ಹುಡುಗಿ ಯಾರೇ ಇರಲಿ, ಜಡೆ ಹೆಣೆಯುತ್ತಿರಲಿ.... ಕನಸಿನ ಕನ್ಯೆ ಕುರಿತು ಡ್ರೋನ್​ ಪ್ರತಾಪ್​ ಬಾಯಲ್ಲೇ ಕೇಳಿ...

Published : Feb 24, 2024, 05:44 PM ISTUpdated : Feb 24, 2024, 08:28 PM IST
ಹುಡುಗಿ ಯಾರೇ ಇರಲಿ,  ಜಡೆ ಹೆಣೆಯುತ್ತಿರಲಿ.... ಕನಸಿನ ಕನ್ಯೆ ಕುರಿತು ಡ್ರೋನ್​ ಪ್ರತಾಪ್​ ಬಾಯಲ್ಲೇ ಕೇಳಿ...

ಸಾರಾಂಶ

ತಾವು ಮದ್ವೆಯಾಗುವ ಹುಡುಗಿ ಹೇಗಿರಬೇಕು ಎಂಬ ಬಗ್ಗೆ ಸಾವಿರಾರು ಯುವತಿಯರ ಎದುರು ಬಿಗ್​ಬಾಸ್​ ಖ್ಯಾತಿಯ ಡ್ರೋನ್​ ಪ್ರತಾಪ್​  ಏನು ಹೇಳಿದ್ದಾರೆ ಕೇಳಿ...  

ಬಣ್ಣ ಯಾವುದಿದ್ರೂ ಪರ್ವಾಗಿಲ್ಲ ಸರ್​, ಆವಾವಾಗ ಜಡೆ ಹೆಣೆದುಕೊಳ್ತಿರ್ಬೇಕು... ನೋಡಿದ ತಕ್ಷಣ ಒಳ್ಳೆಯ ಹುಡುಗಿ ಅನ್ನಿಸಬೇಕು... ಅಪ್ಪ ನೋಡಿದ ಹುಡ್ಗಿಯನ್ನೇ ಮದ್ವೆಯಾಗೋದು. ಉಳಿದವರೆಲ್ಲರೂ ನನಗೆ ದೀದೀಗಳೇ ಎನ್ನುತ್ತಲೇ ಮದ್ವೆಯಾಗುವ ಹುಡುಗಿಯ ಬಗ್ಗೆ ಮಾತನಾಡಿದ್ದಾರೆ ಬಿಗ್​ಬಾಸ್​ ರನ್ನರ್​ ಅಪ್​ ಡ್ರೋನ್​ ಪ್ರತಾಪ್​. ಅಪ್ಪ ತುಂಬಾ ಕಷ್ಟಪಟ್ಟಿದ್ದಾರೆ. ಅದಕ್ಕಾಗಿ ಅವರ ಇಚ್ಛೆ ಮೀರಿ ನಾನು ಹೋಗಲ್ಲ. ಅವರು ಯಾವ ಹುಡುಗಿಯನ್ನು ಮದ್ವೆಯಾಗು ಅಂತಾರೋ ಅವರನ್ನೇ ಮದ್ವೆಯಾಗೋದು ಅನ್ನುತ್ತಲೇ ವೇದಿಕೆಯ ಮೇಲಿದ್ದ ಹುಡುಗಿಯರನ್ನೆಲ್ಲಾ ದೀದೀ ಎಂದೇ ಕರೆದರು ಡ್ರೋನ್​ ಪ್ರತಾಪ್​. ಪ್ರತಾಪ್​ರನ್ನು ಮದ್ವೆಯಾಗುವುದಾಗಿ ತಾವು ರೆಡಿ ಎಂದು ಹಲವಾರು ಯುವತಿಯರು ಕೈಎತ್ತಿದರೂ ಅವರನ್ನೆಲ್ಲಾ ದೀದಿ ಎಂದೇ ಕರೆದರು ಡ್ರೋನ್​.

