ಮರೆಯಲಾಗದ ಕಹಿ ಘಟನೆಗಳ ನೆನಪಿಸಿಕೊಂಡು ಬಿಕ್ಕಿ ಬಿಕ್ಕಿ ಅತ್ತ ಬಿಗ್​ಬಾಸ್​ ಸ್ಪರ್ಧಿಗಳು

Published : Dec 11, 2023, 11:33 AM IST
ಮರೆಯಲಾಗದ ಕಹಿ ಘಟನೆಗಳ ನೆನಪಿಸಿಕೊಂಡು  ಬಿಕ್ಕಿ ಬಿಕ್ಕಿ ಅತ್ತ ಬಿಗ್​ಬಾಸ್​ ಸ್ಪರ್ಧಿಗಳು

ಸಾರಾಂಶ

ಬಿಗ್​ಬಾಸ್​ ಸ್ಪರ್ಧಿಗಳು ತಮ್ಮ ಜೀವನದ ಮರೆಯಲಾಗದ ಕಹಿ ಘಟನೆಗಳ ನೆನಪಿಸಿಕೊಂಡು  ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಅವರು ನೆನಪಿಸಿಕೊಂಡ ಘಟನೆಗಳೇನು?  

ಬಿಗ್​ಬಾಸ್ ಎರಡನೆಯ ತಿಂಗಳಿಗೆ ಕಾಲಿಟ್ಟಿದ್ದು, ದಿನದಿಂದ ದಿನಕ್ಕೆ ಕಾಂಟ್ರವರ್ಸಿಗಳು ಹೆಚ್ಚಾಗುತ್ತಲೇ ಸಾಗಿವೆ. ಸ್ಪರ್ಧಿಗಳ ಹುಚ್ಚಾಟ ಒಂದೆಡೆ ಹೆಚ್ಚಾಗುತ್ತಿದ್ದರೆ, ಬಿಗ್​ಬಾಸ್​ ವಿರುದ್ಧ ಒಂದಲ್ಲ ಒಂದು ರೀತಿಯ ದೂರುಗಳು ದಾಖಲಾಗುತ್ತಿವೆ.  ಹುಚ್ಚಾಟ ಹೆಚ್ಚಾದಷ್ಟೂ ಟಿಆರ್​ಪಿ ರೇಟೂ ಏರುತ್ತಿದೆ. ಗದ್ದಲ, ಗಲಾಟೆ, ಅಶ್ಲೀಲತೆಯನ್ನು ನೋಡಿ ಬೈಯುತ್ತಲೇ ಖುಷಿ ಪಡುವ ದೊಡ್ಡ ವರ್ಗವೇ ಇದೆ ಎನ್ನುವುದು ಬಿಗ್​ಬಾಸ್​ನ ಎಲ್ಲಾ ಭಾಷೆಗಳ ಟಿಆರ್​ಪಿ ರೇಟ್​ ನೋಡಿದರೆ ತಿಳಿದುಬರುತ್ತಿದೆ. ಪ್ರತಿದಿನವೂ ಸೋಷಿಯಲ್​ ಮೀಡಿಯಾದಲ್ಲಿ ಈ ಷೋಗೆ ಶಾಪ ಹಾಕುತ್ತಲೇ, ಇದರ ವಿರುದ್ಧ ಕಮೆಂಟ್​ ಮಾಡುತ್ತಲೇ ಅದನ್ನು ಒಂದು ಕ್ಷಣವೂ ಬಿಡದೆ ನೋಡುವ ಅಸಂಖ್ಯ ಪ್ರೇಕ್ಷಕ ವರ್ಗವಿದೆ. ಪ್ರೇಕ್ಷಕರ ಸಂಖ್ಯೆ ಹೆಚ್ಚಿದ್ದಷ್ಟೂ ಬಿಗ್​ಬಾಸ್​ ಮನೆಯಲ್ಲಿ ಅಸಭ್ಯ ವರ್ತನೆಗಳು ಮಿತಿಮೀರುತ್ತಲೇ ಇರುತ್ತವೆ ಎಂದು ಇಂಥ ಷೋ ಇಷ್ಟಪಡದವರು ಹೇಳುತ್ತಲೇ ಇರುತ್ತಾರೆ.  

 ಟಾಸ್ಕ್​ ಸಮಯದಲ್ಲಿ ಡ್ರೋನ್​ ಪ್ರತಾಪ್​ ಮತ್ತು ಸಂಗೀತಾ (Sangeetha Sringeri) ಅವರ ಕಣ್ಣಿಗೆ ಹಾನಿಯಾಗಿದ್ದು, ಇಬ್ಬರೂ ಕಪ್ಪು ಕನ್ನಡಕ ಹಾಕಿಕೊಂಡೇ ಸ್ಪರ್ಧೆ ಮುಂದುವರೆಸಿದ್ದಾರೆ.  ಸೋಪ್​ ನೀರನ್ನು ಪರಸ್ಪರ ಎರೆಚಿಕೊಳ್ಳುವ ಟಾಸ್ಕ್​ನಲ್ಲಿ ಇವರಿಬ್ಬರ ಮುಖಕ್ಕೆ ರಾಸಾಯನಿಕ ನೀರು ಬಿದ್ದಿದೆ ಎನ್ನಲಾಗುತ್ತಿದ್ದು, ಇಬ್ಬರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಪಡೆದು ಬಿಗ್​ಬಾಸ್ ಮನೆಗೆ ಬಂದಿರುವ ಇವರಿಬ್ಬರಿಗೆ ಆದ ತೊಂದರೆಯಿಂದ ಭಾರಿ ಪ್ರಮಾಣದ ವಿವಾದ ಸೃಷ್ಟಿಯಾಗಿದ್ದು, ಬಿಗ್​ಬಾಸ್​ ಸ್ಪರ್ಧೆಯ ಬಗ್ಗೆ ಹಲವರು ಪ್ರಶ್ನೆ ಮಾಡುತ್ತಿದ್ದಾರೆ.

