
ಬೆಂಗಳೂರು(ಏ. 01) ಬಿಗ್ ಬಾಸ್ ಮನೆಯಲ್ಲಿ ಬೆಂಕಿ ಹೊತ್ತಿಕೊಳ್ಳಲಿದೇಯಾ? ವಾಹಿನಿ ಹಂಚಿಕೊಮಡಿರುವ ಪ್ರೋಮೋ ಅನೇಕ ಪ್ರಶ್ನೆಗಳನ್ನು ಎತ್ತಿದೆ.
ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿಯಾಗಲಿದೆ. ಮೂಲಗಳ ಪ್ರಕಾರ ಚಕ್ರವರ್ತಿ ಚಂದ್ರಚೂಡ್ ಮನೆ ಪ್ರವೇಶ ಮಾಡಲಿದ್ದಾರೆ.
ಲ್ಯಾಗ್ ಮಂಜನ ಹಲ್ಲು ಉದುರಿ ಬಿತ್ತು
ವೈಲ್ಡ್ ಕಾರ್ಡ್ ಸ್ಪರ್ಧಿ ಪ್ರವೇಶ ಮಾಡುತ್ತಿದ್ದಂತೆ ಮನೆಯವರೆಲ್ಲ ದಂಗಾಗಿ ಹೋಗಿದ್ದಾರೆ. ಅದರಲ್ಲೂ ಪ್ರಶಾಂತ್ ಸಂಬರಗಿ ರಿಯಾಕ್ಷನ್ ಮಾತ್ರ ಕೇಳುವುದೇ ಬೇಡ.
ಪತ್ರಕರ್ತರಾಗಿ ಗುರುತಿಸಿಕೊಂಡಿದ್ದ ಚಂದ್ರಚೂಡ್ ಸಿನಿಮಾ ನಿರ್ದೇಶಕನಾಗಿಯೂ ಹೆಸರು ಮಾಡಿದ್ದಾರೆ. ಚಕ್ರವರ್ತಿ ಮತ್ತು ಸಂಬರಗಿ ನಡುವೆ ಸಿದ್ಧಾಂತಗಳ ತಿಕ್ಕಾಟ ನಡೆಯುವ ಸಾಧ್ಯತೆಯೂ ಹೆಚ್ಚಾಗಿದೆ. ವಾಹಿನಿ ಈ ಬಗ್ಗೆ ಸ್ಪಷ್ಟನೆ ನೀಡಿಲ್ಲ. ಆದರೆ ಚಂದ್ರಚೂಡ್ ಅವರೇ ಮನೆ ಪ್ರವೇಶ ಮಾಡಿದ್ದಾರೆ ಎಂದು ಸೋಶಿಯಲ್ ಮೀಡಿಯಾ ಪ್ರತಿಕ್ರಿಯೆಗಳು ಹೇಳಿವೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.