ಈ ಒಂದು ಕಾರಣದಿಂದ 'ಮಜಾ ಭಾರತ' ಶೋನಿಂದ ಭೂಮಿ ಶೆಟ್ಟಿ ಔಟ್?

Suvarna News   | Asianet News
Published : Jan 05, 2021, 01:33 PM IST
ಈ ಒಂದು ಕಾರಣದಿಂದ 'ಮಜಾ ಭಾರತ' ಶೋನಿಂದ ಭೂಮಿ ಶೆಟ್ಟಿ ಔಟ್?

ಸಾರಾಂಶ

ಮಜಾ ಭಾರತ ರಿಯಾಲಿಟಿ ಶೋ ಮೂಲಕ ನಿರೂಪಕಿಯಾಗಿ ಎಂಟ್ರಿ ಕೊಟ್ಟ ಭೂಮಿ ಶೆಟ್ಟಿ ಈಗ ಕಾರ್ಯಕ್ರಮದಿಂದ ಹೊರ ನಡೆದಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣವೇನು?

'ಕಿನ್ನರಿ' ಧಾರಾವಾಹಿ ಮೂಲಕ ಕಿರುತೆರೆ ಮನೋರಂಜನೆ ಕ್ಷೇತ್ರದಕ್ಕೆ ಕಾಲಿಟ್ಟ ಎಂಜಿನಿಯರಿಂಗ್ ಹುಡುಗಿ, ಕುಂದಾಪುರದ ಮೀನು ಭೂಮಿ ಶೆಟ್ಟಿ. ಬಿಗ್ ಬಾಸ್ ರಿಯಾಲಿಟಿ ಶೋ ನಂತರ ಹೆಚ್ಚಿನ ಜನಪ್ರಿಯತೆ ಪಡೆದ ಈ ಚೆಲುವೆ 'ಮಜಾ ಭಾರತ' ರಿಯಾಲಿಟಿ ಶೋ ಮೂಲಕ ನಿರೂಪಕಿಯಾಗಿ ಗುರುತಿಸಿಕೊಂಡರು. ಆದರೀಗ ಅದರಿಂದಲ್ಲೂ ಹೊರ ಬಂದಿರುವುದನ್ನು ಕೇಳಿ ಕೇಳಿ ನೆಟ್ಟಿಗರು ಗೊಂದಲದಲ್ಲಿದ್ದಾರೆ.

ನಾನು ಏನನ್ನೂ ಪ್ಲ್ಯಾನ್ ಮಾಡುವುದಿಲ್ಲ: ಭೂಮಿ ಶೆಟ್ಟಿ 

ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಮಜಾ ಭಾರತ ಕಾಮಿಡಿ ಶೋನಿಂದ ಭೂಮಿ ಅಧಿಕೃತವಾಗಿ ಹೊರ ಬಂದಿರುವ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. 'ಇಂದು ನನ್ನ ಮಜಾ ಭಾರತ ಶೋನ ಕಡೆಯ ಶೋ. ನಾನು ಈ ಶೋ ನಿರೂಪಣೆ ನಿಲ್ಲಿಸುತ್ತಿದ್ದೇನೆ. ಅಧಿಕೃತ ಕಡೆ ಎಪಿಸೋಡ್ ಚಿತ್ರೀಕರಣ. ನೀವೆಲ್ಲರೂ ನನ್ನ ನಿರೂಪಣೆಯನ್ನು ಎಂಜಾಯ್ ಮಾಡಿದ್ದೀರಾ ಎಂದು ಭಾವಿಸಿರುವೆ.  ನಾನೀಗೊಂದು ನಿಲುವು ತೆಗೆದುಕೊಂಡಿರುವೆ. ನೀವೆಲ್ಲರೂ ಇಷ್ಟು ದಿನಗಳ ಕಾಲ ಪ್ರೋತ್ಸಾಹ ನೀಡಿರುವುದಕ್ಕೆ ಧನ್ಯವಾದಗಳು. ರಚಿತಾ ರಾಮ್ ಹಾಗೂ ಗುರು ಕಿರಣ್ ಸರ್ ನೀವಿಬ್ಬರೂ ರತ್ನಗಳು. ಹರೀಶ್ ರಾಜ್‌ ನನ್ನಗೆ ಒಳ್ಳೆಯ ಪಾರ್ಟ್‌ನರ್‌ ಆಗಿದ್ದರು' ಎಂದು ಭೂಮಿ ಸ್ಟೋರಿ ಹಾಕಿದ್ದಾರೆ.

ಹೊರ ಬರಲು ಕಾರಣ?
ಭೂಮಿ ಶೆಟ್ಟಿ ಶೋನಿಂದ ಹೊರ ಬರುತ್ತಿರುವ ವಿಚಾರ ಮಾತ್ರ ಬಹಿರಂಗ ಮಾಡಿದ್ದಾರೆ. ಆದರೆ ಯಾವ ಕಾರಣಕ್ಕೆ ಎಂದು ಕ್ಲಾರಿಟಿ ನೀಡಿಲ್ಲ. ಕೆಲವು ಮೂಲಗಳ ಪ್ರಕಾರ ಭೂಮಿಗೆ ತೆಲುಗು ಧಾರಾವಾಹಿಯೊಂದರಲ್ಲಿ ಪ್ರಮುಖ ಪಾತ್ರಧಾರಿಯಾಗಿ ಅವಕಾಶ ಪಡೆದುಕೊಂಡಿದ್ದಾರೆ. ಈ ಕಾರಣಕ್ಕೆ ಹೊರ ನಡೆದಿದ್ದಾರೆ ಎನ್ನಲಾಗಿದೆ.

ತಂದೆಯಾದ ಸಂಭ್ರಮದಲ್ಲಿ ಮಜಾಭಾರತ ಹರೀಶ್; ಮನೆಗೆ ಬಂದಿದ್ದಾಳೆ ಪುಟಾಣಿ! 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

BBK 12: ಪದೇ ಪದೇ ಕಿಚ್ಚ ಸುದೀಪ್‌ ಹೇಳ್ತಿರುವಂತೆ ರಜತ್‌ ವೈರಲ್ ವಿಡಿಯೋ ಅಸಲಿ ವಿಷಯ ಏನು? ಅಂಥದ್ದೇನಿದೆ?
ಏನೂ ಮಾಡದೆ ಸ್ಪಂದನಾ ಸೋಮಣ್ಣ Bigg Boss ಮನೇಲಿ ಇರೋದು ಹೇಗೆ? ಕಿಚ್ಚ ಸುದೀಪ್‌ ಬಿಚ್ಚಿಟ್ಟ ಸತ್ಯ ಏನು?