ಎಲಿಮಿನೇಟಾಗಿ ಹೊರಬರ್ತಿದ್ದಂತೆಯೇ ನೇರಪ್ರಸಾರದಲ್ಲಿ ಚೈತ್ರಾ ಕುಂದಾಪುರ ಬಿಗ್​ಬಾಸ್​ ಬಗ್ಗೆ ಹೇಳಿದ್ದೇನು?

Published : Jan 13, 2025, 04:12 PM ISTUpdated : Jan 13, 2025, 04:25 PM IST
ಎಲಿಮಿನೇಟಾಗಿ ಹೊರಬರ್ತಿದ್ದಂತೆಯೇ ನೇರಪ್ರಸಾರದಲ್ಲಿ ಚೈತ್ರಾ ಕುಂದಾಪುರ ಬಿಗ್​ಬಾಸ್​ ಬಗ್ಗೆ ಹೇಳಿದ್ದೇನು?

ಸಾರಾಂಶ

ಬಿಗ್‌ಬಾಸ್ ಮನೆಯಿಂದ 105 ದಿನಗಳ ನಂತರ ಹೊರಬಂದ ಚೈತ್ರಾ ಕುಂದಾಪುರ, ತಮ್ಮ ಅನುಭವ ಹಂಚಿಕೊಂಡಿದ್ದಾರೆ. ನರಕದಿಂದ ಸ್ವರ್ಗದವರೆಗಿನ ಪ್ರಯಾಣ, ಬದುಕಿನ ಪಾಠ, ಸವಾಲುಗಳನ್ನು ಎದುರಿಸುವ ಶಕ್ತಿ ನೀಡಿದೆ ಎಂದಿದ್ದಾರೆ. ಮೊಬೈಲ್, ಪುಸ್ತಕಗಳಿಲ್ಲದ ಬದುಕು ಕಷ್ಟಕರವಾಗಿತ್ತು. ಆದರೆ ಬಿಗ್‌ಬಾಸ್ ಒಂದು ಅವಿಸ್ಮರಣೀಯ ಅನುಭವ ನೀಡಿದೆ ಎಂದು ಭಾವಿಸಿದ್ದಾರೆ.


ಫೈರ್ ಬ್ರ್ಯಾಂಡ್ ಭಾಷಣಗಾರ್ತಿ ಎಂದೇ ಫೇಮಸ್​ ಆಗಿರೋ ಚೈತ್ರಾ ಕುಂದಾಪುರ ಬಿಗ್​ಬಾಸ್​​ ಮನೆಯಲ್ಲಿ 105 ದಿನಗಳ ಪ್ರಯಾಣ ಮುಗಿಸಿ ಇದೀಗ ಹೊರಕ್ಕೆ ಬಂದಿದ್ದಾರೆ. ಹೊರಕ್ಕೆ ಬರುತ್ತಿದ್ದಂತೆಯೇ ನೇರಪ್ರಸಾರದಲ್ಲಿ ಕೆಲವೊಂದು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಬಿಗ್​ಬಾಸ್​ನಲ್ಲಿ ತಮ್ಮ ಇಷ್ಟು ದೀರ್ಘ ಅವಧಿಯ ಪ್ರಯಾಣ ಹಾಗೂ ಜನ ತಮ್ಮನ್ನು ಸ್ವೀಕರಿಸಿದ ಪರಿಯ ಬಗ್ಗೆ ಅವರು ಮಾತನಾಡಿದ್ದಾರೆ. ಕಲರ್ಸ್​ ಕನ್ನಡ ವಾಹಿನಿಯ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಅವರ ಭಾಷಣವನ್ನು ಶೇರ್​ ಮಾಡಲಾಗಿದೆ. 