ಇದು ನಡೆದದ್ದು ಹೊಸಪೇಟೆಯಲ್ಲಿ.   ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗ್ತಿರೋ ಕೆಂಡಸಂಪಿಗೆ ಸೀರಿಯಲ್​ ಜಾತ್ರೆ ಹೊಸಪೇಟೆಯಲ್ಲಿ ನಡೆದಿದ್ದು, ಅದರಲ್ಲಿ ಬಿಗ್​ಬಾಸ್​ನ ಕೆಲವು ಸ್ಪರ್ಧಿಗಳು ಭಾಗವಹಿಸಿದ್ದರು. ಅದರಲ್ಲಿ ಒಬ್ಬರು ಡ್ರೋನ್​ ಪ್ರತಾಪ್​.  ಬಿಗ್​ಬಾಸ್​ನ ವಿನಯ್​, ಕಾರ್ತಿಕ್​, ಸಂಗೀತಾ ಕೂಡ ಇದೇ ವೇದಿಕೆಯ ಮೇಲೆ ಪರ್ಫಾಮ್​ ಮಾಡಿದ್ದಾರೆ. ಈ ಸಮಯದಲ್ಲಿ ಫ್ಯಾನ್ಸ್​ ಇವರಿಗೆ ಹಲವಾರು ಪ್ರಶ್ನೆಗಳನ್ನು ಕೇಳಿದ್ದು, ನೀವೆಲ್ಲಾ ತುಂಬಾ ಇಷ್ಟ ಎಂದಿದ್ದಾರೆ. ಇದರಲ್ಲಿ ಗಮನ ಸೆಳೆದಿರುವುದು ಹೊಸಪೇಟೆಯ ಯುವತಿಯರು ಡ್ರೋನ್​ ಪ್ರತಾಪ್​ ಅವರಿಗೆ, ನೀವು ಎಂದರೆ ತುಂಬಾ ಇಷ್ಟ. ನಿಮ್ಮನ್ನು ಮದುವೆಯಾಗಲು ಬಂದಿದ್ದೇವೆ ಎಂದಿದ್ದಾರೆ. ಇದನ್ನು ಕೇಳಿ ಡ್ರೋನ್​ ಪ್ರತಾಪ್​ ನಾಚಿ ನೀರಾಗಿದ್ದಾರೆ. ಯೇ ಯೇ ಎನ್ನುತ್ತಲೇ ಯುವತಿಯರಿಂದ ದೂರ ಸರಿಸಲು ನೋಡಿದ್ದು, ಸಭಿಕರು ಬಿದ್ದೂ ಬಿದ್ದೂ ನಕ್ಕಿದ್ದಾರೆ. ಈ ಸಮಯದಲ್ಲಿ ಅವರಿಗೆ ಕನಸಿನ ಕನ್ಯೆ ಅರ್ಥಾತ್​ ಮದುವೆಯಾಗುವ ಹುಡುಗಿಯ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. ಆಗ ಅವರು ಹೀಗೆಲ್ಲಾ ಹೇಳಿದ್ದಾರೆ. ಬಿಗ್​ಬಾಸ್​ ಮನೆಯೊಳಕ್ಕೆ ಎಲ್ಲರನ್ನೂ ದೀದೀ ದೀದೀ ಎಂದು ಕರೆಯುವ ನಿಮ್ಮ ಬೀವಿ (ಪತ್ನಿ) ಹೇಗಿರಬೇಕು ಎಂದು ಪ್ರಶ್ನಿಸಿದಾಗ ಡ್ರೋನ್​ ಈ ಉತ್ತರ ಕೊಟ್ಟಿದ್ದಾರೆ. 

ಮದ್ವೆಯಾಗ್ತೇನಂತ ಪ್ರತಾಪ್​ ಬಳಿ ಹೊಸಪೇಟೆ ಯುವತಿಯರು! ನಾಚಿ ನೀರಾದ ಡ್ರೋನ್​ ಮಾಡಿದ್ದೇನು ನೋಡಿ...

