ಕೊನೆಗೂ ಮದುವೆ ಮುರಿದು ಬಿದ್ದಿರುವ ಸತ್ಯ ಬಿಚ್ಚಿಟ್ಟ ವರ್ತೂರ್ ಸಂತೋಷ್; ಸ್ಪರ್ಧಿಗಳು ಶಾಕ್

Published : Nov 30, 2023, 09:29 AM IST
ಕೊನೆಗೂ ಮದುವೆ ಮುರಿದು ಬಿದ್ದಿರುವ ಸತ್ಯ ಬಿಚ್ಚಿಟ್ಟ ವರ್ತೂರ್ ಸಂತೋಷ್; ಸ್ಪರ್ಧಿಗಳು ಶಾಕ್

ಸಾರಾಂಶ

ಬೆಂಕಿ ಮನೆಯಿಂದ ಹೊರ ಬಂದ್ಮೇಲೆ ಮದುವೆ ವಿಚಾರವನ್ನು ಓಪನ್ ಆಗಿ ಮಾತನಾಡಿದ ವರ್ತೂರ್. 

ಹಳ್ಳಿಕಾರ್ ಒಡೆಯ ವರ್ತೂರ್ ಸಂತೋಷ್ ಬಿಗ್ ಬಾಸ್ ಸೀಸನ್ 10ರಲ್ಲಿ ಸ್ಪರ್ಧಿಸುತ್ತಿದ್ದಾರೆ. ಹುಲಿ ಉಗುರು ಪ್ರಕರಣದ ಮೇಲೆ ಈಗಾಗಲೆ ಒಮ್ಮ ವರ್ತೂರ್ ಹೊರ ಬಂದು ಜೈಲ್‌ನಲ್ಲಿದ್ದು ಬೇಲ್‌ ಮೇಲೆ ಮತ್ತೊಮ್ಮೆ ಬಿಬಿ ಮನೆಗೆ ಎಂಟ್ರಿ ಕೊಟ್ಟರು. ಈ ನಡುವೆ ವರ್ತೂರ್‌ಗೆ ಮದುವೆ ಆಗಿದೆ ಅನ್ನೋ ವಿಚಾರ ಎಲ್ಲೆಡೆ ಸುದ್ದಿಯಾಗಿತ್ತು. ಮಾಧ್ಯಮಗಳಲ್ಲಿ ವರ್ತೂರ್ ಮಾವ ಚರ್ಚೆಗೂ ಕುಳಿತು ಬಿಟ್ಟರು. 

'ನಾನು ಮೊದಲೇ ಮನೆಯಲ್ಲಿ ಹಿರಿಯರಿಗೆ ಹೇಳಿದ್ದೆ. ದೊಡ್ಡಪ್ಪ ನೀನು ಒಬ್ಬರನ್ನು ತೋರಿಸಿ ಇಂತಹ ವ್ಯಕ್ತಿಗೆ ತಾಳಿ ಕಟ್ಟು ಅಂತ ಕೇಳಿ ನಾನು ಕಟ್ಟುತ್ತೀನಿ.. ನಾನು ಮಾತು ಕೊಟ್ಟು ಒಪ್ಪಿಕೊಂಡು ಬಿಟ್ಟೆ. ಹಾಗೆ ದಿನ ಸಾಗುತ್ತಾ ಸಾಗುತ್ತಾ ನನ್ನ ತಾಯಿಯನ್ನು ನಿರ್ಲಕ್ಷ್ಯ ಮಾಡಲು ಶುರು ಮಾಡಿದ್ದರು. ನಾನು ಸಂಪಾದನೆ ಮಾಡಿರುವ ಜನರನ್ನು ತೊರೆದು ಹೆಂಡತಿ ಹಿಂದೆ ಹೋಗಬೇಕು ಅಂದ್ರೆ ನನಗೆ ಅದು ಸಾಧ್ಯವಿಲ್ಲ. ಅವರ ತವರು ಮನೆಗೆ ಹೋಗಿ ಬಿಡುತ್ತಾರೆ. ಅಲ್ಲಿ ಹೇಳ್ತೀನಿ...ನನ್ನ ಮಾತಿನ ಪ್ರಕಾರ ನೀನು ಬಂದ್ರೆ ಇವತ್ತಿಗೂ ನೀನು ರಾಣಿನೇ. ಕರೆದ ಮೇಲೆ ಫಸ್ಟ್‌ ನಮ್ಮ ಮನೆಯಿಂದ ಗೇಟ್‌ನಿಂದ ಹೊರ ಹೋಗು ಎನ್ನುತ್ತಾರೆ. ಅವತ್ತು ಮಾತು ಕೊಟ್ಟು ಬಂದಿದ್ದೀನಿ ಇವತ್ತು ಆ ಮಾತುಗಳ ಮೇಲೆ ನಿಂತಿದ್ದೀನಿ' ಎಂದು ಈಗಷ್ಟೆ ರಿಲೀಸ್ ಆಗಿರುವ ಪ್ರೋಮೋದಲ್ಲಿ ವರ್ತೂರ್ ಮಾತನಾಡಿದ್ದಾರೆ.