'ಹೊಸ ಹೊಸ ಅನುಭವ ಹೊತ್ತುಕೊಂಡು ಹೊರಗೆ ಬಂದಿದ್ದೇನೆ. ಬಿಗ್​ಬಾಸ್​ ನನಗೆ ಸುಂದರ ಅನುಭವ ನೀಡಿದೆ.  ಇದು ವಿಭಿನ್ನ ಆಗಿರುವಂಥ ಅನುಭವ. ಬದುಕಿನಲ್ಲಿ ಬಹಳ ಕಡಿಮೆ ಜನರಿಗೆ ಇಂಥದ್ದೊಂದು ಅವಕಾಶ ಸಿಗುತ್ತದೆ.  ಅನಿರೀಕ್ಷಿತವಾಗಿ  ನರಕಕ್ಕೆ ಹೋಗಬೇಕಾಯ್ತು. ಅಲ್ಲಿಂದ ನನ್ನ ಬಿಗ್​ಬಾಸ್​ ಪ್ರಯಾಣ ಆರಂಭವಾಯಿತು.  ಹೊಡೆದಾಟ, ಕಡಿಮೆ ಮೂಲಭೂತ ಸೌಕರ್ಯ ಇವುಗಳನ್ನೆಲ್ಲಾ ಎದುರಿಸಿದೆ. ಆಗ ಅನ್ನದ ಬೆಲೆ, ಒಗ್ಗಟ್ಟಿನ ಬೆಲೆ, ಜೀವನದಲ್ಲಿ ಸರ್ವೈವ್​ ಆಗುವುದು ಹೇಗೆ ಎನ್ನುವ ಬಹುದೊಡ್ಡ ಪಾಠವನ್ನು ಇದರಿಂದ ಕಲಿತೆ ಎಂದಿದ್ದಾರೆ  ಚೈತ್ರಾ. ಅಲ್ಲಿಂದ ನೇರವಾಗಿ ಸ್ವರ್ಗಕ್ಕೆ ಹೋದೆ. ಅಲ್ಲಿಯೂ ಹೊಸ ಹೊಸ ಅನುಭವ ಸಿಕ್ಕಿತು.  ಬದುಕಿನಲ್ಲಿ ಯಾವುದೇ ರೀತಿಯ ಏರುಪೇರು ಬಂದರೂ ಅದನ್ನು ಹೇಗೆ ನಿಭಾಯಿಸಬೇಕು ಎನ್ನುವ ಅನುಭವ ಈ ಅವಧಿಯಲ್ಲಿ ಬಿಗ್​ಬಾಸ್​​ ನನಗೆ  ಕೊಟ್ಟಿತು ಎಂದಿದ್ದಾರೆ.

ಬಿಗ್​ಬಾಸ್​ 11ರ ವಿನ್ನರ್​ ಘೋಷಿಸಿದ ವಿಕಿಪಿಡಿಯಾ: ಅಭಿಮಾನಿಗಳ ಸಂಭ್ರಮಾಚರಣೆ- ಆದದ್ದೇನು?

'ನಾನು ಸಾರ್ವಜನಿಕ ಕ್ಷೇತ್ರದಲ್ಲಿ ಇರುವಾಕೆ.  ಮೊಬೈಲ್​, ಟಿ.ವಿ. ಏನೂ ಇಲ್ಲದೇ ಬದುಕುವುದು ಕಷ್ಟವಾಯಿತು. ಪ್ರತಿನಿತ್ಯ ನನಗೆ ದಿನಪತ್ರಿಕೆ ಬೇಕೇ ಬೇಕು. ಅದು ಕೂಡ ಸಿಗಲಿಲ್ಲ. ಪುಸ್ತಕ ಇಲ್ಲದೇ ಇರುವವಳೇ ಅಲ್ಲ ನಾನು, ಅದು ಕೂಡ ಇಲ್ಲಿ ಸಿಗಲಿಲ್ಲ.  ಸಾಮಾಜಿಕ ಕ್ಷೇತ್ರದಲ್ಲಿ ಇರುವ ಕಾರಣ, ಎಲ್ಲವೂ ಅಪ್​ಡೇಟ್​ ಆಗುತ್ತಿರಬೇಕು. ಆದರೆ ಅವುಗಳಿಂದ ದೂರವಾಗಿ ಬದುಕಬೇಕಾಯಿತು.  ಪೂಜೆ ಇಲ್ಲದೇ, ಆಹಾರ ಪದ್ಧತಿಯಲ್ಲಿಯೂ ವ್ಯತ್ಯಾಸವಾಗಿ ಆರೋಗ್ಯ ಸಮಸ್ಯೆ ಎದುರಾಯ್ತು. ಹೊಸ ಹೊಸ ಸವಾಲುಗಳು ಬಂದವು. ಆದರೆ ಅವೆಲ್ಲವನ್ನೂ ನಿಭಾಯಿಸುವ ಶಕ್ತಿ ಬಿಗ್​ಬಾಸ್​​  ಕೊಟ್ಟಿತು' ಎಂದಿದ್ದಾರೆ ಚೈತ್ರಾ. ಇಂಥದ್ದೊಂದು ಭಾಗ್ಯ ಹೆಚ್ಚಿನವರಿಗೆ ಸಿಗುವುದಿಲ್ಲ. ಇದು ನನಗೆ ಬಯಸದೇ ಸಿಕ್ಕಿದ ಭಾಗ್ಯ. ಯಾರಿಗಾದರೂ ಇಂಥ ಅವಕಾಶ ಸಿಕ್ಕರೆ ಮಿಸ್​ ಮಾಡಿಕೊಳ್ಳಬೇಡಿ' ಎಂದಿದ್ದಾರೆ ಚೈತ್ರಾ.  