ಅಷ್ಟಕ್ಕೂ  ಈಗ ಬಿಗ್​ಬಾಸ್​​ ಖ್ಯಾತಿಯ ಡ್ರೋನ್​ ಪ್ರತಾಪ್​ದ್ದೇ ಹವಾ. ಇವರಿಗಾಗಿ ಫ್ಯಾನ್ಸ್​ ಪೇಜ್​ ಅಸಂಖ್ಯ ಹುಟ್ಟುಕೊಂಡಿದೆ. ಪ್ರತಾಪ್​ ಎಲ್ಲಿ ಹೋದರೂ ಅದರ ಬಗ್ಗೆ ಅಪ್​ಡೇಟ್​ ಕೊಡುತ್ತಲೇ ಇರುತ್ತಾರೆ. ಅದೇ ರೀತಿ ಬಿಗ್​ಬಾಸ್​ ಮನೆಗೆ ಹೋಗಿ ಬಂದ ಮೇಲೆ ಇವರ ಅಭಿಮಾನಿಗಳ ಬಳಗ ಬಹುದೊಡ್ಡದಾಗಿಯೇ ಇದೆ. ವಿವಿಧ ಕ್ಷೇತ್ರಗಳ ಗಣ್ಯಾತಿಗಣ್ಯರನ್ನು ಮಾತಿನ ಮೋಡಿಯಲ್ಲಿ ಸಿಲುಕಿಸಿ ಮೋಸ, ವಂಚನೆ ಮಾಡಿರುವ ಗಂಭೀರ ಆರೋಪ ಎದುರಿಸುತ್ತಿದ್ದ ಡ್ರೋನ್​ ಪ್ರತಾಪ್​ಗೆ, ಬಿಗ್​ಬಾಸ್​ ಕೃಪೆಯಿಂದಾಗಿ ಅಭಿಮಾನಿಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದೆ. ಬಿಗ್​ಬಾಸ್​ನಲ್ಲಿ ರನ್ನರ್​ ಅಪ್​ ಆದ ಬಳಿಕ ಡ್ರೋನ್​ ಹೀರೋ ಆಗಿಬಿಟ್ಟಿದ್ದಾರೆ. ಯಾವುದೇ ಸ್ಟಾರ್​ ನಟರಿಗೂ ಕಡಿಮೆ ಇಲ್ಲದಂತೆ ಅದ್ಧೂರಿ ಸ್ವಾಗತ ಇವರಿಗೆ ಸಿಗುತ್ತಿದೆ. ಕೊನೆಯವರೆಗೂ ಬಿಗ್​ಬಾಸ್​ನಲ್ಲಿ ಇರುತ್ತೇನೆ. ಫಿನಾಲೆಯಲ್ಲಿ ಸುದೀಪ್​ ಅವರು ಎತ್ತಲು ಹಿಡಿಯುವ ಕೈಯಲ್ಲಿ ನನ್ನದೂ ಒಂದಾಗಿರುತ್ತದೆ ಎಂದು ಅಂದುಕೊಂಡಿರಲೇ ಇಲ್ಲ. ಮೊದಲ ವಾರದಲ್ಲಿಯೇ ಅಲ್ಲಿ ನಡೆದ ಕೆಲವು ಘಟನೆಗಳನ್ನು ನೋಡಿ ಶೀಘ್ರವೇ ಬಿಗ್​ಬಾಸ್​ನಿಂದ ಹೊರಕ್ಕೆ ಹೋಗುತ್ತೇನೆ ಅಂದುಕೊಂಡಿದ್ದೆ. ಆದರೆ ಎಲ್ಲರ ಆಶೀರ್ವಾದದಿಂದ ರನ್ನರ್​ ಅಪ್​ ಆದೆ ಎಂದು ಹೇಳಿಕೊಂಡಿರುವ ಡ್ರೋನ್​ ಪ್ರತಾಪ್​ ಅವರಿಗೆ ಬಿಗ್​ಬಾಸ್​ ಹೊಸದೊಂದೇ ಜೀವನ ಕೊಟ್ಟಿದೆ. 