ಮದುವೆ ದಿನ ಡ್ರಗ್ಸ್‌ ಮಾಡ್ಕೊಂಡು ಬಂದಿದ್ದ ವರ್ತೂರ್ ಸಂತೋಷ್, ಎರಡೇ ದಿನಕ್ಕೆ ಡಿವೋರ್ಸ್ ಅಂತಾರೆ; ಮಾವ ಕಣ್ಣೀರು

ಬೆಂಕಿ ಉರ್ಫ್ ತನಿಷಾ ಜೊತೆ ವರ್ತೂರ್ ಫ್ಲರ್ಟ್ ಮಾಡುತ್ತಿದ್ದಾರೆ ಮದುವೆನೂ ಆಗಬಹುದು ಆದರೆ ಮೊದಲ ಮದುವೆ ಬಗ್ಗೆ ಎಂದೂ ಹೇಳಿಕೊಂಡಿಲ್ಲ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದರು. ಆದರೆ ಮನೆಯಲ್ಲಿದ್ದು ಎಲಿಮಿನೇಟ್ ಆಗಿರುವ ಸ್ಪರ್ಧಿಗಳು ಸಂದರ್ಶನಗಳಲ್ಲಿ ವರ್ತೂರ್ ಮತ್ತು ತನಿಷಾ ನಡುವೆ ಏನೂ ಇಲ್ಲ ಕೇವಲ ಸ್ನೇಹಿತರು ಎಂದು ಸ್ಪಷ್ಟನೆ ನೀಡುತ್ತಾ ಬಂದಿದ್ದಾರೆ. ಕಳೆದ ಎಪಿಸೋಡ್‌ನಲ್ಲಿ ತನಿಷಾ ಕಾಲಿಗೆ ಪೆಟ್ಟು ಮಾಡಿಕೊಂಡು ಚಿಕಿತ್ಸೆಗಾಗಿ ಹೊರ ಬಂದಿದ್ದಾರೆ. ಈ ಸಮಯದಲ್ಲಿ ವರ್ತೂರ್ ಮದುವೆ ಬಗ್ಗೆ ಮಾತನಾಡಿರುವುದಕ್ಕೆ ಟೀಕೆ ವ್ಯಕ್ತವಾಗುತ್ತಿದೆ. ತನಿಷಾ ಮುಂದೆ ಏನೂ ಹೇಳಿಲ್ಲ ಈಗ ಹೇಳಲು ಕಾರಣ ಕೇಳುತ್ತಿದ್ದಾರೆ. 

ಬಿಕ್ಕಿ ಬಿಕ್ಕಿ ಅತ್ತ ಸಂತೋಷ್; ತಾಯಿ ಕೊಟ್ಟ ಧೈರ್ಯದಿಂದ 'ಈಗ ಗೇಮ್ ಸ್ಟಾರ್ಟ್‌' ಎಂದ ವರ್ತೂರ್!

ಒಟ್ಟಾರೆ ಹಳ್ಳಿಕಾರ್ ವರ್ತೂರ್ ಸಂತೋಷ್ ಮದುವೆ ವಿಚಾರ ಬಾಯಿ ಬಿಟ್ಟರು.  

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ನನ್ನ ಶಿಷ್ಯನೆಂದು ಬಿಗ್ ಬಾಸ್ ಮನೆಯೊಳಗೆ ಯಾರನ್ನೂ ಕಳಿಸಿಲ್ಲ! ಕಿಚ್ಚ ಸುದೀಪ್ ಈ ಮಾತು ಹೇಳಿದ್ಯಾರಿಗೆ ಗೊತ್ತಾಯ್ತ?
BBK 12 : ಬಿಗ್ ಬಾಸ್‌ನಲ್ಲಿ ಗಿಲ್ಲಿ ಗಿಮಿಕ್, ದಾಖಲೆಯಾಯ್ತು ಇನ್ಸ್ಟಾ ಫಾಲೋವರ್ಸ್‌