ, ಈಗ ಸಿಂಗಲ್ಲಾ ಎನ್ನುವ ಪ್ರಶ್ನೆಗೆ, ನಟಿ ಅದರ ಬಗ್ಗೆ ನಾನು ಹೇಳಲ್ಲ ಎನ್ನುವ ಮೂಲಕ ತಮ್ಮ ಬಾಳಿನಲ್ಲಿ ಯಾರದ್ದೋ ಎಂಟ್ರಿ ಆಗಿದೆ ಎಂದು ಸೂಚ್ಯವಾಗಿ ತಿಳಿಸಿದ್ದಾರೆ. ಇನ್ನು ಭಾರ್ಗವಿ ರೋಲ್ ಬಗ್ಗೆ ಹೇಳಿರುವ ರಾಧಾ ಅವರು, ಯಾರಿಗೂ ಹಿಂಜರಿಯದ ಹೆಣ್ಣು, ಏನೇ ಆದ್ರೂ ಫೇಸ್​  ಮಾಡುವವಳು ಎಂದಿದ್ದಾರೆ.  ಇದೇ ವೇಳೆ ಸಂಭಾವನೆ ಬಗ್ಗೆ ಕೇಳಿದ ಪ್ರಶ್ನೆಗೆ ನಟಿ ಆರಂಭದಲ್ಲಿ 750 ರೂಪಾಯಿ ಸಂಭಾವನೆ ಇತ್ತು, ಆದರೆ ಈಗಿಂದು ಹೇಳಲ್ಲ ಎಂದಿದ್ದಾರೆ. 

ಅಬ್ಬಾ! 'ಲಕ್ಷ್ಮೀ ಬಾರಮ್ಮ' ಕೀರ್ತಿಯ ಅದ್ಭುತ ನೃತ್ಯಕ್ಕೆ ಬೆರಗಾದ ಫ್ಯಾನ್ಸ್​: ಬಿಗ್​ಬಾಸ್​​ ಕಿಶನ್​ ಜೊತೆ ಮೋಡಿ!

ಅಂದಹಾಗೆ ರಾಧಾ ಭಗವತಿ ಅವರು, ರಾಮ್​ಜಿ ನಿರ್ದೇಶನದ ‘ರಾಮಾಚಾರಿ’ ಧಾರಾವಾಹಿಯಲ್ಲಿ ಸಹೋದರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಕಿರುತೆರೆಯಿಂದ ಕಳೆದ ವರ್ಷ ರಿಲೀಸ್​ ಆದ ವಸಂತಕಾಲದ ಹೂವುಗಳು ಚಿತ್ರದಲ್ಲಿ ಇವರು ಅಭಿನಯಿಸುವ ಮೂಲಕ ಬೆಳ್ಳಿಪರದೆಗೆ ಎಂಟ್ರಿ ಕೊಟ್ಟರು. ವಿಜಯಪುರದ ರಾಧಾ ಅವರು, ಈ ಚಿತ್ರದಲ್ಲಿ  ಸುಮಾ ಹೆಸರಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.  ಇದಾದ ಬಳಿಕ ಈಗ ಮತ್ತೆ ಕಿರುತೆರೆಗೆ ಪ್ರವೇಶ ಪಡೆದು ಅಮೃತಧಾರೆಯಲ್ಲಿ ನಟಿಸಿದರು.  ಮಾಡೆಲ್ ಕೂಡ ಆಗಿರುವ ಇವರಿಗೆ  ಚಿತ್ರರಂಗದಲ್ಲಿ   ದೊಡ್ಡ ಹೆಸರು ಮಾಡುವ ಆಸೆ ಎಂದಿದ್ದಾರೆ. ಎಂಥ ಪಾತ್ರ ಕೊಟ್ಟರೂ ಸಲೀಸಾಗಿ ಮಾಡುವ ಇವರಿಗೆ ಉಜ್ವಲ ಭವಿಷ್ಯವಿದೆ ಎನ್ನುವುದು ಸಿನಿ ಪ್ರಿಯರ ಅಭಿಮತ. ಅಂದಹಾಗೆ, ರಾಧಾ ಅವರು ನಟಿ ರಾಧಾ ಭಗವತಿ ಅವರು ‘ಆ 90 ದಿನಗಳು’, ‘ವಸಂತ ಕಾಲದ ಹೂಗಳು’, ‘ಅಪಾಯವಿದೆ ಎಚ್ಚರಿಕೆ’ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ‘ಉಘೇ ಉಘೇ ಮಾದೇಶ್ವರ’ ಧಾರಾವಾಹಿಯಲ್ಲಿಯೂ ನಟಿಸಿದ್ದರು. ಇನ್ನು ‘ಬಾನಿಗೊಂದು ತಾರೆ’ ಮ್ಯೂಸಿಕ್ ವಿಡಿಯೋದಲ್ಲಿಯೂ ಅವರು ಕಾಣಿಸಿಕೊಂಡಿದ್ದಾರೆ. ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದ 'ಅಪಾಯವಿದೆ ಎಚ್ಚರಿಕೆ' ಸಿನಿಮಾದಲ್ಲಿ ನಟಿಸಿದ್ದಾರೆ.  ಇದರ ಜೊತೆಗೆ ಎಸ್. ನಾರಾಯಣ್ ನಿರ್ದೇಶನದ 'ಒಂದ್ಸಲ ಮೀಟ್ ಮಾಡೋಣ' ಸಿನಿಮಾದಲ್ಲಿ ನಾಯಕನ ತಂಗಿಯಾಗಿ ನಟಿಸುತ್ತಿದ್ದಾರೆ. ಸದ್ಯ ಒಂದಾದ ಮೇಲೆ ಒಂದರಂತೆ ಅವಕಾಶಗಳನ್ನು ಪಡೆಯುತ್ತಿದ್ದಾರೆ. 

