ದರ್ಶನ್​ ಸಿನಿಮಾ ಕಾಪಿ ಮಾಡುವಾಗ ಎಡವಟ್ಟು! ರಜತ್‌, ವಿನಯ್‌ ಬಳಿಕ ಬುಲೆಟ್​ ರಕ್ಷಕ್​ಗೂ ಕಾನೂನು ಉರುಳು?

Published : Mar 26, 2025, 01:07 PM ISTUpdated : Mar 26, 2025, 01:17 PM IST
ದರ್ಶನ್​ ಸಿನಿಮಾ ಕಾಪಿ ಮಾಡುವಾಗ ಎಡವಟ್ಟು! ರಜತ್‌, ವಿನಯ್‌ ಬಳಿಕ ಬುಲೆಟ್​ ರಕ್ಷಕ್​ಗೂ ಕಾನೂನು ಉರುಳು?

ಸಾರಾಂಶ

ಬಿಗ್‌ಬಾಸ್ ಮಾಜಿ ಸ್ಪರ್ಧಿಗಳಾದ ರಜತ್, ವಿನಯ್ ಬಂಧನದ ಬೆನ್ನಲ್ಲೇ, ಮತ್ತೊಬ್ಬ ಸ್ಪರ್ಧಿ ಬುಲೆಟ್ ರಕ್ಷಕ್ ಕಾನೂನು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ರಕ್ಷಕ್ ಅವರು ಕಾರ್ಯಕ್ರಮವೊಂದರಲ್ಲಿ ನಾಡದೇವಿ ಚಾಮುಂಡೇಶ್ವರಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲು ಮುಂದಾಗಿದ್ದು, ರಕ್ಷಕ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿವೆ.

 ಸಾರ್ವಜನಿಕವಾಗಿ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ಆರೋಪದ ಮೇಲೆ ಬಿಗ್‌ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ಸದ್ಯ ಬಂಧಿಸಲಾಗಿದೆ. ಇವರು ಜೈಲುಪಾಲಾಗಿರುವ ಬೆನ್ನಲ್ಲೇ ಇದೀಗ ಮತ್ತೋರ್ವ ಮಾಜಿ ಸ್ಪರ್ಧಿ ಬುಲೆಟ್​ ರಕ್ಷಕ್​ಗೂ ಕಾನೂನು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಇವರ ವಿರುದ್ಧ ಹಿಂದೂ ಸಂಘಟನೆಗಳು ದೂರು ದಾಖಲು ಮಾಡಲು ಮುಂದಾಗಿದ್ದಾರೆ.ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಹಿಂದೂ ಸಂಘಟನೆಗಳು ದೂರು ಸಲ್ಲಿಸಲು ಹೊರಟಿದ್ದು, ಹೀಗಾದರೆ, ಬುಲೆಟ್​ ರಕ್ಷಕ್​ ಕಾನೂನಿನ ಸುಳಿಯಲ್ಲಿ ಸಿಗುವ ಸಾಧ್ಯತೆ ಇದೆ. ಅಷ್ಟಕ್ಕೂ ಬುಲೆಟ್​ ರಕ್ಷಕ್​ ಅವರು,  ಶೋ ಒಂದರಲ್ಲಿ ಭಾಗಿಯಾಗಿದ್ದ ವೇಳೆ ನಾಡದೇವಿ ಚಾಮುಂಡೇಶ್ವರಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಆರೋಪ ಎದುರಿಸುತ್ತಿದ್ದಾರೆ.

