ಹನಿಮೂನ್ ಸಡಗರದಲ್ಲಿ ಗೌತಮ್​- ಭೂಮಿಕಾ: ಪತ್ನಿಗೆ ಭರ್ಜರಿ ಗಿಫ್ಟ್​- ಆತಂಕದಲ್ಲಿ ಫ್ಯಾನ್ಸ್​

Published : May 15, 2024, 11:57 AM IST
 ಹನಿಮೂನ್ ಸಡಗರದಲ್ಲಿ  ಗೌತಮ್​- ಭೂಮಿಕಾ: ಪತ್ನಿಗೆ ಭರ್ಜರಿ ಗಿಫ್ಟ್​-  ಆತಂಕದಲ್ಲಿ ಫ್ಯಾನ್ಸ್​

ಸಾರಾಂಶ

ಭೂಮಿಕಾ ಮತ್ತು ಗೌತಮ್​ ಹನಿಮೂನ್​ಗೆ ಹೊರಟಿದ್ದಾರೆ. ಪತ್ನಿಗೆ ಗೌತಮ್​ ಭರ್ಜರಿ ಗಿಫ್ಟ್​ ಕೂಡ ಕೊಡಲಿದ್ದಾನೆ. ಆದರೂ ಆತಂಕದಲ್ಲಿ ಫ್ಯಾನ್ಸ್​. ಕಾರಣವೇನು?  

ಜಗಳವಾಡುತ್ತಲೇ ಮದುವೆಯಾಗಿ, ಇದೀಗ ಒಬ್ಬರನ್ನೊಬ್ಬರು ಸಕತ್​ ಲವ್​ ಮಾಡ್ತಿರೋ ಜೋಡಿ ಎಂದರೆ ಅದು ಅಮೃತಧಾರೆಯ ಗೌತಮ್​  ಮತ್ತು ಭೂಮಿಕಾ ಜೋಡಿ. ಸದಾ ಕಿತ್ತಾಡುತ್ತಲೇ ಇದ್ದ ಈ ದಂಪತಿ ಈಗ ಒಬ್ಬರನ್ನೊಬ್ಬರು ಬಿಟ್ಟಿರಲಾರದಷ್ಟು ಅನ್ಯೋನ್ಯವಾಗಿದ್ದಾರೆ. ಇದುವರೆಗೂ ಪರಸ್ಪರ ಪ್ರೀತಿಯ ವಿಷಯವನ್ನು ಹಂಚಿಕೊಳ್ಳದಿದ್ದರೂ, ನೇರವಾಗಿ ನಾನು ನಿನ್ನನ್ನು ಪ್ರೀತಿಸುತ್ತಿದ್ದೇನೆ ಎಂದು ಹೇಳದಿದ್ದರೂ, ಇವರ ಪ್ರೀತಿಗೆ ಇವರೇ ಸಾಟಿ. ಇದೀಗ ಈ ಜೋಡಿ ಹನಿಮೂನ್​ಗೆ ಹೋಗಲು ರೆಡಿಯಾಗಿದೆ. ನಾಚಿಕೊಳ್ಳುತ್ತಲೇ ಮಧುಚಂದ್ರಕ್ಕೆ ಹೋಗಲು ರೆಡಿಯಾಗಿದ್ದಾರೆ. ಇದೇ ವೇಳೆ ಮದುವೆಯಾಗಿ ಇಷ್ಟು ದಿನವಾದರೂ, ಭೂಮಿಕಾರಿಗೆ ತಾನು ಏನೂ ಗಿಫ್ಟ್​ ಕೊಟ್ಟಿಲ್ಲ ಎಂದು ಅಜ್ಜಿಯ ಬಳಿ ಹೇಳಿಕೊಂಡ ಗೌತಮ್​, ಚಿಕ್ಕಮಗಳೂರಿನಲ್ಲಿರುವ ಎಸ್ಟೇಟ್​ ಅನ್ನು ಭೂಮಿಕಾ ಹೆಸರಿಗೆ ಬರೆದು ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಅಜ್ಜಿ ಕೂಡ ಒಪ್ಪಿಕೊಂಡಿದ್ದಾಳೆ. ಇದನ್ನು ಶಕುಂತಲಾ ದೇವಿಯ ತಮ್ಮ ಕೇಳಿಸಿಕೊಂಡಿದ್ದಾನೆ. ಅಷ್ಟಕ್ಕೂ ಈ ಎಸ್ಟೇಟ್​  ಮೇಲೆ ಶಕುಂತಲಾಳ ಕಣ್ಣೂ ಇದೆ. 

