BBK8: ದಿವ್ಯಾ ಉರುಡುಗ ಹಾಗೂ ಅರವಿಂದ್ ಮನಸ್ತಾಪಕ್ಕೇನು ಕಾರಣ?

Suvarna News   | Asianet News
Published : Jul 23, 2021, 04:11 PM IST
BBK8: ದಿವ್ಯಾ ಉರುಡುಗ ಹಾಗೂ ಅರವಿಂದ್ ಮನಸ್ತಾಪಕ್ಕೇನು ಕಾರಣ?

ಸಾರಾಂಶ

ದಿವ್ಯಾ ಉರುಡುಗ ಮೇಲೆ ಬೇಸರ ಮಾಡಿಕೊಂಡ ಅರವಿಂದ್. ಜೋಡಿ ಹಕ್ಕಿಗಳು ದೂರವಾಗಲು ಕಾರಣವೇನು?

ಈ ವಾರ ಮನೆಯ ಕ್ಯಾಪ್ಟನ್ ಆಗುವುದಕ್ಕೆ ಬಿಗ್ ಬಾಸ್ ನೀಡಿದ ಟಾಸ್ಕ್‌ನಿಂದ ಅರವಿಂದ್ ಹಾಗೂ ದಿವ್ಯಾ ನಡುವೆ ಮನಸ್ತಾಪವಾಗಿದೆ. ಸದಾ ಒಬ್ಬರ ಪರ ಮತ್ತೊಬ್ಬರು ನಿಲ್ಲುತ್ತಿದ್ದರು, ಆದರೆ ಇದೇ ಮೊದಲ ಸಲ ಸಣ್ಣ ವಿಚಾರವೊಂದಕ್ಕೆ ಇವರಿಬ್ಬರು ಮುನಿಸಿಕೊಂಡಿದ್ದಾರೆ. ದಿವ್ಯಾ ಮಾತನಾಡಿಸಿದರೂ, ಅರವಿಂದ್ ಮಾತನಾಡುವುದಿಲ್ಲ......

ವೈಷ್ಣವಿ ಗೌಡ, ದಿವ್ಯಾ ಉರುಡುಗ ಹಾಗೂ ಶುಭಾ ಪೂಂಜಾ ಗ್ಲೌಸ್ ಪಡೆಯಲು ನಿಂತಿದ್ದರು.  ಗ್ಲೌಸ್ ಪಡೆದುಕೊಳ್ಳುವ ಸದಸ್ಯ ಮುತ್ತು ಹುಡುಕುವ ಆಟ ಆಡಲು ಅರ್ಹರಾಗುತ್ತಾರೆ. ಶುಭಾ ಪೂಂಜಾ ಬಿಟ್ಟು ಕೊಡೋನಾ ಅಂತ ಹೇಳಿದರೂ ದಿವ್ಯಾ ಒಪ್ಪಿಕೊಳ್ಳುವುದಿಲ್ಲ. ದಿವ್ಯಾ ಮಾತುಗಳು ಅರವಿಂದ್‌ಗೆ ಸರಿಯಾಗಿ ಕೇಳಿಸುವುದಿಲ್ಲ. ಏನು ಹೇಳಿದೆ ಎಂದು ತುಸು ಏರು ಧ್ವನಿಯಲ್ಲಿ ಪ್ರಶ್ನೆ ಮಾಡುತ್ತಾರೆ. 'ನಾನು ಆಟ ಬಿಟ್ಟು ಕೊಡಲ್ಲ. ನಾನು ಯಾಕೆ ಬಿಟ್ಟುಕೊಡಲಿ,' ಎಂದು ಉತ್ತರಿಸುತ್ತಾರೆ. 

ದಿವ್ಯಾ- ಅರವಿಂದ್ ಒಂದೇ ಬಣ್ಣದ ಬಟ್ಟೆ, ಡಿಸೈನ್‌ ನೋಡಿ ನೆಟ್ಟಿಗರು ಶಾಕ್?

ದಿವ್ಯಾ ನೇರ ನುಡಿಯಿಂದ ಅರವಿಂದ್‌ಗೆ ನೋವಾಗುತ್ತದೆ. ಫೇರ್, ಅನ್‌ಫೇರ್‌ ಅಂತ ಇಷ್ಟು ದಿನ ಮಾತನಾಡುತ್ತಿದ್ದ ವ್ಯಕ್ತಿ ಹೀಗೆ ನಿಂತುಕೊಳ್ಳುವುದು ಸರಿ ಅಲ್ಲ ಎಂದು ಅರವಿಂದ್, ಚಕ್ರವರ್ತಿ ಬಳಿ ಚರ್ಚಿಸುತ್ತಾರೆ. ರಾತ್ರಿ ದಿವ್ಯಾ ಮಾತನಾಡಿಸಲು ಬಂದಾಗ 'ಮಾತನಾಡಿಸಲು ಏನಿಲ್ಲ,' ಎಂದು ಅರವಿಂದ್ ಹೇಳುತ್ತಾರೆ. ಬೇಸರಗೊಂಡ ದಿವ್ಯಾ ಅಳುತ್ತಾ ಮಲಗುತ್ತಾರೆ. 

ಮಾರನೇ ದಿನ ಬೇಸರದಲ್ಲಿ ದಿವ್ಯಾ ನಡೆದುಕೊಂಡು ಹೋಗುವಾಗ ಅರವಿಂದ್ ಹಿಂದೆಯಿಂದ ಬಂದು ತಬ್ಬಿ ಕೊಳ್ಳುತ್ತಾರೆ. ಇಬ್ಬರ ನಡುವೆ ಇದ್ದ ಮುನಿಸು ಸರಿ ಹೋಗುತ್ತದೆ.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

BBK 12: ಪದೇ ಪದೇ ಕಿಚ್ಚ ಸುದೀಪ್‌ ಹೇಳ್ತಿರುವಂತೆ ರಜತ್‌ ವೈರಲ್ ವಿಡಿಯೋ ಅಸಲಿ ವಿಷಯ ಏನು? ಅಂಥದ್ದೇನಿದೆ?
ಏನೂ ಮಾಡದೆ ಸ್ಪಂದನಾ ಸೋಮಣ್ಣ Bigg Boss ಮನೇಲಿ ಇರೋದು ಹೇಗೆ? ಕಿಚ್ಚ ಸುದೀಪ್‌ ಬಿಚ್ಚಿಟ್ಟ ಸತ್ಯ ಏನು?