 ಈ ಷೋನಲ್ಲಿ ರಕ್ಷಕ್​ ಅವರ ಪಕ್ಕ ಮಹಿಳಾ ಸ್ಪರ್ಧಿ ಇದ್ದರು. ಅವರನ್ನು ಹೊಗಳುವುದು ರಕ್ಷಕ್​ ಉದ್ದೇಶವಾಗಿತ್ತು. ಈ ಹಿನ್ನೆಲೆಯಲ್ಲಿ, ಆಕೆಯನ್ನು ಮೆಚ್ಚಿಸುವ ಭರದಲ್ಲಿ ಎಡವಟ್ಟು ಮಾಡಿಕೊಂಡಿದ್ದಾರೆ. ನಾಡದೇವಿಗೆ ಅವಮಾನ ಮಾಡಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದ್ದು, ಇವರ ವಿರುದ್ಧ ಹಿಂದೂ ಸಂಘಟನೆಗಳು ಗರಂ ಆಗಿವೆ. ಅಷ್ಟಕ್ಕೂ ಆಗಿದ್ದೇನೆಂದರೆ, ಇವರು ರಿಯಾಲಿಟಿ ಷೋ ಸಂದರ್ಭದಲ್ಲಿ ದರ್ಶನ್ ಹಾಗೂ ರಚಿತಾ ರಾಮ್ ಅಭಿನಯದ ಬುಲ್ ಬುಲ್ ಸಿನಿಮಾದ ದೃಶ್ಯವನ್ನು ಕಾಪಿ ಮಾಡಲು ಹೋಗಿದ್ದರು. 

ಜೀವನದಲ್ಲಿ ಮೊದಲ ಬಾರಿ ಬುಲೆಟ್​ ರಕ್ಷಕ್​ ರೊಮಾನ್ಸ್​: ವೇದಿಕೆ ಮೇಲೆ ನಾಚಿ ನೀರಾದ 'ಕನ್ನಡತಿ' ರಮೋಲಾ!

ಆ ಸಂದರ್ಭದಲ್ಲಿ ಮಹಿಳಾ ಸ್ಪರ್ಧಿ ರಮೋಲಾ ಅವರನ್ನು  ನಾಡದೇವಿ ಚಾಮುಂಡೇಶ್ವರಿಗೆ ಹೋಲಿಕೆ ಮಾಡುವಾಗ ಏನೋ ಹೇಳಿ ಎಡವಟ್ಟು ಮಾಡಿಕೊಂಡಿದ್ದಾರೆ.   ನಿಮ್ಮನ್ನು ನೋಡ್ತಿದ್ರೆ ತಾಯಿ ಚಾಮುಂಡೇಶ್ವರಿ ಬೆಟ್ಟದಿಂದ ಇಳಿದು ಬಂದು ಸೀರೆ ಒಡವೆ ಬಿಚ್ಚಿಟ್ಟು ಪ್ಯಾಂಟು ಶರ್ಟು ಹಾಕೊಂಡು ಸ್ವಿಟ್ಜರ್ಲೆಂಡ್‌ನಲ್ಲಿ ಟ್ರಿಪ್ ಹೊಡಿತಿದ್ದಾಳೆ ಅನ್ನಿಸ್ತಿದೆ ಎಂದು  ಡೈಲಾಗ್ ಹೇಳಿದ್ದಾರೆ. ಇದೀಗ ಭಾರಿ ವಿವಾದಕ್ಕೆ  ಕಾರಣವಾಗಿದೆ. ಈ ಮಾತುಗಳಿಂದ ಹಿಂದೂಗಳ  ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗಿದೆ ಎನ್ನುವ ಆರೋಪ ಕೇಳಿಬಂದಿದ್ದು, ರಕ್ಷಕ್​ ಮಾತ್ರವಲ್ಲದೇ ಈ ಷೋ ಆಯೋಜಿಸಿರುವವರ ವಿರುದ್ಧವೂ ಕ್ರಮಕ್ಕೆ ಹಿಂದೂ ಸಂಘಟನೆಗಳು ಮುಂದಾಗಿವೆ.