 ಜೀಪ್​ನಲ್ಲಿ ಜೋಡಿ ಚಿಕ್ಕಮಗಳೂರಿಗೆ ಹೊರಟಿದೆ. ಹೋಗುತ್ತಿರುವುದು ಹನಿಮೂನ್​ಗಾದ್ರೂ ಅಭಿಮಾನಿಗಳಿಗೆ ಆತಂಕ ಶುರುವಾಗಿದೆ. ಇದಕ್ಕೆ ಕಾರಣ, ಗೌತಮ್​ ಚಿಕ್ಕಮ್ಮ ಈ ಜೋಡಿಯ ಕೊಲೆ ಮಾಡಿಸುವ ಪ್ಲ್ಯಾನ್​ ಮಾಡಿದ್ದಾಳೆ. ಮಗ ಗೌತಮ್​ ಮತ್ತು ಸೊಸೆ ಭೂಮಿಕಾ ಎಂದಿಗೂ ಒಂದಾಗಬಾರದು ಎಂದು ಬಯಸ್ತಿರೋ, ಸದಾ ಕುತಂತ್ರ ರೂಪಿಸುತ್ತಿರುವ ಅತ್ತೆ ಶಕುಂತಲಾ ದೇವಿ ಈಗ ಇಬ್ಬರನ್ನೂ ಹನಿಮೂನ್​ಗೆ ಕಳಿಸುವ ಪ್ಲ್ಯಾನ್​ ಮಾಡಿದ್ದಾಳೆ.   ಜಮೀನೊಂದರ ವಿವಾದಕ್ಕೆ ಸಂಬಂಧಿಸಿದಂತೆ ಕೆಲವರು ಬಂದು ಧಮ್ಕಿ ಹಾಕಿ ಹೋಗಿದ್ದಾರೆ. ಆ ಜಮೀನು ಇರುವುದು ಚಿಕ್ಕಮಗಳೂರಿನಲ್ಲಿ. ಆ ಜಮೀನಿನ ವಿವಾದದ ಬಗ್ಗೆ ಗೌತಮ್​ಗೆ ಯಾವುದೇ ಮಾಹಿತಿ ಇಲ್ಲ. ಇದನ್ನು ತಿಳಿಸದಂತೆ ಭೂಮಿಕಾಗೂ ಮನೆಯವರು ಹೇಳಿದ್ದಾರೆ. ಇದನ್ನೇ ದಾಳವಾಗಿಸಿಕೊಂಡ ಶಕುಂತಲಾ ಇಬ್ಬರನ್ನೂ ಹನಿಮೂನ್​ ನೆಪದಲ್ಲಿ ಚಿಕ್ಕಮಗಳೂರಿಗೆ ಕಳಿಸುವ ಪ್ಲ್ಯಾನ್​ ಮಾಡಿದ್ದಾಳೆ. ಅಲ್ಲಿ ಹೋದರೆ ಇಬ್ಬರ ಸಾವು ಖಂಡಿತ ಎನ್ನುವುದು ಆಕೆಯ ಪ್ಲ್ಯಾನ್​. 

ಎಲ್ಲೋ ಕೂಗಿದ್ರೆ ಕೇಳ್ಸತ್ತೆ, ಮಗಳಲ್ಲ ಅಂತ ಗೊತ್ತಾಗಿಲ್ವಾ? ಸಹನಾಗೆ ಸೀರೆ ಎಲ್ಲಿಂದ ಬರ್ತಿವೆ? ಪ್ರಶ್ನೆಗಳ ಸುರಿಮಳೆ...

ಆದ್ದರಿಂದ ಅಭಿಮಾನಿಗಳು ಆತಂಕಗೊಂಡಿದ್ದಾರೆ.  ನಿಜಕ್ಕೂ ಅವಳ ಪ್ಲ್ಯಾನ್​ ಸಕ್ಸಸ್​ ಆಗುತ್ತಾ? ಅಥವಾ ಪ್ರತಿ ಬಾರಿಯಂತೆ ಹೀಗೆಲ್ಲಾ ಪ್ಲ್ಯಾನ್​ ಮಾಡಿದಾಗ ದಂಪತಿ ಹತ್ತಿರ ಆಗುವಂತೆ ಈ ಬಾರಿಯೂ ಆಗುತ್ತಾ ಎನ್ನುವುದು ಈಗಿರುವ ಪ್ರಶ್ನೆ. ಅಷ್ಟಕ್ಕೂ ಗೌತಮ್​ ಮೊದಲು ಪ್ರೀತಿ ಬಗ್ಗೆ ಹೇಳಲಿ ಎಂದು ಭೂಮಿಕಾ, ಭೂಮಿಕಾ ಮೊದಲು ಹೇಳಲಿ ಎಂದು ಗೌತಮ್​... ಒಟ್ಟಿನಲ್ಲಿ ಇಬ್ಬರೂ ಐ ಲವ್​ ಯೂ ಅನ್ನೋದಕ್ಕೆ ಪರದಾಡುತ್ತಿದ್ದಾರೆ.   