ಈಚೆಗಷ್ಟ ಡ್ರೋನ್​ ಪ್ರತಾಪ್​ ಆಟೋ ಓಡಿಸಿದ್ದು, ಅದರ ವಿಡಿಯೋ ಅನ್ನು ಫ್ಯಾನ್ಸ್​ ಪೇಜ್​ ಶೇರ್​ ಮಾಡಿಕೊಂಡಿತ್ತು. ಆಟೋ ರಾಜ ಶಂಕರ್​ನಾಗ್​ ಅವರಿಗೆ ಜೈ ಎನ್ನುವ ಮೂಲಕ ಆಟೋ ಓಡಿಸುವ ಎಲ್ಲರಿಗೂ ಪ್ರತಾಪ್​ ಶುಭ ಹಾರೈಸಿದ್ದರು. ಇವರ ಈ ವಿಡಿಯೋಗೆ ಸಹಸ್ರಾರು ಮಂದಿ ಕಮೆಂಟ್​ ಮಾಡಿದ್ದು, ಹಲವರು ಮೆಚ್ಚುಗೆ ಸೂಚಿಸಿದ್ದರು. ನಿಮ್ಮ ಒಳ್ಳೆಯ ಗುಣ ನಿಮ್ಮನ್ನು ಕಾಪಾಡುತ್ತದೆ ಎಂದಿದ್ದರು. ಯಾರು ಏನೇ ಅಂದರೂ ಕ್ಯಾರೇ ಮಾಡಬೇಡಿ ಎಂದೆಲ್ಲಾ ಹೇಳಿದ್ದರು. ಆದರೆ ಒಂದಿಷ್ಟು ಮಂದಿ ಇವರ ಕಾಲೆಳೆದಿದ್ದರು.  ಇದಕದ್ಕೂ ಮೊದಲು  ಡ್ರೋನ್​ ಪ್ರತಾಪ್​ ಮಹಾದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದ್ದರು.  ಚಾಮರಾಜನಗರದ ಹನೂರು ತಾಲೂಕಿನಲ್ಲಿರುವ  ಮಹದೇಶ್ವರ ಬೆಟ್ಟಕ್ಕೆ  ಪ್ರತಾಪ್ ತೆರಳಿ ಆಶೀರ್ವಾದ ಪಡೆದಿದ್ದರು. ಈ ಸಂದರ್ಭದಲ್ಲಿ ಅವರು,  ಅನ್ನ ಪ್ರಸಾದವನ್ನು ಬರಿಯ ನೆಲದ ಮೇಲೆ ತಿಂದು ಹರಕೆ ತೀರಿಸಿದ್ದರು. ತಟ್ಟೆಯ ಸಹಾಯವಿಲ್ಲದೆ, ನೆಲದ ಮೇಲೆಯೇ ಸೇವಿಸಿದ್ದಾರೆ. ಇದರ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ಸಕತ್​ ಸೌಂಡ್​ ಮಾಡಿತ್ತು. 

ಸುಂಟರಗಾಳಿ ಪ್ರತಾಪ್​! ಒಂದ್ಸಲ ಆಗ್ಲಿಲ್ಲ... ಎರಡು ಸಲ ಆಗ್ಲಿಲ್ಲ ಎನ್ನುತ್ತಲೇ ಡ್ರೋನ್​ ಮಾಡಿದ್ರೊಂದು ಹೊಸ ಟ್ರಿಕ್ಸ್​!

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

BBK 12: ಪದೇ ಪದೇ ಕಿಚ್ಚ ಸುದೀಪ್‌ ಹೇಳ್ತಿರುವಂತೆ ರಜತ್‌ ವೈರಲ್ ವಿಡಿಯೋ ಅಸಲಿ ವಿಷಯ ಏನು? ಅಂಥದ್ದೇನಿದೆ?
ಏನೂ ಮಾಡದೆ ಸ್ಪಂದನಾ ಸೋಮಣ್ಣ Bigg Boss ಮನೇಲಿ ಇರೋದು ಹೇಗೆ? ಕಿಚ್ಚ ಸುದೀಪ್‌ ಬಿಚ್ಚಿಟ್ಟ ಸತ್ಯ ಏನು?