'ಸಿನಿಮಾ, ಕಿರುತೆರೆಯಂಥ ಎಂಟರ್​ಟೇನ್​ ಪ್ರಪಂಚದಿಂದ ತುಂಬಾ ದೂರ ಇದ್ದವಳು ನಾನು. ಆದ್ದರಿಂದ ಬಿಗ್​ಬಾಸ್​ ಮನೆಯಲ್ಲಿ ಒಳಗಡೆ ಆಟ ಬರುವುದಿಲ್ಲ, ಅಡ್ಜಸ್ಟ್​ ಆಗುವುದು ತುಂಬಾ ಕಷ್ಟ ಎನ್ನುವ ಭಯ ಇತ್ತು. ನನ್ನ ಪ್ರಪಂಚವೇ ಬೇರೆ. ಆದರೆ   ಯಾವ ಪ್ರಪಂಚವನ್ನು ವಿರೋಧಿಸ್ತಾ ಇದ್ನೋ ಅಲ್ಲಿಯೇ ಹೋಗಬೇಕಾಯಿತು. ಎಂಟರ್​ಟೇನ್​ಮೆಂಟ್​ ಪ್ರಪಂಚದ ಬಗ್ಗೆ ಇದ್ದ ನನ್ನ ಅನಿಸಿಕೆಗಳೂ ದೂರವಾದವು' ಎಂದರು ಚೈತ್ರಾ ಕುಂದಾಪುರ. ಚೈತ್ರಾ ಆಗಿ ಒಳಗೆ ಹೋದೆ, ಚೈತ್ರಕ್ಕಾ ಆಗಿ ಹೊರಕ್ಕೆ ಬಂದೆ. ನನ್ನ ಒಳಗಿರುವ ಪುಟ್ಟ ಮಗುವಿನ ಮನಸ್ಸು, ರೌದ್ರ ಸ್ವರೂಪ ಎಲ್ಲವನ್ನೂ ನೋಡಿದ್ದೀರಿ. ಇಷ್ಟು ದಿನ ಪ್ರೀತಿಯನ್ನು ಹರಿಸಿದ್ದೀರಿ. ಪುಟ್ಟ ಮಕ್ಕಳಿಂದ ವಯಸ್ಸಾಗಿರುವವರೂ ನನಗೆ ಹಾರೈಸಿದ್ದಾರೆ. ಬಿಗ್​ಬಾಸ್​​ಗೆ ಆಫರ್​ ಬಂದಾಗ ತುಂಬಾ ಮಂದಿ ಅವಮಾನವನ್ನೂ ಮಾಡಿದರು. ಆದರೆ ಅವಮಾನ ಮಾಡಿದವರ ಎದುರೇ ಜಯಿಸುವುದು ಸುಲಭದ ಮಾತಲ್ಲ ಎಂದಿರುವ ಚೈತ್ರಾ, ಜೀವನದಲ್ಲಿ ನಾನು ತಲೆದೂಗಿ, ತಲೆಬಾಗಿ, ಎದುರಾಡದೇ ಇದ್ದು, ಹೇಳಿದ್ದನ್ನು ಕೇಳಿದ್ದು ಎಂದರೆ ಬಿಗ್​ಬಾಸ್ ಮಾತನ್ನು ಮಾತ್ರ ಎಂದಿದ್ದಾರೆ.
 

ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಚೈತ್ರಾ ಕುಂದಾಪುರಗೆ ವಂಚನೆ ಪ್ರಕರಣದಲ್ಲಿ ಮತ್ತೆ ಸಂಕಷ್ಟ!

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

BBK 12: ಪದೇ ಪದೇ ಕಿಚ್ಚ ಸುದೀಪ್‌ ಹೇಳ್ತಿರುವಂತೆ ರಜತ್‌ ವೈರಲ್ ವಿಡಿಯೋ ಅಸಲಿ ವಿಷಯ ಏನು? ಅಂಥದ್ದೇನಿದೆ?
ಏನೂ ಮಾಡದೆ ಸ್ಪಂದನಾ ಸೋಮಣ್ಣ Bigg Boss ಮನೇಲಿ ಇರೋದು ಹೇಗೆ? ಕಿಚ್ಚ ಸುದೀಪ್‌ ಬಿಚ್ಚಿಟ್ಟ ಸತ್ಯ ಏನು?