ಹೀಗೆ ಬಿಟ್ಟರೆ ಇವರಿಬ್ಬರೂ ಲವ್​ ಬಗ್ಗೆ ಹೇಳುವುದೇ ಇಲ್ಲ ಎಂದು ಆನಂದ್​ ಮತ್ತು ಪತ್ನಿ ಪ್ಲ್ಯಾನ್​ ಮಾಡುತ್ತಲೇ ಇದ್ದರು.  ಬಂಗಾಳಿಯ ಕ್ಲೈಂಟ್ಸ್​ ಜೊತೆ ಗೌತಮ್​ ಮೀಟಿಂಗ್​ ಫಿಕ್ಸ್ ಆಗಿತ್ತು. ಆ ಸಮಯದಲ್ಲಿ  ಅವರನ್ನು ಸ್ವಾಗತಿಸಲು ಬಂಗಾಳಿಯಲ್ಲಿ ಮಾತನಾಡುವಂತೆ ಆನಂದ್​ ಹೇಳಿದ್ದ.  ನಾವು ನಿಮ್ಮವರು ಎನ್ನಲು ಬೆಂಗಾಳಿಯಲ್ಲಿ ಹೇಗೆ ಹೇಳ್ತೀರಾ ಎಂದು ಭೂಮಿಕಾ ಕೇಳಿದ್ದಳು. ಅದಕ್ಕೆ ಗೌತಮ್​ ಬಂಗಾಳಿಯಲ್ಲಿ ಮಾತನಾಡಿದ್ದಾನೆ. ನಿಜವಾಗಿ ಹೇಳಬೇಕು ಎಂದರೆ ಅದು ಬಂಗಾಳಿಯಲ್ಲಿ ಐ ಲವ್​ ಯು ಎನ್ನುವುದು. ಇದು ಗೌತಮ್​ಗೂ ತಿಳಿದಿರಲಿಲ್ಲ, ಭೂಮಿಕಾಗೂ ತಿಳಿದಿರಲಿಲ್ಲ. ಕೊನೆಗೆ ಆನಂದ್​ನೇ ನೀನು ಹೇಳಿದ್ದು ಐ ಲವ್​ ಯು ಅಂತ ಹೇಳಿದ್ದಾನೆ. ಇದನ್ನು ಮರೆಯಿಂದ ಕೇಳಿಸಿಕೊಂಡು ಭೂಮಿಕಾ ನಾಚಿ ನೀರಾಗಿದ್ದಳು. ಗೌತಮ್​ ತಲೆ ತಲೆ ಚಚ್ಚಿಕೊಂಡಿದ್ದ. ಇದೀಗ ಮತ್ತಷ್ಟು ಹತ್ತಿರವಾಗಿರೋ ಜೋಡಿ, ಹನಿಮೂನ್​ನಲ್ಲಿ ಒಂದಾಗ್ತಾರಾ ಎನ್ನುವುದು ಮುಂದಿರುವ ಪ್ರಶ್ನೆ. 

ಬಿಗ್​ಬಾಸ್​ ದೀದಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬಕ್ಕೆ ಡ್ರೋನ್​ ಪ್ರತಾಪ್​ ಸ್ಪೆಷಲ್​ ಗಿಫ್ಟ್​!


 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

Amruthadhaare Serial: ಗೌತಮ್-ಭೂಮಿಕಾ ಜೀವನ ಸರಿಮಾಡೋಕೆ ಯಾರು ಬರಬೇಕೋ ಅವ್ರು ಬಂದ್ರು; ಕೇಡಿಗಳಿಗೆ ಮಾರಿಹಬ್ಬ
Namratha Gowda ಪ್ರೀತಿಯಲ್ಲಿದ್ದಾರಾ? ಆ ಕಪ್ಪು ಬ್ಯಾಂಡ್‌ ಕೊಟ್ಟ ಸುಳಿವಿನ ಬಗ್ಗೆ Karthik Mahesh ಏನಂದ್ರು?