ನನ್ನಮ್ಮ ಕಣ್ಣೀರು ಹಾಕಿದ್ಲು! ಕೀಳು ಮಟ್ಟದ ಪ್ರಚಾರ ಬೇಕಾ? ಪಾಪಿಗಳ ಸಂತೆಯಲ್ಲಿ ಪ್ರಾಣಕ್ಕೆ ಬೆಲೆಯೇ ಇಲ್ವಾ?

ಇದರ ನಡುವೆಯೇ, ಇದೀಗ ಹೊಸ ಪ್ರೊಮೋ ರಿಲೀಸ್​ ಮಾಡಲಾಗಿದೆ. ಅದರಲ್ಲಿ, ಬಿಗ್​ಬಾಸ್​ ಸ್ಪರ್ಧಿಗಳು ಎಂದೂ ಮರೆಯದ ತಮ್ಮ ಕಹಿ ಘಟನೆಗಳನ್ನು ಹೇಳಿಕೊಂಡು ಬಿಕ್ಕಿಬಿಕ್ಕಿ ಅತ್ತಿದ್ದಾರೆ. ಬಿಗ್​ಬಾಸ್​​ ನಿಮ್ಮ ಮನದಾಳದ  ಮಾತುಗಳಿಗೆ ಕಿವಿಯಾಗುತ್ತಾರೆ ಎಂದು ಬಿಗ್​ಬಾಸ್​ ಹೇಳುತ್ತಿದ್ದಂತೆಯೇ ಸ್ಪರ್ಧಿಗಳು ಮರೆಯಲಾಗದ ವಿಷಯಗಳ ಬಗ್ಗೆ ಹೇಳಿಕೊಂಡಿದ್ದಾರೆ. ವಿನಯ್​ ತಮ್ಮ ತಂಗಿಯ ಡೆಲವರಿಯ ಕುರಿತು ಮಾತನಾಡಿದ್ದಾರೆ. ತಂಗಿಯ ಡೆಲವರಿ ಡೇಟ್​ ಇತ್ತು. ಆ ಒಂದು ವಿಷಯ... ಎನ್ನುತ್ತಲೇ ಕಣ್ಣೀರಾಗಿದ್ದಾರೆ.

ಇನ್ನು ನಮ್ರತಾ, ನನಗೆ ಒಂದೊಂದು ಸಲ ಒಬ್ಬಂಟಿ ಫೀಲ್​ ಆಗುತ್ತದೆ ಎಂದು ಅತ್ತಿದ್ದಾರೆ. ನಾನು ಮಾತನಾಡಿದರೆ ಇಲ್ಲಿ ಯಾರಿಗೂಇಷ್ಟ ಆಗುವುದಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ಡ್ರೋನ್​ ಪ್ರತಾಪ್​ ಕನ್ನಡಕ ಹಾಕಿಕೊಂಡು ಓಡಾಡುವುದನ್ನು ನೋಡಿದರೆ ಬೇಜಾರು ಆಗುತ್ತದೆ. ಇದಕ್ಕೆ ಒಂದು ರೀತಿಯಲ್ಲಿ ನಾನೇ ಕಾರಣನಾ ಎನಿಸುತ್ತದೆ ಎಂದು ವರ್ತೂರು ಸಂತೋಷ್​ ಬೇಸರಿಸಿದ್ದಾರೆ. ಕಾಲೇಜಿನ ದಿನಗಳನ್ನು ನೆನಪಿಸಿಕೊಂಡು ಬಿಕ್ಕಿಬಿಕ್ಕಿ ಅತ್ತ ಸಂಗೀತಾ, ಸ್ಕೂಲ್​-ಕಾಲೇಜಿನಲ್ಲಿ ನನ್ನನ್ನು ಯಾವಾಗಲೂ ಕಾರ್ನರ್​ ಮಾಡುತ್ತಿದ್ದರು. ಇಲ್ಲಿಯೂ ಹಾಗೆಯೇ ಎನಿಸುತ್ತಿದೆ ಎಂದಿದ್ದಾರೆ. 
 

ಸ್ವರ್ಗದಷ್ಟೇ ಬಿಗ್​ಬಾಸ್​ ಸುರಕ್ಷಿತ ಎಂದದ್ದು ಇದಕ್ಕೇನಾ? ಸಂಗೀತಾ ಸಹೋದರ ಕಿಡಿ- ಸುದೀಪ್​ಗೆ ಪತ್ರ?

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

Amruthadhaare Serial: ಪ್ಲ್ಯಾನ್‌ ಬದಲಾಯಿಸಿದ ಜಯದೇವ್;‌ ಇನ್ನೊಂದು ಅವಾಂತರ ಆಗಲಿದೆಯಾ?
ಡೂಡಲ್ ಫೋಟೊ ಮೂಲಕ ಅವಿ ಬರ್ತ್ ಡೇಗೆ ವಿಶ್ ಮಾಡಿದ Divya Uruduga… ಫ್ಯಾನ್ಸ್’ಗೆ ಮದ್ವೆ ಚಿಂತೆ