ಇನ್ನು ಬುಲೆಟ್​ ರಕ್ಷಕ್​  ಕುರಿತು ಹೇಳುವುದಾದರೆ, ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರ ಮಗ ರಕ್ಷಕ್ ಬುಲೆಟ್ ಬಿಗ್​ಬಾಸ್​ ಬಳಿಕ ಸಕತ್ ಫೇಮಸ್​ ಆದವರು. ಬಿಗ್​ಬಾಸ್​ ಬಗ್ಗೆ ಹೇಳಿಕೆ ನೀಡಿ ಕಾಂಟ್ರವರ್ಸಿಗೆ ಒಳಗಾಗಿದ್ದರೂ ಇದೀಗ ಅವರಿಗೆ ಸಕತ್​ ಡಿಮಾಂಡ್​ ಕೂಡ ಇದೆ. ಇದೀಗ ಅವರು, ಜೀ ಕನ್ನಡದಲ್ಲಿ ಪ್ರಸಾರ ಆಗ್ತಿರೋ ಭರ್ಜರಿ ಬ್ಯಾಚುಲರ್ಸ್​ಗೆ ಎಂಟ್ರಿ ಕೊಟ್ಟಿದ್ದಾರೆ. ಇದರಲ್ಲಿ ಅವರಿಗೆ, ಸೀತಾರಾಮ ವಿಲನ್​ ಚಾಂದನಿ ಅರ್ಥಾತ್​ ನಟಿ ರಮೋಲಾ ಜೋಡಿಯಾಗಿದ್ದಾರೆ. ಇದೀಗ ಇವರಿಬ್ಬರೂ ಬೇರೆ ಜೋಡಿಗಳಿಗೆ ಪೈಪೋಟಿ ನೀಡಬೇಕಿದೆ. ಕೆಲ ವಾರಗಳ ಹಿಂದೆ   ಜೀವನದಲ್ಲಿ ಇದೇ ಮೊದಲ ಬಾರಿಗೆ ಲವ್​ ಸಾಂಗ್​ ಡಾನ್ಸ್​ ಮಾಡಿ, ರಮೋಲಾ ಅವರಿಗೆ ಸರ್​ಪ್ರೈಸ್​ ಗಿಫ್ಟ್​  ಕೊಟ್ಟಿದ್ದರು. ನನ್ನ ಜೀವನದಲ್ಲಿ ಇದೇ  ಮೊದಲ ಬಾರಿಗೆ ಲವ್​ ಸಾಂಗ್​ಗೆ ಡಾನ್ಸ್​ ಮಾಡಿರುವುದಾಗಿ ರಕ್ಷಕ್​ ಹೇಳಿದರೆ, ರಮೋಲಾ ಕೂಡ ಇಂಥದ್ದೊಂದು ಗಿಫ್ಟ್​ ನನಗೆ ಮೊದಲ ಬಾರಿಗೆ ಸಿಕ್ಕಿದ್ದು ಎಂದಿದ್ದರು. ಇದರಲ್ಲಿ, ರಕ್ಷಕ್​ ಅವರು ಅಮೋಲಾ ಅವರಿಗೆ ಅವರ ಬಾಲ್ಯದ ಫೋಟೋಗಳನ್ನು ಗಿಫ್ಟ್​ ನೀಡಿದ್ದರು. ಆದರೆ ಈಗ ಕಾನೂನು ಕುಣಿಕೆಯಲ್ಲಿ ಸಿಲುಕಿದ್ದಾರೆ. 
 

ಅಪ್ಪನ ಜೊತೆ ನಟಿ ಅದಿತಿ ಪ್ರಭುದೇವ ಎಳನೀರು ಚಾಲೆಂಜ್​! ಒಂದು ಸಾವಿರ ರೂ. ಗೆದ್ದೋರು ಯಾರು?

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

BBK 12: ಪದೇ ಪದೇ ಕಿಚ್ಚ ಸುದೀಪ್‌ ಹೇಳ್ತಿರುವಂತೆ ರಜತ್‌ ವೈರಲ್ ವಿಡಿಯೋ ಅಸಲಿ ವಿಷಯ ಏನು? ಅಂಥದ್ದೇನಿದೆ?
ಏನೂ ಮಾಡದೆ ಸ್ಪಂದನಾ ಸೋಮಣ್ಣ Bigg Boss ಮನೇಲಿ ಇರೋದು ಹೇಗೆ? ಕಿಚ್ಚ ಸುದೀಪ್‌ ಬಿಚ್ಚಿಟ್ಟ ಸತ್ಯ ಏನು?