ರಾಧಾ ಅವರ ಕುಟುಂಬದವೇ ಕಲಾವಿದರ ಕುಟುಂಬ. ಇವರ ಅಜ್ಜ  ರಂಗಭೂಮಿ ಕಲಾವಿದರು. ಇದರ ಜೊತೆಗೆ ಸವರು ಹರಿಕಥೆ ದಾಸರೂ ಕೂಡಾ ಆಗಿದ್ದರು. ರಾಧಾ ಅವರ ತಾಯಿಯೂ  ಜನಪದ ಗೀತೆಗಳಿಗೆ ದನಿಯಾದವರು.  ಮನೆಯಲ್ಲಿ ಕಲೆಯ ವಾತಾವರಣವಿದ್ದ ಕಾರಣದಿಂದಲೋ ಏನೋ ರಾಧಾ ಭಗವತಿ ಅವರಿಗೆ ನಟನೆಯತ್ತ ಎಳೆ ವಯಸ್ಸಿನಲ್ಲಿಯೇ ಆಸಕ್ತಿ ಮೂಡಿದೆ. ಕಿರುತೆರೆ, ಹಿರಿತೆರೆ, ಮ್ಯೂಸಿಕ್ ಆಲ್ಬಂ ಮಾತ್ರವಲ್ಲದೇ ರಾಧಾ ಅವರು, ಹಿನ್ನೆಲೆ ಗಾಯಕಿಯೂ ಹೌದು. ಈಗಾಗಲೇ ಎರಡು ಸಿನಿಮಾಗಳಲ್ಲಿ ಹಾಡಿರುವ ಈಕೆ ಕಂಠದಾನಕ್ಕೂ ಸೈ. 'ಮದುಮಗಳು' ಧಾರಾವಾಹಿಯಲ್ಲಿನ ನಾಯಕಿಯ ಪಾತ್ರಕ್ಕೆ ಕಂಠದಾನ ಮಾಡುತ್ತಿರುವ ರಾಧಾ ಅವರಿಗೆ ಕಲೆ ಎಂಬುದು ರಕ್ತಗತವಾಗಿಯೇ ಒಲಿದು ಬಂದಿದೆ.

ಮತ್ತೆ ಬದಲಾದಳು ಸ್ನೇಹಾ; ಬಂದಳು ರಾಮಾಚಾರಿ ರುಕ್ಕು! ಕಂಠಿ ಗತಿ ನೆನೆಸಿಕೊಂಡು ಕಣ್ಣೀರಿಡ್ತೋ ಫ್ಯಾನ್ಸ್​

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

Namratha Gowda ಪ್ರೀತಿಯಲ್ಲಿದ್ದಾರಾ? ಆ ಕಪ್ಪು ಬ್ಯಾಂಡ್‌ ಕೊಟ್ಟ ಸುಳಿವಿನ ಬಗ್ಗೆ Karthik Mahesh ಏನಂದ್ರು?
BBK 12: ಕಿಚ್ಚ ಸುದೀಪ್‌ ಮುಂದೆ ರೇಷ್ಮೆ ಶಾಲಿನಲ್ಲಿ ಹೊಡೆದಂತೆ ಸತ್ಯದರ್ಶನ ಮಾಡಿಸಿದ ಗಿಲ್ಲಿ ನಟ